ಆರೋಗ್ಯ ಕಾರ್ಯಕರ್ತರಿಗೆ ಸಲ್ಯೂಟ್; ಕೇಂದ್ರ, ರಾಜ್ಯ ಸರ್ಕಾರಗಳ ಆದೇಶ ಪಾಲಿಸಿ: ಸೋನಿಯಾ ಗಾಂಧಿ
Team Udayavani, Apr 14, 2020, 8:09 AM IST
ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಹೊಡೆದೋಡಿಸಲು ತಮ್ಮೆಲ್ಲಾ ಶಕ್ತಿ ಸಾಮಾರ್ಥ್ಯ ಮೀರಿ ಶ್ರಮಿಸುತ್ತಿರುವ ವೈದ್ಯರು, ನೈರ್ಮಲ್ಯ ಕಾರ್ಮಿಕರು, ಪೊಲೀಸರು ಮತ್ತು ಈ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರನ್ನು ವೀಡಿಯೊ ಸಂದೇಶದ ಮೂಲಕ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಶ್ಲಾಘಿಸಿದ್ದಾರೆ. ಮಾತ್ರವಲ್ಲದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡುವ ಕೆಲವೇ ಗಂಟೆಗಳ ಮೊದಲು, ವಿಡಿಯೋ ಸಂದೇಶ ನೀಡಿದ ಸೋನಿಯಾ ಗಾಂಧಿ ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ವೈದ್ಯರು, ಪೊಲೀಸರು ಸೇರಿದಂತೆ ಸರ್ಕಾರಿ ಅಧಿಕಾರಿಗಳು ತೋರಿಸಿದ ಹಠಕ್ಕಿಂತ ದೊಡ್ಡ ದೇಶಭಕ್ತಿ ಇಲ್ಲ. ಆರೋಗ್ಯ ಬಿಕ್ಕಟ್ಟನ್ನು ನಾವು ಏಕತೆ, ಶಿಸ್ತು ಮತ್ತು ಆತ್ಮ ವಿಶ್ವಾಸದಿಂದ ಸೋಲಿಸುತ್ತೇವೆ. ತಾಳ್ಮೆ ಮತ್ತು ಪರಿಶ್ರಮಕ್ಕಾಗಿ ದೇಶವಾಸಿಗಳಿಗೆ ಧನ್ಯವಾದಗಳು ಈ ವೇಳೆ ತಿಳಿಸಿದರು.
ಸಂಪನ್ಮೂಲಗಳ ಕೊರತೆಯ ಹೊರತಾಗಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೋವಿಡ್ 19 ವಿರುದ್ಧ ಹೋರಾಡುತ್ತಿವೆ. ಈ ಯುದ್ಧವನ್ನು ಗೆಲ್ಲಲು ಜನರು ಸರ್ಕಾರಗಳೊಂದಿಗೆ ಸಹಕರಿಸಬೇಕು. ಜನರು ಮನೆಯೊಳಗೆ ಇದ್ದು ಲಾಕ್ ಡೌನ್ ನಿಯಮ ಪಾಲಿಸಬೇಕು.
ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರ ಮೇಲಿನ ದಾಳಿ ನಿಜಕ್ಕೂ ಖಂಡನಿಯ. ಇಂತಹ ಘಟನೆ ಮರುಕಳಿಸಬಾರದು ಎಂದು ಈ ವೇಳೆ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?