ಅವಧಿಗೆ ಮುನ್ನ ಬಂದ ಮುಂಗಾರು ; ವಾಡಿಕೆಗಿಂತ 12 ದಿನ ಮೊದಲೇ ಮಾನ್ಸೂನ್
ಜುಲೈ, ಆಗಸ್ಟ್ನಲ್ಲೂ ಉತ್ತಮ ಮಳೆ
Team Udayavani, Jun 27, 2020, 6:34 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ದೇಶದ ಗ್ರಾಮೀಣ ಜನರ ಆರ್ಥಿಕತೆಯ ಜೀವನಾಡಿಯಾಗಿರುವ ಮುಂಗಾರು ಈ ವರ್ಷ ಆಶಾದಾಯಕವಾಗಿದೆ.
ವಾಡಿಕೆಗಿಂತ 12 ದಿನ ಮೊದಲೇ ದೇಶಾದ್ಯಂತ ಮಾನ್ಸೂನ್ ವ್ಯಾಪಿಸಿದ್ದು, ರೈತರ ಮೊಗದಲ್ಲಿ ಸಂತಸ ತಂದಿದೆ.
ಕೋವಿಡ್ 19 ವೈರಸ್ ನಿಂದ ನಲುಗಿರುವ ಜನತೆಗೆ ಇದು ತುಸು ಸಮಾಧಾನಕರ ಸಂಗತಿಯಾಗಿದೆ.
ವಾಡಿಕೆಯಂತೆ ಜು. 8ಕ್ಕೆ ರಾಷ್ಟ್ರಾದ್ಯಂತ ಮುಂಗಾರು ವ್ಯಾಪಿಸಬೇಕಿತ್ತು. ಆದರೆ, ಈ ವರ್ಷ 12 ದಿನ ಮುನ್ನವೇ ಅಂದರೆ, ಜೂನ್ 26ಕ್ಕೆ ದೇಶದ ಎಲ್ಲೆಡೆ ವರ್ಷಧಾರೆ ಸುರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.
ವಾಯುಭಾರ ಕುಸಿತದಿಂದ ರಾಜಸ್ಥಾನ, ಪಂಜಾಬ್, ಬಿಹಾರ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಮತ್ತಿತರ ಭಾಗಗಳಲ್ಲಿ ಮಳೆಯಾಗಿದೆ. ಈ ವರ್ಷ ಚಂಡ ಮಾರುತಗಳು ಅಪ್ಪಳಿಸಿದ ಪರಿಣಾಮ ದೇಶಾದ್ಯಂತ ಮುಂಗಾರು ಚುರುಕಾಗಿದೆ.
ಮುಂದಿನ ಮೂರು ದಿನಗಳ ಅವಧಿಯಲ್ಲಿ ಈಶಾನ್ಯ ಹಾಗೂ ಪೂರ್ವ ಭಾರತದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. ಬಿಹಾರ, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ ರಾಜ್ಯಗಳಲ್ಲಿ ಒಂದೆರಡು ದಿನ ಗಳಲ್ಲಿ ಭಾರೀ ಮಳೆಯಾಗಲಿದೆ.
ಮುಂಗಾರು ಬೆಳೆಗಳಿಗೆ ಜುಲೈ ಹಾಗೂ ಆಗಸ್ಟ್ ನಿರ್ಣಾಯಕವಾಗಿದ್ದು, ಈ ಅವಧಿಯಲ್ಲಿ ಉತ್ತಮ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಈ ವರ್ಷ ವಾಡಿಕೆಯಂತೆ ಮುಂಗಾರು ಉತ್ತಮವಾಗಿರಲಿದೆ. ಶೇ.100 ರಷ್ಟು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಾರಂಭದಲ್ಲಿ ತಿಳಿಸಿತ್ತು. ಏತನ್ಮಧ್ಯೆ, ಕೇರಳದಲ್ಲಿ ಭಾರೀ ಮಳೆ ಸುರಿಯುವ ಸಂಭವ ಇದೆ.
ಈ ನಡುವೆ, ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲೂ ಶನಿವಾರ ಮಳೆಯಾಗುವ ಸಾಧ್ಯತೆ ಇದೆ.
ಯುಪಿ, ಬಿಹಾರ: ಸಿಡಿಲಿಗೆ 116 ಜನ ಬಲಿ
ಉತ್ತರಪ್ರದೇಶ ಹಾಗೂ ಬಿಹಾರದಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದು, ಸಿಡಿಲು ಬಡಿದ ಪರಿಣಾಮ ಮೃತಪಟ್ಟವರ ಸಂಖ್ಯೆ 116ಕ್ಕೆ ತಲುಪಿದೆ. ಬಿಹಾರದಲ್ಲಿ ಸಿಡಿಲಿನಿಂದ ಗುರುವಾರ 85 ಮಂದಿ ಸಾವನ್ನಪ್ಪಿದ್ದರು. ಶುಕ್ರವಾರ ಮತ್ತೆ 9 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಉತ್ತರ ಪ್ರದೇಶದಲ್ಲಿ 24 ಮಂದಿ ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
MUST WATCH
ಹೊಸ ಸೇರ್ಪಡೆ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
Online Bitcoin Gambling Enterprises: An Overview to Betting with Cryptocurrency