ಕೋವಿಡ್ 19 : ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಸೋನಿಯಾ ಸಭೆ
Team Udayavani, Apr 10, 2021, 10:45 AM IST
ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ, ತಮ್ಮ ಆಡಳಿತವಿರುವ ರಾಜ್ಯದ ಮುಖ್ಯಮಂತ್ರಿಯವರೊಂದಿಗೆ ರಾಜ್ಯದ ಕೋವಿಡ್ ಪರಿಸ್ಥಿತಿಯನ್ನು ಅರಿತುಕೊಳ್ಳಲು ಇಂದು(ಏ.10) ವೀಡಿಯೊ ಸಂವಾದವನ್ನು ಆಯೋಜಿಸಿದೆ.
ವೀಡಿಯೊ ಸಂವಾದದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದು, ಅಲ್ಲಿನ ಕೋವಿಡ್ ಪರಿಸ್ಥಿತಿಯ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ ಎಂಬುವುದನ್ನು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಈ ನಡುವೆ ಮಹಾರಾಷ್ಟ್ರ, ಒಡಿಶಾ, ಆಂದ್ರ ಪ್ರದೆಶ, ಪಂಜಾಬ್, ರಾಜಸ್ಥಾನ, ಉತ್ತರ ಪ್ರದೇಶ ಹಾಗೂ ಉತ್ತರಖಂಡ್ ಹಾಗೂ ಬಿಹಾರ್ ಸೇರಿ ಕೆಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆಯ ಕೊರತೆ ಕಂಡುಬಂದಿದೆ.
ಓದಿ : ಹೋ ಮಿಯೋಪತಿ : ಸುರಕ್ಷಿತ, ಪರಿಣಾಮಕಾರಿ ಪರ್ಯಾಯ ವೈದ್ಯಕೀಯ ಪದ್ಧತಿ
ದೇಶದಲ್ಲಿ ಕೋವಿಡ್ ಲಸಿಕೆಯ ಕೊರತೆ ಇರುವಾಗ ಲಸಿಕೆಗಳನ್ನು ವಿದೇಶಗಳಿಗೆ ಕಳುಹಿಸುತ್ತಿರುವುದು ಪ್ರಚಾರ ಗಳಿಸಿಕೊಳ್ಳುವ ಪ್ರಯತ್ನವೇ..? ಎಂದು ರಾಹುಲ್ ಗಾಂಧಿ ಮೋದಿಯವರನ್ನು ಟೀಕೆ ಮಾಡಿದ್ದಾರೆ.
ಇನ್ನು, ನಿನ್ನೆ ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದುಕೊಂಡಿರುವ ರಾಹುಲ್ ಗಾಂಧಿ, ಕೋವಿಡ್ ಸೋಂಕಿನ ಕೊರತೆ ಇದೆ. ಕೋವಿಡ್ ಲಸಿಕೆಯ ಕೊರತೆ ದೇಶದ ಒಂದು ಗಂಭೀರ ಸಮಸ್ಯೆ. ಅದು ಉತ್ಸವ ಅಲ್ಲ ಎಂದು ಕೋವಿಡ್ ಸೋಂಕಿನ ಎರಡನೇ ಅಲೆ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದವನ್ನು ನಡೆಸಿ ಏಪ್ರಿಲ್ 11 ಹಾಗೂ 14 ರ ನಡುವೆ ದೇಶವ್ಯಾಪಿ ಲಸಿಕೆ ಉತ್ಸವವನ್ನು ಆಚರಿಸಲು ಕರೆ ನೀಡಿರುವುದಕ್ಕೆ ಪ್ರತಿಯಾಗಿ ಆಕ್ರೋಶ ವ್ಯಕ್ತ ಪಡಿಸಿದ್ದರು.
ಈ ಸಂಬಂಧ ರಾಹುಲ್ ಗಾಂಧಿ, ಮೋದಿ ಅವರಿಗೆ ಪತ್ರ ಬರೆದಿದ್ದು, ಲಸಿಕೆಗಳ ರಫ್ತು, ಇತರ ಲಸಿಕೆಗಳಿಗೆ ತ್ವರಿತ ಅನುಮೋದನೆ ಮತ್ತು ಅಗತ್ಯವಿರುವ ಎಲ್ಲರಿಗೂ ಲಸಿಕೆ ಒದಗಿಸುವಂತೆ ಕೋರಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ತಿಳಿಸಿದ್ದಾರೆ
ನಮ್ಮ ರಾಷ್ಟ್ರವು ಲಸಿಕೆ ಸಮಸ್ಯೆಯನ್ನು ಎದುರಿಸುತ್ತಿರುವಾಗ, 6 ಕೋಟಿಗಿಂತಲೂ ಹೆಚ್ಚಿನ ಪ್ರಮಾಣದ ಲಸಿಕೆಗಳನ್ನು ರಫ್ತು ಮಾಡಲಾಗಿದೆ … ಲಸಿಕೆಗಳ ರಫ್ತು ಕೂಡ ಪ್ರಚಾರವನ್ನು ಗಳಿಸುವ ಪ್ರಯತ್ನವಾಗಿದೆಯೇ ? ವಿನಾಶಕಾರಿ ಕೋವಿಡ್ ಸೋಂಕಿನ ಎರಡನೇ ಅಲೆಯ ಸಂದರ್ಭದಲ್ಲಿ ಹಲವರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ದುರ್ಬಲ ವರ್ಗಗಳಿಗೆ ನೇರ ಆದಾಯದ ಬೆಂಬಲವನ್ನು ಒದಗಿಸಿ “ಎಂದು ರಾಹುಲ್ ಗಾಂಧಿ ತಮ್ಮ ಪತ್ರದಲ್ಲಿ ಬರೆದಿದ್ದಾರೆ.
ಇನ್ನು, ಈ ಸಂದರ್ಭದಲ್ಲಿ, ನಾವು 3 ತಿಂಗಳಲ್ಲಿ ಶೇಕಡಾ 1 ಕ್ಕಿಂತ ಕಡಿಮೆ ಜನರಿಗೆ ಸಂಪೂರ್ಣವಾಗಿ ಲಸಿಕೆ ಹಾಕುವಲ್ಲಿ ವಿಫಲರಾಗಿದ್ದೇವೆ “ಎಂದು ಅವರು ಪತ್ರದಲ್ಲಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ