ಸ್ಪೈಸ್ಜೆಟ್ 2ನೇ ಅವಘಡ: ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ
Team Udayavani, Jul 5, 2022, 10:45 PM IST
ನವದೆಹಲಿ: ಸ್ಪೈಸ್ಜೆಟ್ ಏರ್ಲೈನ್ನಲ್ಲಿ ಮಂಗಳವಾರ ಎರಡೆರೆಡು ಸಮಸ್ಯೆಗಳು ಕಾಣಿಸಿಕೊಂಡಿದೆ.
ಗುಜರಾತ್ನ ಕಾಂಡ್ಲಾದಿಂದ ಮುಂಬೈಗೆ ಹೊರಟಿದ್ದ ವಿಮಾನವು, ಆಗಸದಲ್ಲಿದ್ದಾಗ ಇದ್ದಕ್ಕಿದ್ದಂತೆ ಅದರ ವಿಂಡ್ಶೀಲ್ಡ್ನಲ್ಲಿ ಬಿರುಕು ಬಿಟ್ಟಿದೆ.
ವಿಮಾನವು ಸುಮಾರು 23,000 ಅಡಿ ಎತ್ತರ ದಲ್ಲಿ ಹಾರಾಟ ನಡೆಸುತ್ತಿದ್ದಾಗ ಈ ಘಟನೆ ನಡೆ ದಿದೆ. ತಕ್ಷಣವೇ ವಿಮಾನದ ಸಿಬ್ಬಂದಿ ಎಚ್ಚೆತ್ತು ಕೊಂಡು, ಅಗತ್ಯ ಪರೀಕ್ಷೆಗಳನ್ನು ಮಾಡಿದ್ದಾರೆ. ವಿಮಾನವನ್ನು ಮುಂಬೈನಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಲಾಗಿದೆ ಎಂದು ಸ್ಪೈಸ್ಜೆಟ್ ಸಂಸ್ಥೆ ತಿಳಿಸಿದೆ.
ಈ ಘಟನೆಗೂ ಮೊದಲು ನವದೆಹಲಿಯಿಂದ ದುಬೈಗೆ ಹೊರಟಿದ್ದ ಸ್ಪೈಸ್ ಜೆಟ್ನ ವಿಮಾನ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಇಳಿದಿದೆ. ಇಂಧನ ಪೂರೈಕೆ ಮಾಡುವ ಟ್ಯಾಂಕ್ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಈ ಬೆಳವಣಿಗೆ ಉಂಟಾಗಿದೆ.
ವಿಮಾನದಲ್ಲಿದ್ದ 100 ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶ ನಾಲಯ(ಡಿಜಿಸಿಐ) ತನಿಖೆ ಕೈಗೆತ್ತುಕೊಂಡಿದೆ.
ಈ ಎರಡು ಪ್ರಕರಣಗಳು ಮೂಲಕ 17 ದಿನಗಳ ಅವಧಿಯಲ್ಲಿ ಸ್ಪೈಸ್ ಜೆಟ್ನ 7ನೇ ವಿಮಾನಕ್ಕೆ ತಾಂತ್ರಿಕ ತೊಂದರೆಯಾದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ