ಸ್ಪುಟ್ನಿಕ್ ವಿ ಲಸಿಕೆಗಳ ಪೂರೈಕೆಯಲ್ಲಿ ವಿಳಂಬ : ಆಸ್ಪತ್ರೆಗಳು


Team Udayavani, Jun 27, 2021, 2:45 PM IST

Sputnik V vaccine roll-out deferred in Delhi-NCR hospitals again

ಪ್ರಾತಿನಿಧಿಕ ಚಿತ್ರ

ನವ ದೆಹಲಿ : ದೇಶದಲ್ಲಿ ಲಸಿಕೆ ಅಭಾವ ಎಂಬ ಮಾತುಗಖು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಾಕ್ಷಿ ಎಂಬಂತೆ ರಾಷ್ಟ್ರ ರಾಜಧಾನಿಯ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆಯ ಅಭಾವ ಹಾಗೂ ಪೂರೈಕೆಯ ವಿಳಂಬದ ಬಗ್ಗೆ ಅಲ್ಲಿನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ದೆಹಲಿ-ಎನ್‌ಸಿಆರ್ ಪ್ರದೇಶದ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ರಷ್ಯಾದ ಕೋವಿಡ್ -19 ಲಸಿಕೆ ‘ಸ್ಪುಟ್ನಿಕ್ ವಿ’ ಪೂರೈಕೆಯಲ್ಲಿ ವಿಳಂಬವಾಗುತ್ತಿದೆ. “ಲಸಿಕೆ ಯಾವಾಗ ಪೂರೈಸಲಾಗುತ್ತದೆ ಎನ್ನುವುದರ ಬಗ್ಗೆ ನಮಗೆ ಸ್ಪಷ್ಟತೆ ಇಲ್ಲ”  ಎಂದು ಇಂದು(ಭಾನುವಾರ, ಜೂನ್ 27) ಅಪೊಲೊ ಆಸ್ಪತ್ರೆಗಳ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ : ಜಮ್ಮು ವಾಯುನೆಲೆಯಲ್ಲಿ ಸ್ಫೋಟ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧಿಕಾರಿಗಳೊಂದಿಗೆ ಚರ್ಚೆ 

ಜೂನ್ 25 ರಿಂದ ಎರಡನೇ ಡೋಸ್ ಲಸಿಕೆಯನ್ನು ನೀಡುವ ಮೊದಲ ಹಂತದ ಕಾರ್ಯ ನಡೆಯಲಿದೆ ಎಂದು ಈ ಹಿಂದೆ ಹೇಳಲಾಗಿತ್ತು. ಆದರೇ, ಈಗ ಮತ್ತೆ ಲಸಿಕೆಗಳ ಕೊರತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಧುಕರ್ ರೇನ್ಬೋ ಮಕ್ಕಳ ಆಸ್ಪತ್ರೆಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಈವರೆಗೆ ದೇಶದ ಲಸಿಕೆಯ ಮಾರುಕಟ್ಟೆ ಪಾಲುದಾರರಾದ ಹೈದರಾಬಾದ್ ಮೂಲದ ಡಾ. ರೆಡ್ಡಿ’ಸ್ ಲ್ಯಾಬೊರೇಟರೀಸ್ ನಿಂದ ಯಾವುದೇ ಪ್ರಮಾನದ ಸ್ಪುಟ್ನಿಕ್ ಲಸಿಕೆಗಳು ಪೂರೈಕೆಯಾಗಿಲ್ಲ ಎಂದಿದ್ದಾರೆ.

ಇನ್ನು, ಈ ಬಗ್ಗೆ ಡಾ. ರೆಡ್ಡಿ’ಸ್ ಲ್ಯಾಬೊರೇಟರೀಸ್ ನಿಂದ ಲಸಿಕೆಯ ಪೂರೈಕೆಯಲ್ಲಿನ ವಿಳಂಬದ ಬಗ್ಗೆ ಯಾವುದೇ ಕಾರಣಗಳು ದೊರಕಿಲ್ಲ. ಯಾವುದೇ ರೀತಿಯಲ್ಲಿ ಅಧಿಕೃತವಾಗಿ ಯಾವುದೇ ಮಾಹಿತಿ ಲಭ್ಯವಿಲ್ಲ. ಎರಡೂ ಡೋಸ್ ಗಳು ಒಟ್ಟಿಗೆ ಪೂರೈಸುವ ಕಾರಣದಿಂದಾಗ ವಿಳಂಭವಾಗುತ್ತಿರಬಹುದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನು,  ತನ್ನ ಗುರಗಾಂವ್ ಮತ್ತು ಮೊಹಾಲಿ ಆಸ್ಪತ್ರೆಗಳಲ್ಲಿ ಸ್ಪುಟ್ನಿಕ್ ವಿ ಲಭ್ಯವಾಗಲಿದೆ ಎಂದು ಹೇಳಿದ್ದ ಫೋರ್ಟಿಸ್ ಹೆಲ್ತ್‌ಕೇರ್, ರಷ್ಯಾದ ಲಸಿಕೆಯನ್ನು ಇಲ್ಲಿಯವರೆಗೆ ಜನರಿಗೆ ನೀಡಲು ಪ್ರಾರಂಭಿಸಿಲ್ಲ.

ರಷ್ಯಾದ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ ಮತ್ತು ರಷ್ಯಾದ ನೇರ ಹೂಡಿಕೆ ನಿಧಿ (ಆರ್  ಡಿ ಐ ಎಫ್) ಇದನ್ನು ಜಾಗತಿಕವಾಗಿ ಮಾರಾಟ ಮಾಡುತ್ತಿದೆ.

ಡಾ. ರೆಡ್ಡಿ ಅವರ ಲ್ಯಾಬೋರೆಟರೀಸ್ ರಷ್ಯಾದಿಂದ ಸ್ಪುಟ್ನಿಕ್ ವಿ ಲಸಿಕೆಗಳನ್ನು ಆಮದು ಮಾಡಿಕೊಳ್ಳುತ್ತಿವೆ. ಕಾಲಕ್ರಮೇಣ, ಲಸಿಕೆ ಭಾರತದಲ್ಲಿಯೂ ತಯಾರಾಗಲಿದೆ.

ಖಾಸಗಿ ಕೋವಿಡ್  -19 ವ್ಯಾಕ್ಸಿನೇಷನ್ ಕೇಂದ್ರಗಳಿಗೆ (ಸಿವಿಸಿ) ಸ್ಪುಟ್ನಿಕ್ ವಿ ಲಸಿಕೆಯ ಬೆಲೆಯನ್ನು ಕೇಂದ್ರವು ಪ್ರತಿ ಡೋಸ್‌ ಗೆ 1,145 ರೂ. ನಿಗದಿಗೊಳಿಸಿದ್ದು,  ಕೋವಿಶೀಲ್ಡ್ ನ ಗರಿಷ್ಠ ಬೆಲೆಯನ್ನು ಪ್ರತಿ ಡೋಸ್‌ ಗೆ 780 ರೂ, ಕೋವಾಕ್ಸಿನ್‌ ನ ಪ್ರತಿ ಡೋಸ್‌ ಗೆ 1,410 ರೂ. ನಿಗದಿಗೊಳಿಸಿದೆ.

ಇದನ್ನೂ ಓದಿ : ಮುಂದಿನ ಸಿಎಂ ಬಗ್ಗೆ ಬಹಿರಂಗ ಹೇಳಿಕೆ ನೀಡುವ ಅಧಿಕಾರ ಶಾಸಕರಿಗಿಲ್ಲ: ಕಾಂಗ್ರೆಸ್ ಶಿಸ್ತುಸಮಿತಿ

ಟಾಪ್ ನ್ಯೂಸ್

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.