ಪ್ರಧಾನಿ ಮೋದಿ ಭಾಷಣದಿಂದ ಬಡವರ ಖಾಲಿ ಹೊಟ್ಟೆ ತುಂಬದು: ಸೋನಿಯಾ


Team Udayavani, May 8, 2018, 7:14 PM IST

Sonia-Bijapur-700.jpg

ವಿಜಯಪುರ : ”ಪ್ರಧಾನಿ ನರೇಂದ್ರ ಮೋದಿ ಅವರ ರಂಗುರಂಗಿನ ಭಾಷಣದಿಂದ ಬಡವರ ಖಾಲಿ ಹೊಟ್ಟೆಗಳು ತುಂಬುವುದಿಲ್ಲ” ಎಂದು ಕಾಂಗ್ರೆಸ್‌ ನಾಯಕಿ, ಯುಪಿಎ ಅಧ್ಯಕ್ಷೆ  ಸೋನಿಯಾ ಗಾಂಧಿ ಹೇಳಿದ್ದಾರೆ.

ಸರಿ ಸುಮಾರು ಎರಡು ವರ್ಷಗಳ ಬಳಿಕ ಚುನಾವಣಾ ಪ್ರಚಾರ ಕಣಕ್ಕೆ ಇಳಿದ ಸೋನಿಯಾ ಗಾಂಧಿ ಅವರು ಇಂದಿಲ್ಲಿ ನಡೆದ ಕಾಂಗ್ರೆಸ್‌ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಾ, “ಮೋದಿ ಜೀ ಅವರಿಗೆ ತಾನೋರ್ವ ಅತ್ಯುತ್ತಮ ಭಾಷಣಕಾರ ಎಂಬ ಬಗ್ಗೆ ಹೆಮ್ಮೆ ಇದ್ದಂತಿದೆ. ನಾನದನ್ನು ಒಪ್ಪುತ್ತೇನೆ. ಅವರೊಬ್ಬ ನಟನ ಹಾಗೆ ಮಾತನಾಡುತ್ತಾರೆ; ಅವರ ಭಾಷಣಗಳಿಂದ ಒಂದೊಮ್ಮೆ ದೇಶದ ಬಡಜನರ ಹೊಟ್ಟೆ ತುಂಬುವುದಾದರೆ ನಾನು ನಿಜಕ್ಕೂ ಸಂತಸ ಪಡುತ್ತೇನೆ; ಆದರೆ ಭಾಷಣಗಳಿಂದ ಯಾವತ್ತೂ ಹೊಟ್ಟೆ ತುಂಬುವುದಿಲ್ಲ ಎನ್ನುವುದು ಪರಮ ಸತ್ಯ. ಹಸಿದ ಬಡ ಜನರಿಗೆ ಆಹಾರ ಬೇಕೇ ಹೊರತು ರಂಗುರಂಗಿನ ಭಾಷಣ ಅಲ್ಲ” ಎಂದು ಹೇಳಿದರು. 

ಪ್ರಧಾನಿ ಮೋದಿ ವಿರುದ್ಧ ತನ್ನ ವಾಕ್‌ ದಾಳಿಯನ್ನು ಮುಂದುವರಿಸುತ್ತಾ ಸೋನಿಯಾ ಅವರು “ಬರ ಪೀಡಿತ ಎಲ್ಲ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಕ್ತ ಪರಿಹಾರ ನೀಡಿದೆ; ಆದರೆ ಕರ್ನಾಟಕಕ್ಕೆ ಮಾತ್ರ ನೀಡಿಲ್ಲ. ಕೇಂದ್ರದ ಈ ನೀತಿಯಿಂದ ಕರ್ನಾಟಕ ರಾಜ್ಯದ ರೈತರ ಗಾಯಕ್ಕೆ ಉಪ್ಪು ಸವರಿದಂತಾಗಿದೆ; ನಾನು ಮೋದಿ ಅವರನ್ನು ಕೇಳುತ್ತೇನೆ : ಇದೇ ನಿಮ್ಮ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌ ಆಗಿದೆಯಾ?’ ಎಂದು ಹೇಳಿದರು. 

“ಪ್ರಧಾನಿ ಮೋದಿ ಅವರು ‘ಕಾಂಗ್ರೆಸ್‌ ಮುಕ್ತ ಭಾರತ’ ಬಗ್ಗೆ ಅತಿಯಾದ ವಾಂಛೆ ಬೆಳೆಸಿಕೊಂಡಿದ್ದಾರೆ. ಕಾಂಗ್ರೆಸ್‌ ಮುಕ್ತ ಭಾರತ ಬಿಡಿ; ಮೋದಿ ಅವರು ತಮ್ಮ ಎದುರು ನಿಲ್ಲುವ ಯಾರನ್ನೂ ಸಹಿಸಿಕೊಳ್ಳುವುದಿಲ್ಲ” ಎಂದು ಸೋನಿಯಾ ಆರೋಪಿಸಿದರು. 

ಜನರು ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಬೇಕೆಂದು ಕೋರಿದ ಸೋನಿಯಾ, “ಕಾಂಗ್ರೆಸ್‌ ಕರ್ನಾಟಕದ ಅಭಿವೃದ್ಧಿಗಾಗಿ ಶ್ರಮಿಸಿದೆ. ಕೇಂದ್ರ ಸರಕಾರ ತನ್ನ ಅಧಿಕಾರದಲ್ಲಿಲ್ಲದ ರಾಜ್ಯಗಳತ್ತ ಪಕ್ಷಪಾತ ಮಾಡುತ್ತಿದೆ. ಕಾಂಗ್ರೆಸ್‌ ಪಕ್ಷ ಕರ್ನಾಟಕವನ್ನು ಅನೇಕ ಅಭಿವೃದ್ಧಿ ವಿಷಯಗಳಲ್ಲಿ ನಂಬರ್‌ ಒನ್‌ ರಾಜ್ಯವನ್ನಾಗಿ ಮಾಡಿದೆ; ನಾವೆಲ್ಲ ಜತೆಗೂಡಿ ಈ ಸಾಧನೆಯನ್ನು ಮುಂದುವರಿಸೋಣ’ ಎಂದು ಹೇಳಿದರು.  

ಟಾಪ್ ನ್ಯೂಸ್

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.