ಸ್ಟಾಲಿನ್ ಸಂಪುಟಕ್ಕೆ ಗಾಂಧಿ, ನೆಹರೂ!
Team Udayavani, May 7, 2021, 6:50 AM IST
ಚೆನ್ನೈ/ಪುದುಚೇರಿ: ತಮಿಳುನಾಡು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಸಂಪುಟದಲ್ಲಿ ನೆಹರೂ, ಗಾಂಧಿ ಸಚಿವರಾಗಲಿದ್ದಾರೆ. ಆಶ್ಚರ್ಯಪಡುವ ಅಗತ್ಯವಿಲ್ಲ. ಶುಕ್ರವಾರ ಮುಖ್ಯ ಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿರುವ ಸ್ಟಾಲಿನ್ ಜತೆಗೆ ಸಚಿವರಾಗಲಿರುವವರ ಹೆಸರುಗಳಿವು. ಚೆನ್ನೈಯ ರಾಜಭವನದಲ್ಲಿ ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಪ್ರಮಾಣ ಬೋಧಿಸಲಿದ್ದಾರೆ. 34 ಮಂದಿ ಸಚಿವರಲ್ಲಿ ಡಿಎಂಕೆಯ ಹಿರಿಯ ತಲೆಯಾಳು ಗಳು, ನೂತನವಾಗಿ ಆಯ್ಕೆಯಾಗಿರುವ ಶಾಸಕರೂ ಇರಲಿದ್ದಾರೆ.
ನೂತನ ಸಚಿವರ ಹೆಸರು ಮತ್ತು ಅವರ ಖಾತೆಗಳನ್ನು ಗುರುವಾರ ಬಿಡುಗಡೆ ಮಾಡಲಾಗಿದೆ. ಹಣಕಾಸು ಖಾತೆಯನ್ನು ಎರಡನೇ ಬಾರಿಗೆ ಆಯ್ಕೆಯಾಗಿರುವ ಪಿ.ಟಿ.ಆರ್.ಪಳನಿವೇಲ್ ತಾಗರಾಜನ್ ನೀಡಲಾಗಿದೆ. ಮೆಸ್ಸಾಚ್ಯುಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ಎಂಬಿಎ, ನ್ಯೂಯಾರ್ಕ್ ಸ್ಟೇಟ್ ವಿವಿ ಯಿಂದ ಪಿಎಚ್ಡಿ ಪಡೆದಿದ್ದಾರೆ. ಜತೆಗೆ ಇನ್ವೆಸ್ಟ್ಮೆಂಟ್ ಬ್ಯಾಂಕರ್ ಕೂಡ ಆಗಿದ್ದಾರೆ. ಕೆ.ಎನ್. ನೆಹರೂ ಮುನಿಸಿಪಲ್ ವ್ಯವಹಾರಗಳು, ನಗರಾಭಿವೃದ್ಧಿ, ಆರ್.ಗಾಂಧಿ ಜವುಳಿ ಸಚಿವರಾಗಲಿದ್ದಾರೆ. ನಿಯೋಜಿತ ಸಿಎಂ ಗೃಹ ಖಾತೆಯನ್ನು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸಂಪುಟದಲ್ಲಿ ಸ್ಥಾನಪಡೆದಿಲ್ಲ.
ಇಂದು ಪ್ರಮಾಣ: ಪುದುಚೇರಿಯಲ್ಲಿ ಆಲ್ ಇಂಡಿಯಾ ಎನ್.ಆರ್.ಕಾಂಗ್ರೆಸ್ ಮುಖಂಡ ಎನ್.ರಂಗಸಾಮಿ ಶುಕ್ರವಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬಗ್ಗೆ ಹಂಗಾಮಿ ಲೆಫ್ಟಿನೆಂಟ್ ಗವರ್ನರ್ ತಮಿಳ್ಸಲೈ ಸುಂದರ ರಾಜನ್ ಪತ್ರವನ್ನು ಹಸ್ತಾಂತರಿಸಿದ್ದಾರೆ. ನೂತನ ಸಚಿವರು ಅನಂತರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು