ಸೈನಿಕರು, ಉಗ್ರರಿಂದಲೂ ಜನರ ಹತ್ಯೆ: ದಿಗ್ವಿಜಯ್
Team Udayavani, Apr 17, 2017, 10:22 AM IST
ಹೊಸದಿಲ್ಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರು ಯೋಧರಿಂದ ಅಥವಾ ಉಗ್ರರಿಂದ ಹತ್ಯೆಗೀಡಾಗುತ್ತಾರೆ. ಈ ಮೂಲಕ ಎರಡೂ ಕಡೆಗಳಿಂದ ನಾಗರಿಕರು ತೊಂದರೆಗೆ ಈಡಾಗುತ್ತಿದ್ದಾರೆ. ಅವರ ಕುಟುಂಬವರು ಕಣ್ಣು, ಕೈ ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದರ ಜತೆಗೆ ಕಣಿವೆ ರಾಜ್ಯದಲ್ಲಿ ಬಿಜೆಪಿ-ಪಿಡಿಪಿ ಮೈತ್ರಿ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ರಾಜ್ಯದ ಜನರಲ್ಲಿ ಅಭದ್ರತೆ ಕಾಡಲಾರಂಭಿಸಿದೆ ಎಂದು ಹೇಳಿದ್ದಾರೆ. 2005ರಿಂದ 2013-14ನೇ ಸಾಲಿನ ವರೆಗೆ ರಾಜ್ಯದಲ್ಲಿ ಉತ್ತಮ ವಾತಾವರಣ ಇತ್ತು. ಈ ಸಾಧನೆ ಕಾಂಗ್ರೆಸ್ಗೆ ಸಲ್ಲುತ್ತದೆ ಎಂದು ಹೇಳಿದ್ದಾರೆ.
ಮಧ್ಯಪ್ರದೇಶದ ಮಾಜಿ ಸಿಎಂ ಹೇಳಿಕೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದ್ದು, ಸೇನೆಗೆ ಅಗೌರವ ತರುವ ಮಾತುಗಳನ್ನಾಡಿದ್ದಾರೆ. ಅವರು ಕ್ಷಮೆ ಕೋರಬೇಕೆಂದು ಒತ್ತಾಯಿ ಸಿದೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ ಕಾಂಗ್ರೆಸ್ ವರಿಷ್ಠ ಮಂಡಳಿ ವಿಚಾರದಿಂದ ದೂರ ಸರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್