ಐಐಟಿ ಪ್ರಶಸ್ತಿ: ಸೋಮನಾಥ್ ಭಾರ್ತಿ-ಚೇತನ್ ಭಗತ್ ಟ್ವಿಟರ್ ಸಮರ
Team Udayavani, Sep 8, 2018, 3:39 PM IST
ಹೊಸದಿಲ್ಲಿ : ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಇದರ 2018ರ ಪ್ರತಿಭಾವಂತ ಹಳೆ ವಿದ್ಯಾರ್ಥಿ ಪ್ರಶಸ್ತಿ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದು ಹಾಕಿರುವ ಬಗ್ಗೆ ಕಿಡಿ ಕಾರಿರುವ ಆಮ್ ಆದ್ಮಿ ಪಕ್ಷದ ವಿವಾದಾತ್ಮಕ ನಾಯಕ ಸೋಮನಾಥ್ ಭಾರ್ತಿ ಅವರು ‘ದೇಶದ ಪ್ರತಿಷ್ಠಿತ ವಿದ್ಯಾಲಯವು ಆಳುವ ಬಿಜೆಪಿಯ ಒತ್ತಡಕ್ಕೆ ಗುರಿಯಾಗಿರುವ ಕಾರಣ ತನಗೆ ಪ್ರಶಸ್ತಿ ತಪ್ಪುವಂತಾಗಿದೆ’ ಎಂದು ಆರೋಪಿಸಿದ್ದಾರೆ.
ಇದೇ ವೇಳೆ ಈ ಪ್ರಶಸ್ತಿಗೆ ಪಾತ್ರರಾಗಿರುವ ಖ್ಯಾತ ಲೇಖಕ ಚೇತನ್ ಭಗತ್ ಅವರನ್ನು ಭಾರ್ತಿ ವ್ಯಂಗ್ಯದಿಂದ ಟ್ವಿಟರ್ನಲ್ಲಿ ಅಭಿನಂದಿಸಿದ್ದಾರೆ. ಹಾಗಾಗಿ ಟ್ವಿಟರ್ನಲ್ಲೀಗ ಉಭಯತರ ನಡುವೆ ವಾಕ್ಸಮರ ನಡೆಯುತ್ತಿದೆ.
“ನಾನೊಬ್ಬ ರಾಜಕಾರಣಿ ಎಂಬ ಕಾರಣಕ್ಕೆ ನನ್ನ ಹೆಸರನ್ನು ಪಟ್ಟಿಯಿಂದ ಹೊರಗಿಡಲಾಗಿದೆಯಾದರೆ ಇದೇ ಕಾರಣಕ್ಕೆ ಕೇಂದ್ರ ಸಹಾಯಕ ಸಚಿವ ಜಯಂತ್ ಸಿನ್ಹಾ ಅವರನ್ನು ಕೂಡ ಪಟ್ಟಿಯಿಂದ ಹೊರಗಿಡಬೇಕಾಗಿತ್ತು; ಆದರೆ ಹಾಗೆ ಮಾಡಲಾಗಿಲ್ಲ’ ಎಂದು ಸೋಮನಾಥ್ ಭಾರ್ತಿ ತಮ್ಮ ಆಕ್ರೋಶವನ್ನು ಹೊರಗೆಡಹಿದ್ದಾರೆ.
ಭಾರ್ತಿ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಚೇತನ್ ಭಗತ್, “ಪ್ರಶಸ್ತಿಗೆ ನೀವೂ ಅರ್ಹರೆಂದು ನನಗೆ ಚೆನ್ನಾಗಿ ಗೊತ್ತಿದೆ; ಆದರೆ ನೀವು ಐಐಟಿ ಮತ್ತು ಪ್ರಶಸ್ತಿ ವಿಜೇತರ ಹೆಸರನ್ನು ಹಾಳು ಮಾಡುತ್ತಿದ್ದೀರಿ. ಐಐಟಿ ಆಯ್ಕೆ ನ್ಯಾಯೋಚಿತವಾಗಿಯೇ ಇದೆ; ಒಂದು ವಿದ್ಯಾಲಯದ ಆಂತರಿಕ ಪ್ರಶಸ್ತಿಯಲ್ಲಿ ಆಳುವ ಬಿಜೆಪಿಗೆ ಯಾವುದೇ ಮಹತ್ವ ಇರುವುದಿಲ್ಲ’ ಎಂದು ಮರು ಟ್ವೀಟ್ ಮಾಡಿದ್ದಾರೆ.
ಅಂದ ಹಾಗೆ ಚೇತನ್ ಭಗತ್ ಅವರ ಮುಂದಿನ ಪುಸ್ತಕ “ದಿ ಗರ್ಲ್ ಇನ್ ರೂಮ್ 105 – ಆ್ಯನ್ ಅನ್ ಲವ್ ಸ್ಟೋರಿ’ ಅಕ್ಟೋಬರ್ನಲ್ಲಿ ಬಿಡುಗಡೆಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ