ಅಸಭ್ಯತೆ: 24 ಎಐಎಡಿಎಂಕೆ ಸಂಸದರ ಅಮಾನತು


Team Udayavani, Jan 3, 2019, 12:30 AM IST

x-47.jpg

ನವದೆಹಲಿ: ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಸಂಸತ್‌ನಲ್ಲಿ ಗಲಭೆ ನಡೆಸಿದ ಎಐಎಡಿಎಂಕೆ 24 ಸಂಸದರನ್ನು ಲೋಕಸಭೆ ಸ್ಪೀಕರ್‌ ಸುಮಿತ್ರಾ ಮಹಾಜನ್‌ ಅಮಾನತು ಮಾಡಿದ್ದಾರೆ. ಮುಂದಿನ ಐದು ದಿನಗಳವರೆಗೆ ಈ ಸಂಸದರು ಸದನಕ್ಕೆ ಆಗಮಿಸುವಂತಿಲ್ಲ. ಚಳಿಗಾಲದ ಅಧಿವೇಶನ ಆರಂಭವಾದ ದಿನದಿಂದಲೂ ಈ ಸಂಸದರು ನಿರಂತರವಾಗಿ ಗದ್ದಲ ನಡೆಸಿದ್ದು, ಸದನಕ್ಕೆ ಅಡ್ಡಿಪಡಿಸುತ್ತಿದ್ದರು. ಲೋಕಸಭೆಯಲ್ಲಿ ಎಐಎಡಿಎಂಕೆಯ 37 ಸಂಸದರಿದ್ದಾರೆ. ಇದಕ್ಕೂ ಮುನ್ನ ಡಿಎಂಕೆ ಮತ್ತು ಎಐಎಡಿಎಂಕೆ ಸದಸ್ಯರು ರಾಜ್ಯಸಭೆಯಲ್ಲೂ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದಾಗ, ಅವರನ್ನು ಸದನದಿಂದ ಹೊರನಡೆಯಿರಿ ಎಂದು ಸಭಾಪತಿ ವೆಂಕಯ್ಯ ನಾಯ್ಡು ಆದೇಶಿಸಿದ್ದರು.

ಮೇಕೆದಾಟು ವಿಚಾರಕ್ಕೆ ಸಭೆ: ಅಧಿವೇಶನ ಆರಂಭವಾದಾಗಿನಿಂದಲೂ ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ ಹಾಗೂ ಡಿಎಂಕೆ ಸಂಸದರು ಪ್ರತಿಭಟನೆ ನಡೆಸುತ್ತಿರುವುದರಿಂದ ಬುಧವಾರ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು ವಿವಿಧ ಪಕ್ಷಗಳ ನಾಯಕರ ಸಭೆ ನಡೆಸಿದ್ದಾರೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಎಐಎಡಿಎಂಕೆ ಮತ್ತು ಡಿಎಂಕೆ ಸಂಸದರೊಂದಿಗೆ ಸರ್ಕಾರ ಮಾತುಕತೆ ನಡೆಸುತ್ತಿದೆ. ಕೇಂದ್ರ ಸಚಿವ ನಿತಿನ್‌ ಗಡ್ಕರಿ ವಿಷಯವನ್ನು ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂಬುದಾಗಿ ಸಂಸದೀಯ ವ್ಯವಹಾರಗಳ ಸಚಿವ ವಿಜಯ್‌ ಗೋಯಲ್‌ ಹೇಳಿದ್ದಾರೆ. ರಾಜನಾಥ್‌ ಸಿಂಗ್‌ ಕೂಡ ಸಭೆಯಲ್ಲಿ ಹಾಜರಿರಲಿದ್ದು, ವಿವಿಧ ಪಕ್ಷಗಳ ಬೇಡಿಕೆ ಆಲಿಸಿ, ಪರಿಹಾರ ಕಂಡುಕೊಳ್ಳಲಿದ್ದಾರೆ.

ಆರಂಭದಲ್ಲಿ ಸಂಸತ್‌ ಕಲಾಪ ಸುಗಮವಾಗಿ ಸಾಗಲು ಅನುವು ಮಾಡುತ್ತೇವೆ ಎಂದು ಎಐಎಡಿಎಂಕೆ ಸದಸ್ಯರು ಒಪ್ಪಿದರಾದರೂ, ನಂತರ ತಮ್ಮ ಪಕ್ಷದ ಮುಖ್ಯಸ್ಥರು ಈ ಆಶ್ವಾಸನೆಗಳಿಗೆ ಒಪ್ಪಿಲ್ಲ ಎಂದು ತಗಾದೆ ತೆಗೆದಿದ್ದಾರೆ. ಆ ನಂತರದಲ್ಲಿ ಯಾವುದೇ ಶಿಸ್ತುಕ್ರಮಕ್ಕೂ ನಾವು ಸಿದ್ಧ ಎಂದು ಎಐಎಡಿಎಂಕೆ ಸಂಸದರು ನಾಯ್ಡುಗೆ ಹೇಳಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.