ಆಯೋಗದ ಬಗ್ಗೆ ಕಿಡಿ
Team Udayavani, Mar 5, 2019, 1:00 AM IST
ಹೊಸದಿಲ್ಲಿ: ಲೋಕಸಭೆ ಚುನಾವಣೆ ದಿನಾಂಕಗಳನ್ನು ಘೋಷಿಸಲು ಚುನಾವಣಾ ಆಯೋಗ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಆರೋಪಿಸಿದ್ದಾರೆ. ನೀತಿ ಸಂಹಿತೆ ಜಾರಿಯಾದ ಅನಂತರ ಅಭಿವೃದ್ಧಿ ಕಾರ್ಯಕ್ರಮ ಗಳ ಉದ್ಘಾಟನೆ ಅಥವಾ ಶಂಕುಸ್ಥಾಪನೆ ನೆರವೇರಿಸಲು ಸಾಧ್ಯ ವಾಗುವುದಿಲ್ಲ. ಹೀಗಾಗಿ ಕೊನೆಯ ಕ್ಷಣದವರೆಗೂ ಪ್ರಧಾನಿ ಮೋದಿ ಸರಕಾರಿ ವೆಚ್ಚದಲ್ಲಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಅವರು ಅಭಿವೃದ್ಧಿ ಕಾರ್ಯಕ್ರಮ ಘೋಷಿಸಿ ಮುಗಿಸುವುದಕ್ಕೆ ಚುನಾವಣೆ ಆಯೋಗ ಕಾಯುತ್ತಿದೆಯೇ ಎಂದು ಟೀಕಿಸಿ ಪಟೇಲ್ ಟ್ವೀಟ್ ಮಾಡಿದ್ದಾರೆ. ರಾಜಕೀಯ ರ್ಯಾಲಿಗಳು, ಟಿವಿ, ರೇಡಿಯೋ ಹಾಗೂ ಮುದ್ರಣ ಜಾಹೀರಾತುಗಳನ್ನು ನೀಡುವ ಮೂಲಕ ರಾಜಕೀಯ ಪ್ರಚಾರವನ್ನು ಮೋದಿ ಮಾಡುತ್ತಿದ್ದಾರೆ.
ಕೊನೆಯ ಕ್ಷಣದ ವರೆಗೂ ಸರಕಾರಿ ಹಣ ಖರ್ಚು ಮಾಡಲು ಮೋದಿಗೆ ಆಯೋಗ ಅನುವು ಮಾಡಿಕೊಡುತ್ತಿರುವಂತಿದೆ ಎಂದು ಅವರು ಟೀಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ