ಮತ್ತೊಂದು ವಿವಾದಾತ್ಮಕ ಹೇಳಿಕೆ;ಸೇನೆ ಬಗ್ಗೆ ಅಝಂ ಖಾನ್ ಹೇಳಿದ್ದೇನು?
Team Udayavani, Jun 28, 2017, 2:39 PM IST
ಲಕ್ನೋ: ಉತ್ತರ ಪ್ರದೇಶದ ಮಾಜಿ ಸಚಿವ, ಸಮಾಜವಾದಿ ಪಕ್ಷದ ನಾಯಕ ಅಝಂ ಖಾನ್ ಮತ್ತೂಂದು ವಿವಾದಾತ್ಮಕ ಹೇಳಿಕೆ ನೀಡಿ ವಿವಾದ ಹುಟ್ಟು ಹಾಕಿದ್ದು, ಈ ಬಾರಿ ಸೇನೆಯ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ರಾಮಪುರ್ ಎಂಬಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಝಂ ಖಾನ್ ‘ಸೈನಿಕರು ಅತ್ಯಾಚಾರದಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಗಡಿಯಲ್ಲಿ ಮಹಿಳೆಯರ ದೇಹದ ಖಾಸಗಿ ಭಾಗಗಳನ್ನು ಕತ್ತರಿಸಿ ಹಾಕಿ ಕ್ರೌರ್ಯ ತೋರಿದ್ದಾರೆ. ಇದರ ವಿರುದ್ಧ ಮಹಿಳೆಯರು ದಂಗೆ ಎಂದಿದ್ದಾರೆ. ಹೀಗಾಗಿ ಯೋಧನ ಶಿರ ಕತ್ತರಿಸಿ ಹಾಕಿದ್ದಾರೆ.ಸೈನಿಕರಿಂದ ಹೀಗೆಲ್ಲಾ ನಡೆದರೆ ನಾವು ವಿಶ್ವಕ್ಕೆ ಮುಖ ತೋರಿಸುವುದು ಹೇಗೆ’ ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಅಝಂ ಖಾನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದೆ. ಬಿಜೆಪಿ ವಕ್ತಾರ ಸಂದೀಪ್ ಪಾತ್ರ ಅವರು ಎಸ್ಪಿ ನಾಯಕ ಐಸಿಸ್ ಉಗ್ರರ ವಕ್ತಾರನಾಗುವುದು ಒಳಿತು ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್