Air Pollution: ಹೆಚ್ಚಿದ ವಾಯುಮಾಲಿನ್ಯ… ದೆಹಲಿಯಿಂದ ಜೈಪುರಕ್ಕೆ ತೆರಳಿದ ಸೋನಿಯಾ ಗಾಂಧಿ
Team Udayavani, Nov 15, 2023, 9:02 AM IST
ನವದೆಹಲಿ: ದೆಹಲಿಯಲ್ಲಿ ವಾಯುಮಾಲಿನ್ಯಡಾ ಸ್ಥಿತಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ ಅದೂ ಅಲ್ಲದೆ ದೀಪಾವಳಿ ಹಬ್ಬದ ಬಳಿಕ ದೆಹಲಿಯ ವಾತಾವರಣದಲ್ಲಿ ಮಾಲಿನ್ಯತೆ ಮತ್ತಷ್ಟು ಹೆಚ್ಚಾಗತೊಡಗಿದೆ ಪರಿಣಾಮ ಈಗಾಗಲೇ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರೋಗ್ಯದ ದೃಷ್ಟಿಯಿಂದ ದೆಹಲಿಯಿಂದ ಜೈಪುರಕ್ಕೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಾಯುಮಾಲಿನ್ಯದಿಂದ ಹದಗೆಟ್ಟ ದೆಹಲಿಯ ವಾತಾವರಣ ಜನಜೀವನದ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎನ್ನಲಾಗಿದೆ ಪರಿಣಾಮ ಈ ಬಾರಿ ದೀಪಾವಳಿಗೆ ದೆಹಲಿಯಲ್ಲಿ ಪಟಾಕಿ ನಿಷೇಧ ಹೇರಲಾಗಿತ್ತು ಈಗಾಗಲೇ ವಾಯುಮಾಲಿನ್ಯದಿಂದ ಆವೃತವಾಗಿರುವ ದೆಹಲಿಗೆ ದೀಪಾವಳಿಯ ಸಮಯದಲ್ಲಿ ಮತ್ತಷ್ಟು ವಾತಾವರಣ ಕಲುಷಿತಗೊಳ್ಳುವ ನಿಟ್ಟಿನಲ್ಲಿ ಪಟಾಕಿ ನಿಷೇಧ ಹೇರಲಾಗಿತ್ತು.
ಈಗಾಗಲೇ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಸೋನಿಯಾ ಗಾಂಧಿ ಅವರು ತಮ್ಮ ಆರೋಗ್ಯದ ಹಿತ ದೃಷ್ಟಿಯಿಂದ ವೈದ್ಯರು ಹಾಗೂ ಕುಟುಂಬದ ಸದಸ್ಯರ ಸಲಹೆಯ ಮೇರೆಗೆ ಸ್ವಲ್ಪ ದಿನದ ಮಟ್ಟಿಗೆ ದೆಹಲಿಯಿಂದ ಹೊರಗೆ ಉಳಿಯಲು ಬಯಸಿದ್ದಾರೆ ಅದರಂತೆ ಸೋನಿಯಾ ಗಾಂಧಿ ಜೈಪುರಕ್ಕೆ ತೆರಳಿದ್ದಾರೆ, ವಾಯುಮಾಲಿನ್ಯ ತಿಳಿಯಾದ ಬಳಿಕ ದೆಹಲಿಗೆ ಹಿಂತಿರುಗಳಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: India vs New Zealand ಸೆಮಿಫೈನಲ್ ಪಂದ್ಯ ವೀಕ್ಷಿಸಲು ಮುಂಬಯಿಗೆ ಬಂದಿಳಿದ ಸೂಪರ್ ಸ್ಟಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ