ಸ್ಕೂಟಿಗೆ ಟ್ರಕ್ ಢಿಕ್ಕಿ: ಅಜ್ಜ ಸಾವು, 6 ರ ಬಾಲಕನನ್ನು 2 ಕಿ.ಮೀ ಎಳೆದೊಯ್ದ ಚಾಲಕ
Team Udayavani, Feb 26, 2023, 2:30 PM IST
ಲಕ್ನೋ: ಟ್ರಕ್ ವೊಂದು ಸ್ಕೂಟಿಗೆ ಢಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮಹೋಬಾದ ಕಾನ್ಪುರ-ಸಾಗರ್ ರಾ. ಹೆದ್ದಾರಿ 86 ರಲ್ಲಿ ನಡೆದಿದೆ.
ಸ್ಕೂಟಿಯಲ್ಲಿ ಮಾರುಕಟ್ಟೆಗೆ ಅಜ್ಜ ಉದಿತ್ ನಾರಾಯಣ್ ಚಾನ್ಸೋರಿಯಾ (67) ತನ್ನ 6 ವರ್ಷದ ಮೊಮ್ಮಗ ಸಾತ್ವಿಕ್ ಅವರನ್ನು ಕೂರಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಟ್ರಕ್ ವೊಂದು ವೇಗವಾಗಿ ಬಂದು ಸ್ಕೂಟಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಹಿರಿಯ ಜೀವ ಉದಿತ್ ನಾರಾಯಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಮಗು ಹೆತ್ತ ಬಳಿಕ ಕೈ, ಕಾಲುಗಳನ್ನೇ ಕಳೆದುಕೊಂಡ ಮಹಿಳೆ: ಏನಿದು ಸೆಪ್ಟಿಕ್ ಶಾಕ್?
ಅಪಘಾತ ತೀವ್ರತೆಗೆ ಸ್ಕೂಟಿ ಟ್ರಕ್ ನಡಿಯಲ್ಲೇ ಸಿಲುಕಿಗೊಂಡಿದ್ದು, ಅದರಲ್ಲಿ ಪುಟ್ಟ ಬಾಲಕ ಸಾತ್ವಿಕ್ ಸಿಕ್ಕಾಕಿಕೊಂಡಿದ್ದಾನೆ. ಇಷ್ಟೆಲ್ಲಾ ಆದರೂ ಟ್ರಕ್ ಚಾಲಕ ಮಾತ್ರ ಇದನ್ನು ನಿರ್ಲಕ್ಷಿಸಿ ಸ್ಕೂಟಿ ಸಹಿತ ಬಾಲಕನನ್ನು 2 ಕಿ.ಮೀ ಎಳೆದೊಯ್ದಿದ್ದಾನೆ. ಪರಿಣಾಮ ಬಾಲಕ ಕೂಡ ಮೃತಪಟ್ಟಿದ್ದಾನೆ.
ಅಕ್ಕಪಕ್ಕ ಹೋಗುತ್ತಿದ್ದ ಸವಾರರು ಎಷ್ಟು ಹೇಳಿದರೂ ಟ್ರಕ್ ನಿಲ್ಲಿಸದೆ ಚಾಲಕ ಹೋಗಿದ್ದಾನೆ. ರಸ್ತೆಯಲ್ಲಿ ಕಲ್ಲುಗಳನ್ನು ಇಟ್ಟು ಟ್ರಕ್ ನ್ನು ನಿಲ್ಲಿಸಿದ್ದಾರೆ. ಸದ್ಯ ಟ್ರಕ್ ಚಾಲಕನನ್ನು ಸ್ಥಳೀಯರು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಟ್ರಕ್ ಜಪ್ತಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು