ಸಾಲಿಸಿಟರ್ ಜನರಲ್ ರಂಜಿತ್ ರಾಜಿನಾಮೆ
Team Udayavani, Oct 21, 2017, 6:25 AM IST
ನವದೆಹಲಿ: ದಿಢೀರ್ ಬೆಳವಣಿಗೆಯೊಂದರಲ್ಲಿ ಭಾರತದ ಎರಡನೇ ಅತಿ ದೊಡ್ಡ ಕಾನೂನು ಅಧಿಕಾರಿ, ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ಅವರು ರಾಜೀನಾಮೆ ಸಲ್ಲಿಸಿರುವುದಾಗಿ ಅವರ ಆಪ್ತ ಮೂಲಗಳು ತಿಳಿಸಿವೆ.
2014ರಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಅದೇ ವರ್ಷ ಜೂನ್ನಲ್ಲಿ ರಂಜಿತ್ ಕುಮಾರ್ ಅವರು ಈ ಹುದ್ದೆಗೆ ನೇಮಕಗೊಂಡಿದ್ದರು. ಇತ್ತೀಚೆಗಷ್ಟೇ, ಅವರನ್ನು ಅದೇ ಹುದ್ದೆಯಲ್ಲಿ 2ನೇ ಅವಧಿಗೆ ಮುಂದುವರಿಸಲಾಗಿತ್ತು. ಕೆಲವು ತಿಂಗಳ ಹಿಂದೆ, ಸುಪ್ರೀ ಕೋರ್ಟ್ಗೆ ನ್ಯಾಯಾಧೀಶರನ್ನು ನೇಮಿಸುವ ಹೊಣೆ ಹೊತ್ತಿರುವ ಸುಪ್ರೀಂ ಕೋರ್ಟ್ ಕೊಲೀಜಿಯಂ, ನ್ಯಾಯಮೂರ್ತಿ ಹುದ್ದೆಗೆ ರಂಜಿತ್ ಕುಮಾರ್ ಅವರನ್ನು ಪರಿಗಣಿಸುತ್ತಿದೆ ಎಂಬ ವದಂತಿಗಳು ಹರಿದಾಡಿದ್ದವು. ಆನಂತರ ಆ ಸುದ್ದಿ ತಣ್ಣಗಾಗಿತ್ತು. ಆದರೀಗ, ರಂಜಿತ್ ಏಕಾಏಕಿ ತಮ್ಮ ಹುದ್ದೆ ತೊರೆದಿರುವುದು ಈ ಹಿಂದಿನ ಗಾಳಿ ಸುದ್ದಿಗೆ ಜೀವ ತುಂಬಿದೆ.
ಮುಕುಲ್ ರೋಹಟಗಿ ಅವರ ಬಳಿಕ ರಾಜೀನಾಮೆ ನೀಡುತ್ತಿರುವ ಎರಡನೇ ಕಾನೂನು ಅಧಿಕಾರಿ ರಂಜಿತ್ ಕುಮಾರ್. ಇತ್ತೀಚೆಗೆ, ಅಟಾರ್ನಿ ಜನರಲ್ ಮುಕುಲ್ ರೋಹಟಗಿ ಅವರನ್ನೂ ಅದೇ ಹುದ್ದೆಯಲ್ಲಿ ಎರಡನೇ ಅವಧಿಗೆ ಮುಂದುವರಿಸಲಾಗಿತ್ತು. ಆದರೆ, ರೋಹಟಗಿ ಸರ್ಕಾರಕ್ಕೆ ಪತ್ರ ಬರೆದು ತಮಗೆ ಎರಡನೇ ಅವಧಿಯಲ್ಲಿ ಮುಂದುವರಿಯುವ ಇಚ್ಛೆಯಿಲ್ಲ ಎಂದಿದ್ದರು. ಹಾಗಾಗಿ, ಅವರ ಸ್ಥಾನಕ್ಕೆ ಹಿರಿಯ ವಕೀಲ ಕೆ.ಕೆ. ವೇಣುಗೋಪಾಲ್ ಅವರನ್ನು ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು