ಕಳಪೆ ಸಾಧನೆಗೆ ಸೋನಿಯಾ ಬೇಸರ
Team Udayavani, May 8, 2021, 6:40 AM IST
ಹೊಸದಿಲ್ಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಸಾಧನೆ ತುಂಬಾ ಬೇಸರ ತಂದಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.
ಹೊಸದಿಲ್ಲಿಯಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಸಂಸದೀಯ ಸಮಿತಿಯ ವರ್ಚ್ಯುವಲ್ ಸಭೆಯಲ್ಲಿ ಮಾತನಾಡಿದ ಅವರು, ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಬೇಸರ ತರಿಸಿದೆ.
ಇಂಥ ಕಳಪೆ ಸಾಧನೆಯನ್ನು ನಾನು ನಿರೀಕ್ಷಿಸಿರಲಿಲ್ಲ. ಪ್ರತೀ ರಾಜ್ಯದಲ್ಲಿರುವ ಕಾಂಗ್ರೆಸ್ ಸಂಸದರು ಇದರಿಂದ ಪಾಠ ಕಲಿಯಬೇಕಾಗಿದೆ. ಸದ್ಯದಲ್ಲೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ಜರಗಲಿದ್ದು, ಪಕ್ಷದ ದಯನೀಯ ಸೋಲಿನ ಆತ್ಮವಿಮರ್ಶೆ ಮಾಡಲಾಗುವುದು ಎಂದಿದ್ದಾರೆ. “ದೇಶದಲ್ಲಿ ಕೊರೊನಾ ಸ್ಥಿತಿ ಹದಗೆಡಲು ಸಹಾನುಭೂತಿ ಇಲ್ಲದ ಕೇಂದ್ರ ಸರಕಾರವೇ ಕಾರಣ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
ನೀವು ಬದುಕಿದ್ದಾಗಲೂ, ಸತ್ತಾಗಲೂ ಲೂಟಿ ಮಾಡುವುದೇ ಕಾಂಗ್ರೆಸ್ನ ಮಂತ್ರ: ಮೋದಿ