ಬಾಬರಿ ಮಸೀದಿ: ಕೆಲವರು ಮೋದಿ ತಾಳಕ್ಕೆ ಕುಣಿಯುತ್ತಿದ್ದಾರೆ: ಓವೈಸಿ
Team Udayavani, Feb 12, 2018, 11:50 AM IST
ಹೈದರಾಬಾದ್ : ಮೌಲಾನಾ ಸಯ್ಯದ್ ಸಲ್ಮಾನ್ ನದ್ವೀ ಅವರನ್ನು ಪರೋಕ್ಷವಾಗಿ ಟೀಕಿಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು “ಕೆಲವು ವ್ಯಕ್ತಿಗಳು ಪ್ರಧಾನಿ ನರೇಂದ್ರ ಮೋದಿ ಅವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ ಮತ್ತು ಆ ಮೂಲಕ ಮುಸ್ಲಿಂ ಕಾನೂನು ಮಂಡಳಿಯಲ್ಲಿ ಒಡಕು ಸೃಷ್ಟಿಸುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಅಯೋಧ್ಯೆಯಲ್ಲಿನ ಬಾಬರಿ ಮಸೀದಿ – ರಾಮಜನ್ಮ ಭೂಮಿ ವಿವಾದಕ್ಕೆ ಸಂಬಂಧಿಸಿ ಅಖೀಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ಬಿ) ಸದಸ್ಯರಾಗಿರುವ ನದ್ವಿ ಅವರು “ಇಸ್ಲಾಂ ನಲ್ಲಿ ಮಸೀದಿ ಸ್ಥಳಾಂತರಿಸುವುದಕ್ಕೆ ಅವಕಾಶವಿದೆ’ ಎಂದು ಹೇಳಿದ್ದರು.
ಈ ಹೇಳಿಕೆಯನ್ನು ಖಂಡಿಸುತ್ತಾ ಓವೈಸಿ ಅವರು ಬಾಬರಿ ಮಸೀದಿಗೆ ಸಂಬಂಧಪಟ್ಟು ಯಾವದೇ ರಾಜಿ ಇಲ್ಲ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಪೇಕ್ಷೆಗೆ ಅನುಗುಣವಾಗಿ ನದ್ವೀ ಅವರು “ಮುಸ್ಲಿಮರು ಬಾಬರಿ ಮಸೀದಿ ಯನ್ನು ಬಿಟ್ಟುಕೊಡಬೇಕು’ ಎಂದು ಹೇಳುತ್ತಿದ್ದಾರೆ ಎಂದು ಓವೈಸಿ ಆರೋಪಿಸಿದರು.
‘ಮುಸ್ಲಿಮರು ಬಾಬರಿ ಮಸೀದಿಯನ್ನು ಬಿಟ್ಟುಕೊಡಬೇಕು ಎಂದು ಕರೆ ನೀಡುವ ಯಾರಿಗೇ ಆದರೂ ಮುಸ್ಮಿಮರು ಸಾಮಾಜಿಕ ಬಹಿಷ್ಕಾರ ಹಾಕಬೇಕು’ ಎಂದು ಓವೈಸಿ ಗುಡುಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ