ಡ್ರಿಂಕ್ & ಡ್ರೈವ್ ಗೆ 6 ತಿಂಗಳು ಜೈಲು,10ಸಾವಿರ ದಂಡ: ಈ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮ
Team Udayavani, Aug 2, 2022, 5:40 PM IST
ಪಣಜಿ: ಕಳೆದ ಕೆಲವು ದಿನಗಳಿಂದ ಗೋವಾದಲ್ಲಿ ರಸ್ತೆ ಅಪಘಾತದಿಂದ ಸಾವುಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಟ್ರಾಫಿಕ್ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದರೆ 6 ತಿಂಗಳ ಜೈಲು ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಲಾಗುವುದು. ಈ ನಿಯಮ ಆಗಸ್ಟ್ 2 ರಿಂದ (ಮಂಗಳವಾರ) ಆರಂಭಗೊಳ್ಳಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ಗೋವಾದ ಜುವಾರಿ ಸೇತುವೆಯಲ್ಲಿ ವಾಹನವೊಂದು ನದಿಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಕಳೆದ ವಾರ ನಡೆದಿದೆ. ಅತಿ ವೇಗ ಹಾಗೂ ಕುಡಿದು ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರುವುದು ಸ್ಪಷ್ಟವಾಗಿದೆ. ಈ ಕುರಿತು ಟ್ರಾಫಿಕ್ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಇದೀಗ ಮದ್ಯಪಾನ ಮಾಡಿ ಅತಿವೇಗದಲ್ಲಿ ವಾಹನ ಚಲಾಯಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಗೋವಾದ ಪೊಲೀಸ್ ಅಧೀಕ್ಷಕ ಧರ್ಮೇಶ ಆಂಗಲೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ವಾಹನ ಅಪಘಾತಗಳನ್ನು ತಡೆಯಲು ಸಾರಿಗೆ ಇಲಾಖೆ ಇಂತಹ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿದೆ. ಅಪ್ರಾಪ್ತರು ವಾಹನ ಚಲಾಯಿಸುವುದು ಕಂಡು ಬಂದಲ್ಲಿ ಅವರ ಪಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ: ನನ್ನ ಹತ್ತಿರ ನಿಮ್ಮ ಆಟ ನಡೆಯುವುದಿಲ್ಲ: ಸಚಿವ ಅಶ್ವತ್ಥನಾರಾಯಣ ವಿರುದ್ಧ ಎಚ್ಡಿಕೆ ಆಕ್ರೋಶ
ವಾಹನ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಅಪಘಾತದ ಸಾವುಗಳ ಸಾಮಾನ್ಯ ವಿಧವೆಂದರೆ ಕುಡಿದು ವಾಹನ ಚಾಲನೆ ಮತ್ತು ವೇಗದ ಚಾಲನೆ. ಈ ವರ್ಷ ಗೋವಾ ರಾಜ್ಯದಲ್ಲಿ ಇಂತಹ 133 ಪ್ರಕರಣಗಳು ನಡೆದಿದ್ದು, 31 ಮಂದಿ ಸಾವನ್ನಪ್ಪಿದ್ದಾರೆ ಎಂದು ಧರ್ಮೇಶ ಆಂಗಲೆ ಮಾಹಿತಿ ನೀಡಿದರು.
ಅಪ್ರಾಪ್ತ ವಯಸ್ಸಿನ ಮಕ್ಕಳೂ ವಾಹನ ಚಲಾಯಿಸುತ್ತಿರುವುದು ಟ್ರಾಫಿಕ್ ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದೆ. ಈ ಪ್ರಕರಣದಲ್ಲಿ ಯಾವುದೇ ಅಪ್ರಾಪ್ತ ಚಾಲಕರು ಕಂಡುಬಂದಲ್ಲಿ, ವಾಹನ ಮಾಲೀಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಮತ್ತು ಅವರಿಂದ ದಂಡವನ್ನು ಸಂಗ್ರಹಿಸಲಾಗುವುದು. ಅಲ್ಲದೆ, ಮುಂದಿನ ಕ್ರಮಕ್ಕಾಗಿ ಈ ಪ್ರಕರಣವನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ಗೆ ಹಸ್ತಾಂತರಿಸಲಾಗುವುದು. ಕಳೆದ ವರ್ಷ 1519 ಅಪಘಾತ ನಡೆದಿದ್ದು, ಈ ಅಪಘಾತಗಳಲ್ಲಿ 143 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ದಕ್ಷಿಣ ಗೋವಾ ಪೊಲೀಸ್ ಅಧೀಕ್ಷಕ ಧರ್ಮೇಶ ಆಂಗಲೆ ಆಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು