Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಪಿತ್ರಾರ್ಜಿತ ಆಸ್ತಿ ತೆರಿಗೆ ಬಳಿಕ ಮತ್ತೊಂದು ವಿವಾದ

Team Udayavani, May 9, 2024, 7:05 AM IST

Sam Pitroda; ದಕ್ಷಿಣ ಭಾರತೀಯ ಜನತೆ ಆಫ್ರಿಕನ್ನರಂತೆ: ರಾಹುಲ್‌ ಆಪ್ತ

ಹೊಸದಿಲ್ಲಿ: ಪಿತ್ರಾರ್ಜಿತ ಆಸ್ತಿ ತೆರಿಗೆ ಹೇಳಿಕೆ ಮೂಲಕ ಭಾರೀ ವಿವಾದಕ್ಕೆ ನಾಂದಿ ಹಾಡಿದ್ದ ಕಾಂಗ್ರೆಸ್‌ನ ಹಿರಿಯ ನಾಯಕ ಸ್ಯಾಮ್‌ ಪಿತ್ರೋಡಾ ಈಗ, ಭಾರತೀಯರನ್ನು ಚರ್ಮದ ಬಣ್ಣದ ಮೂಲಕ ವಿಂಗಡಿಸುವ ಹೇಳಿಕೆ ಮೂಲಕ ಮತ್ತೊಂದು ವಿವಾದದ ಕಿಡಿ ಹೊತ್ತಿಸಿದ್ದಾರೆ. ಈ ಸಂಬಂಧ ಬಿಜೆಪಿಯಂತೂ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದರೆ, ಪಿತ್ರೋಡಾ ಹೇಳಿಕೆ ಯಿಂದ ಕಾಂಗ್ರೆಸ್‌ ಅಂತರ ಕಾಯ್ದು ಕೊಂಡಿದೆ.

ತಮ್ಮ ಹೇಳಿಕೆ ವಿವಾದ ಸೃಷ್ಟಿಸುತ್ತಿದ್ದಂತೆಯೇ ಸ್ಯಾಮ್‌ ಪಿತ್ರೋಡಾ ಸಾಗರೋತ್ತರ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

“ದಿ ಸ್ಟೇಟ್ಸ್‌ಮನ್‌’ ಇಂಗ್ಲಿಷ್‌ ಪತ್ರಿಕೆಗೆ ನೀಡಿದ ಪಾಡ್‌ಕಾಸ್ಟ್‌ ಸಂದರ್ಶನದಲ್ಲಿ ಸ್ಯಾಮ್‌ ಪಿತ್ರೋಡಾ ಭಾರತದ ವೈವಿಧ್ಯತೆಯನ್ನು ಬಣ್ಣಿಸುವ ಭರದಲ್ಲಿ ಭಾರತದ ಪೂರ್ವದಲ್ಲಿರುವವರು ಚೀನಿ ಯರ ರೀತಿ ಕಂಡರೆ, ಪಶ್ಚಿಮದಲ್ಲಿರು ವವರು ಅರಬ್ಬರ ರೀತಿ, ಉತ್ತರದಲ್ಲಿರು ವವರು ಬಿಳಿಯರು ಹಾಗೂ ದಕ್ಷಿಣ ಭಾರತದಲ್ಲಿರುವವರು ಆಫ್ರಿಕನ್ನರ ರೀತಿ ಕಾಣುತ್ತಾರೆ. ಭಾರತದಂಥ ವೈವಿಧ್ಯತೆಯ ದೇಶ ದಲ್ಲಷ್ಟೇ ಎಲ್ಲರನ್ನೂ ಒಟ್ಟಿಗೆ ನೋಡಲು ಸಾಧ್ಯ ಎಂದು ಹೇಳಿದ್ದಾರೆ.

ಪಿತ್ರೋಡಾ ಹೇಳಿಕೆಯು ಜನಾಂ ಗೀಯ ನಿಂದನೆ ಮತ್ತು ಅತ್ಯಂತ ಕೀಳು ಅಭಿರುಚಿಯಿಂದ ಕೂಡಿದೆ ಎಂದು ಪ್ರಧಾನಿ ಮೋದಿಯಾದಿಯಾಗಿ ಬಿಜೆಪಿಗರು ಕಾಂಗ್ರೆಸ್‌ ವಿರುದ್ಧ ಕೆಂಡ ಕಾರಿದ್ದಾರೆ. ಮತ್ತೊಂದೆಡೆ, ಐಎನ್‌ಡಿಐಎ ಒಕ್ಕೂಟದ ಯಾವುದೇ ಪಕ್ಷವು ಪಿತ್ರೋಡಾ ಹೇಳಿಕೆಯನ್ನು ಒಪ್ಪುವುದಿಲ್ಲ ಎಂದು ಆಪ್‌ ನಾಯಕ ಸಂಜಯ್‌ ಸಿಂಗ್‌ ಹೇಳಿದ್ದಾರೆ.

ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು?
“ನಮ್ಮ ಸ್ವಾತ್ಯಂತ್ರ ಹೋರಾಟಗಾರರು ಬ್ರಿಟಿಷ್‌ ರಾಜ್‌ ವಿರುದ್ಧ ಹೋರಾಟ ಮಾಡಿದ್ದು ಜಾತ್ಯತೀತ ರಾಷ್ಟ್ರಕ್ಕಾಗಿಯೇ ಹೊರತು ಹಿಂದೂ ರಾಷ್ಟ್ರಕ್ಕಾಗಿ ಅಲ್ಲ. ಪಾಕಿಸ್ಥಾನವು ಧರ್ಮಾಧಾರಿತ ರಾಷ್ಟ್ರ ವಾಯಿತು. ಅದರ ಪರಿಸ್ಥಿತಿ ಏನಾಗಿದೆ ಎಂಬುದು ನಿಮ್ಮ ಮುಂದಿದೆ. ಜಗತ್ತಿನಲ್ಲಿ ನಾವು ಪ್ರಬಲ ಪ್ರಜಾಪ್ರಭುತ್ವಕ್ಕೆ ಉದಾಹರಣೆಯಾಗಿದ್ದೇವೆ. ಕೆಲವು ಜಗಳಗಳನ್ನು ಹೊರತುಪಡಿಸಿ ಜನರು ಸಂತೋಷದ ವಾತಾವರಣದಲ್ಲಿ 75 ವರ್ಷಗಳನ್ನು ಕಳೆದಿದ್ದಾರೆ. ನಾವು ಭಾರತದಂಥ ವೈವಿಧ್ಯಮಯ ದೇಶವನ್ನು ಒಂದಾಗಿಟ್ಟು ಕೊಳ್ಳಬಹುದು. ಪೂರ್ವದಲ್ಲಿ ಚೀನಿ ರೀತಿ ಕಾಣುವ ಜನರಿದ್ದರೆ, ಪಶ್ಚಿಮದಲ್ಲಿ ಅರಬ್‌ ರೀತಿ, ಉತ್ತರದಲ್ಲಿ ಬಹುತೇಕರು ಬಿಳಿಯರ ರೀತಿ ಮತ್ತು ದಕ್ಷಿಣದಲ್ಲಿ ಆಫ್ರಿಕನ್ನರ ರೀತಿ ಕಾಣುವರಿದ್ದರೂ ವೈವಿಧ್ಯತೆಯಲ್ಲಿ ಏಕತೆ ಕಾಣುವ ಭಾರತಕ್ಕೆ ಇದ್ಯಾವುದೂ ಲೆಕ್ಕಕ್ಕೆ ಬರುವುದಿಲ್ಲ. ನಾವೆಲ್ಲರೂ ಸಹೋದರ ಮತ್ತು ಸಹೋದರಿಯರು. ನಾವು ಭಿನ್ನ ಭಾಷೆ, ಭಿನ್ನ ಧರ್ಮ, ಭಿನ್ನ ಸಂಪ್ರದಾಯ ಮತ್ತು ಭಿನ್ನ ಆಹಾರವನ್ನು ಗೌರವಿಸುತ್ತೇವೆ’ ಎಂದು ಸ್ಯಾಮ್‌ ಪಿತ್ರೋಡಾ ಹೇಳಿದ್ದರು.

ಪಿತ್ರೋಡಾ ಹೇಳಿಕೆಗೆ ರಾಹುಲ್‌
ಗಾಂಧಿ ಉತ್ತರಿಸಬೇಕು: ಮೋದಿ
ತೆಲಂಗಾಣದ ವಾರಂಗಲ್‌ನಲ್ಲಿ ರಾಹುಲ್‌ ಗಾಂಧಿ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ, ನನಗೆ ಸಿಕ್ಕಾಪಟ್ಟೆ ಸಿಟ್ಟು ಬಂದಿದೆ. ನನ್ನನ್ನು ಬೈದರೆ ನನಗೆ ಕೋಪ ಬರುವುದಿಲ್ಲ. ಶೆಹಜಾದಾ (ರಾಹುಲ್‌ ಗಾಂಧಿ) ಮಾರ್ಗದರ್ಶಕರು ಮಾಡಿದ ಜನಾಂಗೀಯ ನಿಂದನೆ ನನ್ನಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಮೋದಿ ಹೇಳಿದರು. ತಮ್ಮ ಅಮೆ ರಿ ಕದ ಅಂಕ ಲ್‌ ಪಿತ್ರೋಡಾ ಹೇಳಿಕೆಗೆ ರಾಹುಲ್‌ ಗಾಂಧಿ ಉತ್ತರಿಸಬೇಕು ಎಂದು ಆಗ್ರಹಿಸಿದರು.

ಮೋದಿ ಮಾತ್ರವಲ್ಲದೇ, ಅಸ್ಸಾಮ್‌ ಸಿಎಂ ಹಿಮಂತ್‌ ಬಿಸ್ವಾ ಶರ್ಮ, ಸಚಿವರಾ ದ ಅನುರಾಗ್‌ ಠಾಕೂದ ನಿರ್ಮಲಾ ಸೀತಾ ರಾ ಮನ್‌, ನಟಿ ಕಂಗನಾ ರಣಾವತ್‌, ಬಿಜೆಪಿ ವಕ್ತಾರ ಶೆಹಜಾದ ಪೂನಾವಾಲ ಅವರು ಕಾಂಗ್ರೆಸ್‌ ಟೀಕಿಸಿದ್ದಾರೆ.

ವಿವಾದಿತ ಹೇಳಿಕೆ: ಕಾಂಗ್ರೆಸ್‌ ಅಂತರ ಸ್ಯಾಮ್‌ ಪಿತ್ರೋಡಾ ಹೇಳಿಕೆಯಿಂದ ಕಾಂಗ್ರೆಸ್‌ ಅಂತರ ಕಾಯ್ದುಕೊಂಡಿದೆ. ಪಿತ್ರೋಡಾ ಅವರ ಹೋಲಿಕೆಯು ಸಂಪೂರ್ಣ ತಪ್ಪು ಮತ್ತು ಸ್ವೀಕಾರಾರ್ಹವಲ್ಲ ಎಂದು ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಟ್ವೀಟ್‌ ಮಾಡಿದ್ದಾರೆ.

ರಾಹುಲ್‌ ಗಾಂಧಿ ಉತ್ತರಿಸಲಿ
ಚರ್ಮದ ಬಣ್ಣದ ಆಧಾರದ ಮೇಲೆ ಅವಮಾನ ಮಾಡುವು ದನ್ನು ದೇಶದ ಜನರು ಸಹಿಸುವುದಿಲ್ಲ. ದ್ರೌಪದಿ ಮುರ್ಮು ಅವರ ಚರ್ಮದ ಬಣ್ಣ ಕಪ್ಪಾಗಿರುವುದರಿಂದಲೇ ರಾಷ್ಟ್ರಪತಿ ಚುನಾವಣೆಯಲ್ಲಿ ಅವರನ್ನು ಸೋಲಿಸಲು ಕಾಂಗ್ರೆಸ್‌ ಪ್ರಯತ್ನಿಸಿತು ಎಂಬುದು ಈಗ ಅರ್ಥವಾಗುತ್ತಿದೆ
 -ನರೇಂದ್ರ ಮೋದಿ, ಪ್ರಧಾನಿ

ಟಾಪ್ ನ್ಯೂಸ್

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.