ಮುಜಫರಪುರ ದೇಗುಲದಲ್ಲಿ ಕಾಲ್ತುಳಿತ : 15 ಕನ್ವರಿಯಾಗಳಿಗೆ ಗಾಯ
Team Udayavani, Aug 13, 2018, 11:21 AM IST
ಮುಜಫರಪುರ : ಇಲ್ಲಿನ ಗರೀಬ್ ನಾಥ್ ದೇವಾಲಯದಲ್ಲಿ ನೂಕುನುಗ್ಗಲಿನಿಂದ ಸಂಭವಿಸಿದ ಕಾಲತುಳಿತಕ್ಕೆ ಗುರಿಯಾಗಿ ಕನಿಷ್ಠ 15 ಕನ್ವರಿಯಾಗಳು ಗಾಯಗೊಂಡ ಘಟನೆ ಇಂದು ಸೋಮವಾರ ಬೆಳಗ್ಗೆ ನಡೆದಿದೆ.
ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.
ದಿಲ್ಲಿಯಲ್ಲಿ ಈಚೆಗೆ ಕನ್ವರಿಯಾಗಳಿಂದ ನಡೆದಿದ್ದ ಹಿಂಸೆಗೆ ಸುಪ್ರೀಂ ಕೋರ್ಟ್ ಗಂಭೀರವಾಗಿತ್ತು. ಹಿಂಸೆ ಯಾವುದೇ ಧರ್ಮದವರಿಂದ ನಡೆದರೂ ಪೊಲೀಸ್ ವ್ಯವಸ್ಥೆ ಅದನ್ನು ನಿಯತ್ರಿಸಲೇ ಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಹಾಲಿ ಪ್ರಕರಣದಲ್ಲಿ ದೇಗುಲದೊಳಗೆ ನಡೆದಿರುವ ಕಾಲ್ತುಳಿತ ದುರ್ಘಟನೆಗೆ ಮೂಲ ಕಾರಣ ಏನೆಂಬುದು ಖಚಿತವಾಗಿ ತಿಳಿದು ಬಂದಿಲ್ಲ. ದೇವಳದೊಳಗಿನ ಭಕ್ತರ ನೂಕುನುಗ್ಗಲೇ ಕಾರಣವಿರಬಹುದಾದ ವ್ಯವಸ್ಥೆಯಲ್ಲಿನ ವೈಫಲ್ಯವೇ ಇದಕ್ಕೆ ಕಾರಣವೆಂದು ತಿಳಿಯಲಾಗಿದೆ.
ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಲತುಳಿತಕ್ಕೆ ಗುರಿಯಾದ ಕನ್ವರಿಯಾಗಳಿಗೆ ಚಿಕಿತ್ಸೆ ನೀಡಲಾಗತ್ತಿದೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ