ಲ್ಯಾಂಡ್ ಆಗುತ್ತಿದ್ದ ವಿಮಾನಕ್ಕೆ ಅಪ್ಪಳಿಸಿದ ಬಿರುಗಾಳಿ; 40 ಮಂದಿ ಪ್ರಯಾಣಿಕರಿಗೆ ಗಾಯ!
Team Udayavani, May 2, 2022, 9:52 AM IST
ಕೋಲ್ಕತ್ತಾ: ಲ್ಯಾಂಡ್ ಆಗುತ್ತಿದ್ದ ಸ್ಪೈಸ್ ಜೆಟ್ ವಿಮಾನವು ಭಾರೀ ಬಿರುಗಾಳಿಗೆ ಸಿಲುಕಿದ್ದರಿಂದ ಕ್ಯಾಬಿನ್ ಲಗೇಜ್ಗಳು ಮೇಲೆ ಬಿದ್ದು ಕನಿಷ್ಠ 40 ಪ್ರಯಾಣಿಕರು ಗಾಯಗೊಂಡ ಘಟನೆಯು ಪಶ್ಚಿಮ ಬಂಗಾಳದ ದುರ್ಗಾಪುರದ ಕಾಜಿ ನಜ್ರುಲ್ ಇಸ್ಲಾಂ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಗಾಯಗೊಂಡ 40 ಮಂದಿ ಪ್ರಯಾಣಿಕರಲ್ಲಿ ಕನಿಷ್ಠ 10 ಮಂದಿಗೆ ಗಂಭೀರ ಗಾಯಗಳಾಗಿವೆ. ಉಳಿದವರು ಸಣ್ಣಪುಟ್ಟ ಗಾಯಗಳಾಗಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಹತ್ತು ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ ಆದರೆ ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನವು ಚಂಡಮಾರುತಕ್ಕೆ ಹೇಗೆ ಸಿಲುಕಿತು ಎಂಬುದನ್ನು ಖಚಿತ ಪಡಿಸಿಕೊಳ್ಳಲು ತನಿಖೆ ನಡೆಯುತ್ತಿದೆ.
ಇದನ್ನೂ ಓದಿ:ಐಪಿಎಲ್ ಫಸ್ಟ್ ಮ್ಯಾಚ್-2014: ಓಪನಿಂಗ್ ಮತ್ತು ಫೈನಲ್… ಎರಡನ್ನೂ ಗೆದ್ದ ಕೆಕೆಆರ್
ವಿಮಾನವು ಆಂಡಾಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಪ್ರಾರಂಭಿಸಿದಾಗ ವಿಮಾನವು ಅಲುಗಾಡಲು ಪ್ರಾರಂಭಿಸಿತು. ಭಾರಿ ಪ್ರಕ್ಷುಬ್ಧತೆಯ ಕಾರಣ ಕ್ಯಾಬಿನ್ ಸಾಮಾಗ್ರಿಗಳು ಪ್ರಯಾಣಿಕರ ಮೇಲೆ ಬಿದ್ದವು.
ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಪ್ರಯಾಣಿಕರೊಬ್ಬರು, “ಇಳಿಯುವಾಗ ಮೂರು ಜರ್ಕ್ಗಳು ಸಂಭವಿಸಿದವು. ನಾವು ಸೀಟ್ ಬೆಲ್ಟ್ಗಳನ್ನು ಹಾಕಿದ್ದೇವೆ. ಆದರೂ ನಾವು ನಮ್ಮ ಸೀಟ್ ಗಳ ಮೇಲೆ ಹಾರಿದ್ದೆವು.” ಎಂದು ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ.
ಓರ್ವ ಪ್ರಯಾಣಿಕ ತೀವ್ರವಾಗಿ ಗಾಯಗೊಂಡಿದ್ದು, ಬೆನ್ನುಮೂಳೆಯ ಶಸ್ತ್ರಚಿಕಿತ್ಸಕರಿಗೆ ಉಲ್ಲೇಖಿಸಲಾಗಿದೆ ಎಂದು ಆಂಡಾಲ್ ಆಸ್ಪತ್ರೆಯ ಡಾ.ತಪನ್ ಕುಮಾರ್ ರೇ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ