LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Team Udayavani, Jun 9, 2024, 1:08 PM IST
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಈ ಬಾರಿ ದೊಡ್ಡ ಮುನ್ನಡೆ ಸಾಧಿಸಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಕೇಂದ್ರದಲ್ಲಿ ಇಂಡಿಯಾ ಬಣವು ಶೀಘ್ರದಲ್ಲೇ ಅಧಿಕಾರ ವಹಿಸಿಕೊಳ್ಳಬಹುದು ಎಂಬ ಸುಳಿವು ನೀಡಿದ್ದಾರೆ. “ಕೆಲವೊಮ್ಮೆ ಸರ್ಕಾರಗಳು ಕೇವಲ ಒಂದೇ ದಿನಕ್ಕೆ ಉರುಳುತ್ತದೆ ” ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಒಂದು ದಿನ ಮೊದಲು ಶನಿವಾರ ತೃಣಮೂಲ ಸಂಸದೀಯ ಪಕ್ಷದ ಸಭೆಯ ನಂತರ ಮಾತನಾಡಿದ ಬ್ಯಾನರ್ಜಿ, “ಕಾನೂನು ಬಾಹಿರವಾಗಿ ಮತ್ತು ಪ್ರಜಾಪ್ರಭುತ್ವಕ್ಕೆ ವಿರುದ್ದವಾಗಿ ಸರ್ಕಾರ ರಚನೆಯಾಗುತ್ತಿರುವ ಕಾರಣ ತಮ್ಮ ಪಕ್ಷವು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ” ಎಂದು ಹೇಳಿದರು.
ಪಿಎಂ ಮೋದಿ ಮತ್ತು ಬಿಜೆಪಿ ಈ ಬಾರಿ ಮಿತ್ರಪಕ್ಷಗಳ – ವಿಶೇಷವಾಗಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಮತ್ತು ನಿತೀಶ್ ಕುಮಾರ್ ಅವರ ಜೆಡಿಯು ಮೇಲೆ ಅವಲಂಬಿತವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಪಕ್ಷವು ಕೇವಲ 240 ಲೋಕಸಭಾ ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ, ಬಹುಮತಕ್ಕೆ 32 ರಷ್ಟು ಕಡಿಮೆಯಾಗಿದೆ. ಆದರೆ ಎನ್ ಡಿಎ ಮೈತ್ರಿಕೂಟ ಬಹುಮತ ಸಾಧಿಸಿದೆ.
“400 ಲೋಕಸಭಾ ಸ್ಥಾನಗಳ ಬಗ್ಗೆ ಮಾತನಾಡುವವರಿಗೆ ಸ್ವಂತವಾಗಿ ಸರಳ ಬಹುಮತವನ್ನು ಪಡೆಯಲು ಸಾಧ್ಯವಾಗಲಿಲ್ಲ. ಇಂಡಿಯಾ ಬಣ (ಸರ್ಕಾರ ರಚನೆಗೆ) ಹಕ್ಕು ಸಾಧಿಸದ ಕಾರಣ ಏನೂ ಆಗುವುದಿಲ್ಲ ಎಂದು ಯೋಚಿಸಬೇಡಿ. ನಾವು ಕಾಯುತ್ತಿದ್ದೇವೆ. ಏಕೆಂದರೆ ಅಂತಿಮವಾಗಿ ಹೊಸ ಇಂಡಿಯಾ ಸರ್ಕಾರ ಬರಲಿದೆ, ಕೆಲವೊಮ್ಮೆ ಸರ್ಕಾರಗಳು ಕೆಲವು ದಿನಗಳವರೆಗೆ ಮಾತ್ರ ಇರುತ್ತವೆ … ಏನು ಬೇಕಾದರೂ ಆಗಬಹುದು, ಯಾರಿಗೆ ಗೊತ್ತು.., ಈ ಸರ್ಕಾರವು 15 ದಿನಗಳಲ್ಲೇ ಅಂತ್ಯವಾಗಬಹುದು” ಎಂದು ಮಮತಾ ಹೇಳಿದರು.
ಬಿಜೆಪಿಯ ಮೇಲಿನ ತನ್ನ ದಾಳಿಯನ್ನು ಮುಂದುವರಿಸುತ್ತಾ, ಮಮತಾ ಬ್ಯಾನರ್ಜಿ, ಪೌರತ್ವ ತಿದ್ದುಪಡಿ ಕಾಯ್ದೆ (CAA) ಸೇರಿದಂತೆ “ವಿವೇಚನಾರಹಿತ ಶಕ್ತಿ ಬಳಸಿ ಜಾರಿಗೆ ತಂದ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.