ಕಾಂಗ್ರೆಸ್ ಚುನಾವಣಾ ಸಮಿತಿಯಲ್ಲಿ ರಾಜ್ಯದ ನಾಲ್ವರ ನೇಮಕ
ಸ್ಥಾನಪಡೆದ ಖರ್ಗೆ, ಜೈರಾಮ್, ಸುನೀಲ್, ಜಾರ್ಜ್, ಸಲೀಂ
Team Udayavani, May 25, 2022, 7:00 AM IST
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಚುನಾವಣಾ ವ್ಯೂಹರಚನೆಕಾರ ಪ್ರಶಾಂತ್ ಕಿಶೋರ್ ಅವರಿಗೆ ಪೂರ್ಣ ಪ್ರಮಾಣದ ನೇತೃತ್ವದ ನೀಡಲು ನಿರಾಕರಿಸಿತ್ತು ನಿಜ. ಆದರೆ, ಅವರ ಮಾಜಿ ನಿಕಟವರ್ತಿ ಕರ್ನಾಟಕ ಮೂಲದ ಸುನೀಲ್ ಕಾನುಗೋಲು ಅವರಿಗೆ ಚುನಾವಣಾ ರಣತಂತ್ರ ರಚನೆಯ ಹೊಣೆ ನೀಡಲಾಗಿದೆ.
ಮಹತ್ವದ ಅಂಶವೆಂದರೆ ಮೂರು ಸಮಿತಿಗಳಲ್ಲಿ ಕರ್ನಾಟಕದ ನಾಲ್ವರು ಮುಖಂಡರು ಸ್ಥಾನ ಪಡೆದುಕೊಂಡಿದ್ದಾರೆ, ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚನೆ ಮೇರೆ ತಲಾ ಎಂಟು ಸದಸ್ಯರಿರುವ ಮೂರು ಸಮಿತಿಗಳನ್ನು ರಚನೆ ಮಾಡಲಾಗಿದೆ.
ರಾಜಕೀಯ ವ್ಯವಹಾರಗಳ ಸಮಿತಿ, 2024ನೇ ಚುನಾವಣೆಗಾಗಿನ ಟಾಸ್ಕ್ಫೋರ್ಸ್, ಭಾರತ್ ಜೋಡೋ ಯಾತ್ರೆಗಾಗಿ ಕೇಂದ್ರೀಯ ಯೋಜನೆ ಮತ್ತು ಸಮನ್ವಯ ಸಮಿತಿ ರಚಿಸಲಾಗಿದೆ.
ಸುನೀಲ್ ಕಾನುಗೋಲು ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ನ ಚುನಾವಣಾ ರಣತಂತ್ರ ರೂಪಿಸುವ ಹೊಣೆಯನ್ನೂ ಹೊತ್ತಿದ್ದಾರೆ.
ರಾಜಕೀಯ ವ್ಯವಹಾರಗಳ ಸಮಿತಿಯಲ್ಲಿ ಕಾಂಗ್ರೆಸ್ನ ಭಿನ್ನಮತೀಯ ಗುಂಪು “ಜಿ-23’ರ ಗುಂಪಿನ ನಾಯಕ ಗುಲಾಂ ನಬಿ ಆಜಾದ್, ಆನಂದ ಶರ್ಮ ಪ್ರಮುಖವಾಗಿ ಸ್ಥಾನಪಡೆದಿದ್ದಾರೆ. ಇನ್ನುಳಿದಂತೆ ಸಮಿತಿಯಲ್ಲಿ ಕಾಂಗ್ರೆಸ್ನ ಮಾಜಿ ಅಧಕ್ಷ ರಾಹುಲ್ ಗಾಂಧಿ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ.
ಜಿ 23ರ ಸದಸ್ಯರಿಲ್ಲ:
ಮುಂದಿನ ಲೋಕಸಭೆ ಚುನಾವಣೆಗಾಗಿ ವ್ಯೂಹರಚನೆ ಮಾಡಲು ರಚಿಸಲಾಗಿರುವ ಸಮಿತಿಯಲ್ಲಿ “ಜಿ-23′ ಮುಖಂಡರಿಗೆ ಅವಕಾಶ ನೀಡಲಾಗಿಲ್ಲ. ಅದಕ್ಕೆ ಪಿ.ಚಿದಂಬರಂ ನೇತೃತ್ವ ವಹಿಸಿದ್ದಾರೆ. ಕರ್ನಾಟಕ ಮೂಲದ ಸುನೀಲ್ ಕಾನುಗೋಲು, ಜೈರಾಮ್ ರಮೇಶ್, ಪ್ರಿಯಾಂಕಾ ವಾದ್ರಾ ಸ್ಥಾನಪಡೆದಿದ್ದಾರೆ.
ಇಬ್ಬರಿಗೆ ಸ್ಥಾನ:
ಕಾಂಗ್ರೆಸ್ನ “ಭಾರತ್ ಜೋಡೋ ಯಾತ್ರಾ’ ಸಮಿತಿಯಲ್ಲಿ ಕರ್ನಾಟಕದ ಇಬ್ಬರು ಕಾಂಗ್ರೆಸ್ ಮುಖಂಡರಿಗೆ ಸ್ಥಾನ ಲಭಿಸಿದೆ. ಕರ್ನಾಟಕದ ಮಾಜಿ ಗೃಹ ಸಚಿವ, ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್, ವಿಧಾನಪರಿಷತ್ ಸದಸ್ಯ ಸಲೀಂ ಅಹ್ಮದ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಸಮಿತಿಗೆ ಮಧ್ಯಪ್ರದೇಶದ ಮಾಜಿ ಸಿಎಂ ದಿಗ್ವಿಜಯ ಸಿಂಗ್ ನೇತೃತ್ವ ವಹಿಸಿದ್ದಾರೆ. ಈ ಸಮಿತಿ ಅ.2ರಿಂದ ದೇಶಾದ್ಯಂತ ಯಾತ್ರೆ ಶುರು ಮಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ