ತುರ್ತು ಪರಿಸ್ಥಿತಿ ವಿರೋಧಿಸಿದ್ದಕ್ಕೆ ಡಿಎಂಕೆ ಸರ್ಕಾರ ವಜಾ: ಸ್ಟಾಲಿನ್
Team Udayavani, Mar 12, 2023, 6:50 AM IST
ಕೊಯಮತ್ತೂರು: ತುರ್ತು ಪರಿಸ್ಥಿತಿಯನ್ನು ವಿರೋಧಿಸಿದ್ದರಿಂದ 1975ರಲ್ಲಿ ದಿ. ಎಂ.ಕರುಣಾನಿಧಿ ನೇತೃತ್ವದ ಸರ್ಕಾರವನ್ನು ವಜಾಗೊಳಿಸಲಾಯಿತು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ.
ಕೊಯಮತ್ತೂರಿನಲ್ಲಿ ಎಐಎಡಿಎಂಕೆ, ಡಿಎಂಕೆ ಸೇರಿದಂತೆ 4,000ಕ್ಕೂ ಹೆಚ್ಚು ಕಾರ್ಯಕರ್ತರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ತುರ್ತು ಪರಿಸ್ಥಿತಿಯನ್ನು ವಿರೋಧಿಸದಂತೆ ದಿ. ಇಂದಿರಾ ಗಾಂಧಿ ಕರುಣಾನಿಧಿ ಅವರಿಗೆ ಸೂಚಿಸಿದ್ದರು. ಆದರೆ ಪ್ರಜಾಪ್ರಭುತ್ವ ವಿರೋಧಿಯಾದ ಹೇರಿಕೆಯನ್ನು ವಿರೋಧಿಸಿದರು. ಇದರಿಂದ ಸರ್ಕಾರ ಉರುಳಿತು,’ ಎಂದರು.
“ಕರುಣಾನಿಧಿ ಅವರು ಸದಾ ಪ್ರಜಾಪ್ರಭುತ್ವದ ಪರವಾಗಿ ಇದ್ದರು. ಅಧಿಕಾರಕ್ಕಾಗಿ ಎಂದೂ ಜನ ವಿರೋಧಿ ನೀತಿಗಳನ್ನು ಬೆಂಬಲಿಸಲಿಲ್ಲ. “ನನ್ನ ಪ್ರಾಣ ಹೋದರೂ ಪರವಾಗಿಲ್ಲ. ಪ್ರಜಾಪ್ರಭುತ್ವ ಉಳಿಯುವುದು ನನಗೆ ಮುಖ್ಯ’ ಎಂದು ಅವರು ಹೇಳಿದ್ದರು,’ ಎಂದು ಪುತ್ರ ಸ್ಟಾಲಿನ್ ಸ್ಮರಿಸಿದರು. 2024ರ ಚುನಾವಣೆಗೆ ಪ್ರತಿಪಕ್ಷಗಳ ಒಕ್ಕೂಟ ರಚನೆಯ ಪ್ರಯತ್ನಗಳು ನಡೆದಿರುವಂತೆಯೇ ಸ್ಟಾಲಿನ್ ಅವರಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ