Video; 20 ಬಾರಿ ಚಾಕುವಿನಿಂದ ಚುಚ್ಚಿದ; ಜನರೆದುರು 16 ವರ್ಷದ ಬಾಲಕಿ ಮೇಲೆ ಪ್ರಿಯಕರನ ದಾಳಿ!
Team Udayavani, May 29, 2023, 2:37 PM IST
ಹೊಸದಿಲ್ಲಿ: 16 ವರ್ಷದ ಬಾಲಕಿಯೋರ್ವಳ ಮೇಲೆ ಯುವಕನೋರ್ವ ಸುಮಾರು 20 ಬಾರಿ ಚಾಕುವಿನಿಂದ ಚುಚ್ಚಿ ಕೊಲೆಗೈದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ರೋಶಿನಿ ಶಹಬಾದ್ ಡೈರಿ ಏರಿಯಾದಲ್ಲಿ ನಡೆದಿದೆ. ಸಾರ್ವಜನಿಕರು ನೋಡುತ್ತಿರುವಂತೆಯೇ ಆರೋಪಿ ಯುವಕ ದಾರುಣ ಕೃತ್ಯ ನಡೆಸಿದ್ದಾನೆ. ಸಂಪೂರ್ಣ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿದೆ.
ಆರೋಪಿಯನ್ನು ಸಾಹಿಲ್ ಎಂದು ಗುರುತಿಸಲಾಗಿದೆ. ಆರೋಪಿ ಮತ್ತು ಹುಡುಗಿ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ಘಟನೆಗೆ ಮೊದಲು ಅವರಿಬ್ಬರ ನಡುವೆ ಜಗಳವಾಗಿತ್ತು ಎಂದು ವರದಿಯಾಗಿದೆ.
ಹುಡುಗಿಯು ಪರಿಯಸ್ಥರ ಬರ್ತ್ ಡೇ ಪಾರ್ಟಿಗೆಂದು ತೆರಳುತ್ತಿದ್ದಳು. ಈ ವೇಳೆ ಅಡ್ಡಗಟ್ಟಿದ ಆರೋಪಿ ಸಾಹಿಲ್ ಮನಸೋಇಚ್ಛೆ ಚುಚ್ಚಿದ್ದಾನೆ. ಘಟನೆ ಎಷ್ಟು ಭೀಕರವಾಗಿತ್ತೆಂದರೆ ಒಂದು ಹಂತದಲ್ಲಿ ಚಾಕು ಆಕೆಯ ತಲೆಯಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಬಳಿಕ ಸಾಹಿಲ್ ಬಳಿಯಿದ್ದ ಸಿಮೆಂಟ್ ಸ್ಲ್ಯಾಬೊಂದನ್ನು ಎತ್ತಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಬಹಳಷ್ಟು ಮಂದಿ ಸುತ್ತ ಇದ್ದರೂ, ಯಾರೂ ತಡೆಯುವ ಪ್ರಯತ್ನ ಮಾಡಿಲ್ಲ.
ಸದ್ಯ ಆರೋಪಿ ಸಾಹಿಲ್ ತಲೆ ಮರೆಸಿಕೊಂಡಿದ್ದು, ಆತನ ಹುಡುಕಾಟ ನಡೆಯುತ್ತಿದೆ.
ಮೃತ ಹುಡುಗಿಯ ತಂದೆಯ ದೂರಿನ ಮೇರೆಗೆ ಶಹಬಾದ್ ಡೈರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
Disturbing visuals ‼️
Man named Sahil (father’s name Sarfaraz ) stabbed a minor Hindu girl multiple times, leaving her in a pool of blood in Delhi.
People stood watching & nobody came forward to save her. Minor girl succumbed to injuries during treatment.
Horrible horrible… pic.twitter.com/1WpMVTUGVT
— BALA (@erbmjha) May 29, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
MUST WATCH
ಹೊಸ ಸೇರ್ಪಡೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ