ಹಠಾತ್‌ ಮರೆಯಾದ ‘ಸೂಪರ್‌ಸ್ಟಾರ್‌’ ಚಲುವಿನ ಸಿರಿ ದೇವಿ!


Team Udayavani, Feb 25, 2018, 12:38 PM IST

111111.jpg

ಮುಂಬಯಿ: ಮೋಹಕ, ಮಾದಕ , ಆರಾಧಕ ಸೌಂದರ್ಯ ಮತ್ತು ಅದ್ಭುತ ನಟನಾ ಕೌಶಲ್ಯದ ಮೂಲಕ ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಅಸ್ತಿತ್ವ ಸ್ಥಾಪಿಸಿಕೊಂಡು  ಮಹಿಳಾ ಸೂಪರ್‌ಸ್ಟಾರ್‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ನಟಿ ಶ್ರೀದೇವಿ 54 ರ ಹರೆಯದಲ್ಲೇ ನಗುನಗುತ್ತಾ ಮರೆಯಾಗಿಬಿಟ್ಟಿದ್ದಾರೆ. 

ದುಬೈನಲ್ಲಿ  ಸಂಬಂಧಿಯ ಮದುವೆ,ಗಣ್ಯರೆಲ್ಲಾ ಸೇರಿದ್ದರು ಎಲ್ಲರೂ ನಗುನಗುತ್ತಾ ಪರಸ್ಪರ ಕುಶಲೋಪರಿಗಳನ್ನು ಮಾತನಾಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಅದಾಗಲೇ ಹೃದಯಾಘಾತದಿಂದ ಪ್ರಾಣಪಕ್ಷಿ ಹಾರಿ ಹೋಗಿತ್ತು.ಯಾರೂ ಆಕೆ ಇಹಲೋಕ ತ್ಯಜಿಸಿದ್ದಾರೆ ಎಂದು ನಂಬಲಿಲ್ಲ. ಆಸ್ಪತ್ರೆಗೆ ಕರೆದೊಯ್ದಾಗ ಅದು ಧೃಡವಾಯಿತು. 

ವಾಟ್ಸಾಪ್‌, ಫೇಸ್‌ಬುಕ್‌ನಂತಹ ಸಾಮಾಜಿಕ ತಾಣಗಳಲ್ಲಿ ಭಾನುವಾರ ಬೆಳಗ್ಗೆ ಸುದ್ದಿ ನೋಡಿದ ಕೋಟ್ಯಂತರ ಜನರು ಇದು ಈ ಹಿಂದೆ ಬಂದ ಹಲವು ಸುದ್ದಿಗಳಂತೆ ಸುಳ್ಳು ಸುದ್ದಿ ಎಂದು ಮೊಬೈಲ್‌ ಬದಿಗಿರಿಸಿದ್ದರು. ಆದರೆ ಟಿವಿ ನೋಡಿದಾಗಲೇ ಹಲವರು ಆಘಾತಕ್ಕೀಡಾಗಿದ್ದಾರೆ. 

ಸುಳ್ಳು ಸುದ್ದಿ ಎನ್ನುವುದು ಬಿಂಬಿತವಾಗುತ್ತಿದ್ದಂತೆ ಶ್ರೀದೇವಿ ಅವರು ಹೃದಯಾಘಾತದಿಂದ ಮೃತಪಟ್ಟಿರುವುದನ್ನು ಮೈದುನ ಸಂಜಯ್‌ ಕಪೂರ್‌ ಅವರು ಧೃಡ ಪಡಿಸಿದ್ದರು. 

ತಮಿಳು ನಾಡಿನ ಶಿವಕಾಶಿಯಲ್ಲಿ 1963 ರಲ್ಲಿ ಶ್ರೀದೇವಿ ಜನಿಸಿದ್ದರು. ಅವರ ತಂದೆ ತಮಿಳಿಗ ಅಯ್ಯಪ್ಪನ್‌ ತಾಯಿ ತೆಲುಗಿನ ರಾಜೇಶ್ವರಿ .

4 ರ ಮಗುವಿದ್ದಾಗಲೆ ತುನೈವನ್‌ ಎಂಬ ತಮಿಳು ಚಿತ್ರದಲ್ಲಿ ಮುರುಗ ಪಾತ್ರ ಮಾಡುವ ಮೂಲಕ ಬಣ್ಣದ ಬದುಕಿಗೆ ಕಾಲಿರಿಸಿದ್ದ ಶ್ರೀದೇವಿ ಆನಂತರ ಭಾರೀ ಬೇಡಿಕೆಯ ನಟಿಯಾಗಿ ಬೆಳೆದಿದ್ದು  ಈಗ ಗತ ಚರಿತ್ರೆ. 

1975 ರಲ್ಲಿ ಜ್ಯೂಲಿ ಚಿತ್ರದಲ್ಲಿ ಸಹನಟಿಯಾಗಿ ಬಾಲಿವುಡ್‌ಗೆ ಕಾಲಿರಿಸಿದ್ದ ಅವರು ನೂರಕ್ಕೂ ಹೆಚ್ಚಕ್ಕು ಚಿತ್ರಗಳಲ್ಲಿ ಮಿಂಚಿದ್ದರು.

ಮೇರು ನಟರಾದ ಕಮಲಹಾಸನ್‌ ಮತ್ತು ರಜನಿಕಾಂತ್‌ ಅವರೊಂದಿಗೆ ಹಲವು ಸೂಪರ್‌ ಹಿಟ್‌ ಚಿತ್ರಗಳಲ್ಲಿ ಅವರು ಕಾಣಿಸಿಕೊಂಡಿದ್ದರು.

1974 ರಲ್ಲಿ ಬಿಡುಗಡೆಯಾಗದ ಕನ್ನಡ ಚಿತ್ರ ಭಕ್ತ ಕುಂಬಾರದಲ್ಲಿ ಬಾಲ ನಟಿಯಾಗಿ ನಟಿಸಿದ್ದ ಶ್ರೀದೇವಿ ಅವರು ಕನ್ನಡ ಚಿತ್ರರಂಗದೊಂದಿಗೆ ಉತ್ತಮ ನಂಟನ್ನು ಹೊಂದಿದ್ದರು.

ಉತ್ತಮ ನೃತ್ಯಗಾತಿಯಾಗಿದ್ದ ಶ್ರೀದೇವಿ ಹಲವು ಯುವ ಹೃದಯಗಳಿಗೆ ಕಿಚ್ಚು ಹಚ್ಚಿದ್ದರು. 

ಹಿಂದಿ, ಕನ್ನಡ, ತಮಿಳು, ತೆಲುಗು ಮತ್ತು ಕನ್ನಡ ಸೆರಿ  300ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಸಿ 5 ಬಾರಿ ಫಿಲ್ಮ್ ಫೇರ್‌ ಪ್ರಶಸ್ತಿಗೆ ಭಾಜನರಾಗಿದ್ದ ಶ್ರೀದೇವಿ ಅವರು ಹಲವು ಉನ್ನತ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ.

1996 ರಲ್ಲಿ ಚಿತ್ರ ನಿರ್ಮಾಪಕ ಬೋನಿ ಕಪೂರ್‌ ಅವರನ್ನು ವಿವಾಹವಾಗಿದ್ದ ಶ್ರೀದೇವಿ ಅವರಿಗೆ ಜಾಹ್ನವಿ ಮತ್ತು ಖುಷಿ ಎಂಬ ಇಬ್ಬರು ಪುತ್ರಿಯರಿದ್ದಾರೆ. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.