ಶಬರಿ ಮಲೆ ದೇವಸ್ಥಾನ ಪ್ರವೇಶಿಸಲು ಯತ್ನಿಸಿದ ಶ್ರೀಲಂಕಾದ ಮಹಿಳೆ!
Team Udayavani, Jan 4, 2019, 5:07 AM IST
ತಿರುವನಂತಪುರಂ: 50 ವರ್ಷದ ಒಳಗಿನ ಇಬ್ಬರು ಮಹಿಳೆಯರು ಶಬರಿಮಲೆ ದೇಗುಲವನ್ನು ಪ್ರವೇಶಿದ 2 ದಿನಗಳ ಬಳಿಕ ಶುಕ್ರವಾರ ಬೆಳಗ್ಗೆ ಶ್ರೀಲಂಕಾದ 46 ರ ಹರೆಯದ ಮಹಿಳೆಯೊಬ್ಬರು ದೇವಾಲಯದೊಳಗೆ ಪ್ರವೇಶಿಸಲು ಮುಂದಾಗಿ ವಿಫಲವಾಗಿದ್ದಾರೆ.
ಮೆಟ್ಟಿಲುಗಳವರೆಗೆ ಆಗಮಿಸಿದ ಮಹಿಳೆ, ತನ್ನ ಋತು ಚಕ್ರ ನಿಂತಿದೆ , ವೈದ್ಯಕೀಯ ಪ್ರಮಾಣ ಪತ್ರವೂ ಇದೆ ಎಂದು ಹೇಳಿದರೂ ಆಕೆಗೆ ದೇವಾಲಯ ಪ್ರವೇಶಿಸಲು ಅವಕಾಶ ಲಭ್ಯವಾಗಲಿಲ್ಲ ಎಂದು ಎಎನ್ಐ ವರದಿ ಮಾಡಿದೆ.
46-year-old Srilankan woman who came to #SabarimalaTemple: I went up to the holy steps, but I was not allowed to go further. I had a medical certificate also.
— ANI (@ANI) January 4, 2019
ಬಿಂದು ಮತ್ತು ಕನಕುದುರ್ಗಾ ಅವರು ದೇವಾಲಯ ಪ್ರವೇಶಿಸಿದ ಬೆನ್ನಲ್ಲೇ ಕೇರಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಓರ್ವ ವ್ಯಕ್ತಿಯನ್ನು ಬಲಿ ಪಡೆದಿದ್ದು ಹಲವರು ಗಾಯಗೊಂಡಿದ್ದಾರೆ. ರಾಜ್ಯದೆಲ್ಲೆಡೆ ಉದ್ವಿಗ್ನ ಸ್ಥಿತಿ ಮುಂದುವರಿದಿದೆ.
ಗುರುವಾರ ರಾಜ್ಯದಲ್ಲಿ ಶಬರಿಮಲೆ ಕರ್ಮ ಸಮಿತಿ ಹರತಾಳ ನಡೆಸಿದ್ದು , ಹಲವೆಡೆ ಬಿಜೆಪಿ ಮತ್ತು ಎನ್ಡಿಎಫ್, ಎಲ್ಡಿಎಫ್ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿ ಹಲವರು ಗಾಯಗೊಂಡಿದ್ದಾರೆ. ಹಲವೆಡೆ ಕಲ್ಲು ತೂರಾಟವೂ ನಡೆದಿದೆ.
ಈಗಾಗಲೇ 750 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದು , 600 ಕ್ಕೂ ಹೆಚ್ಚು ಜನರನ್ನು ಮುಂಜಾಗೃತಾ ಕ್ರಮವಾಗಿ ವಶಕ್ಕೆ ಪಡೆಯಾಗಿದೆ.
ದೇವಾಲಯದ ಪ್ರಾಂಗಣದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ಎಲ್ಲೆಡೆ ಪೊಲೀಸರ ಕಾವಲು ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ