ಎಸ್ಪಿ ಎಂಎಲ್ಸಿ ಸೇರಿ ಹಲವರ ಮೇಲೆ ಐ.ಟಿ.ದಾಳಿ
ಖಚಿತ ಮಾಹಿತಿ ಸಂಗ್ರಹಿಸಿಯೇ ದಾಳಿ: ವಿತ್ತ ಸಚಿವೆ
Team Udayavani, Jan 1, 2022, 6:15 AM IST
ನವದೆಹಲಿ/ಲಕ್ನೋ: ಸಮಾಜವಾದಿ ಪಕ್ಷದ ಎಂಎಲ್ಸಿ ಪುಷ್ಪರಾಜ್ ಜೈನ್ ಸೇರಿದಂತೆ ಹಲವು ವ್ಯಕ್ತಿಗಳಿಗೆ ಸೇರಿದ 30-40 ಸ್ಥಳಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶದ ಕಾನ್ಪುರದ ಸುಗಂಧದ್ರವ್ಯ ವ್ಯಾಪಾರಿ ಪಿಯೂಷ್ ಜೈನ್ ನಿವಾಸದ ಮೇಲೆ ನಡೆಸಲಾಗಿರುವ ದಾಳಿಯ ಬಗ್ಗೆ ರಾಜಕೀಯ ವಾಗ್ವಾದ ನಡೆದಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಉತ್ತರ ಪ್ರದೇಶದ ಕನೌ°ಜ್, ಕಾನ್ಪುರ್, ಸೂರತ್, ಮುಂಬೈ, ನವದೆಹಲಿ ಮತ್ತು ಇತರ ಸ್ಥಳಗಳಲ್ಲಿ ದಾಳಿ-ಶೋಧ ಕಾರ್ಯ ನಡೆಸಲಾಗಿದೆ. ದಾಳಿಯನ್ನು ಕಟುವಾಗಿ ಟೀಕಿಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗ ಮತ್ತು ರಾಷ್ಟ್ರಪತಿಗೆ ದೂರು ನೀಡುವುದಾಗಿ ಹೇಳಿದ್ದಾರೆ.
ಕಾಯಬೇಕಾಗಿತ್ತೇ?
ಐ.ಟಿ.ದಾಳಿಯ ಬಗ್ಗೆ ಮಾಜಿ ಸಿಎಂ ಅಖಿಲೇಶ್ ಯಾದವ್ ಮಾಡಿದ ಟೀಕೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆಕ್ಷೇಪ ಮಾಡಿದ್ದಾರೆ.
ಪಿಯೂಷ್ ಜೈನ್ ಮನೆಯಿಂದ ವಶಪಡಿಸಿಕೊಂಡಿರುವ 200 ಕೋಟಿ ರೂ. ಮೊತ್ತ ಬಿಜೆಪಿಗೆ ಸೇರಿದ್ದಲ್ಲ. ಖಚಿತ ಮಾಹಿತಿ ಮತ್ತು ಅದನ್ನು ವಿಶ್ಲೇಷಿಸಿಯೇ ದಾಳಿ ನಡೆಸಲಾಗುತ್ತದೆ. ದಾಳಿಯಿಂದಾಗಿ ಅಖಿಲೇಶ್ ಬೆದರಿದ್ದಾರೆ. ಸಾಮಾನ್ಯ ವ್ಯಕ್ತಿಯಲ್ಲಿ ಮನೆಯಲ್ಲಿ 24 ಕೆಜಿ ಚಿನ್ನ ಇರಿಸಲು ಸಾಧ್ಯವಿಲ್ಲ. ಕಳ್ಳನನ್ನು ಬಂಧಿಸಲು ಚುನಾವಣೆಯ ನಂತರದ ಮುಹೂರ್ತಕ್ಕೆ ಕಾಯಬೇಕಾಗಿತ್ತೇ ಎಂದು ಪ್ರಶ್ನಿಸಿದ್ದಾರೆ. ದಾಳಿ ರಾಜಕೀಯ ಪ್ರೇರಿತ ಎಂಬ ಆರೋಪವನ್ನು ಅವರು ತಿರಸ್ಕರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ