ರಾಮ ನಾಮ ಬ್ಯಾಂಕ್ ‘ಬೋನಸ್’ ಘೋಷಣೆ
Team Udayavani, Nov 18, 2019, 7:27 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಕ್ನೋ: ಅಯೋಧ್ಯೆಯು ರಾಮನದ್ದೇ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಲಕ್ನೋದ ರಾಮ್ ನಾಮ್ ಬ್ಯಾಂಕ್ ತನ್ನ ಖಾತೆದಾರರಿಗೆ ಸಿಹಿಸುದ್ದಿ ನೀಡಿದೆ. ತೀರ್ಪು ಹಿನ್ನೆಲೆಯಲ್ಲಿ ಖಾತೆದಾರರಿಗೆ ವಿಶೇಷ ಬೋನಸ್ ನೀಡುವುದಾಗಿ ಘೋಷಿಸಿದೆ.
ಈ ಬ್ಯಾಂಕ್ನಲ್ಲಿ ಹಣದ ವ್ಯವಹಾರ ನಡೆಯುವುದಿಲ್ಲ. ಇಲ್ಲಿ ಏನಿದ್ದರೂ ರಾಮ ನಾಮವಷ್ಟೇ.
ಶ್ರೀರಾಮನ ಹೆಸರನ್ನು ಎಷ್ಟು ಬಾರಿ ಸಾಧ್ಯವೋ ಅಷ್ಟು ಬಾರಿ ಬರೆದು, ಆ ಪುಸ್ತಿಕೆಗಳನ್ನು ಈ ಬ್ಯಾಂಕ್ನಲ್ಲಿ ಠೇವಣಿ ರೂಪದಲ್ಲಿ ಇಡಲಾಗುತ್ತದೆ. ಅದರಂತೆ, ನ.9 ಮತ್ತು 10ರ ನಡುವಿನ ರಾತ್ರಿ ಯಾರೆಲ್ಲ ಕನಿಷ್ಠ 1.25 ಲಕ್ಷ ಬಾರಿ ರಾಮನ ಹೆಸರು ಬರೆದಿದ್ದಾರೋ, ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಬ್ಯಾಂಕ್ನ ಸರ್ಟಿಫಿಕೇಟ್, ಶಾಲು ಮತ್ತು ಶ್ರೀಫಲವನ್ನು ನೀಡಿ ಸನ್ಮಾನಿಸಲಾಗುತ್ತದೆ. ಜತೆಗೆ, ಅವರು ಬರೆದಿರುವ ರಾಮನಾಮವನ್ನು ದುಪ್ಪಟ್ಟು ಎಂದು ಪರಿಗಣಿಸಲಾಗುತ್ತದೆ.
ಅಂದರೆ, 1 ಲಕ್ಷ ಬಾರಿ ಬರೆದಿದ್ದರೆ, ಅದನ್ನು 2 ಲಕ್ಷ ಎಂದು ಪರಿಗಣಿಸಲಾಗುತ್ತದೆ ಎಂದು ಬ್ಯಾಂಕ್ ಹೇಳಿದೆ. ಈ ನಡುವೆ, ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕಾಗಿ ನಾವು ಯಾರಿಂದಲೂ ಹಣ ಸಂಗ್ರಹಿಸುತ್ತಿಲ್ಲ. ನಮ್ಮ ಹೆಸರು ಹೇಳಿಕೊಂಡು ಹಣ ಕೇಳಲು ಬಂದರೆ, ಕೊಟ್ಟು ಬಿಡಬೇಡಿ ಎಂದು ಜನರಿಗೆ ವಿಹಿಂಪ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ