ಸ್ಟಾರ್ಟಪ್ ಇಂಡಿಯಾ ಇರಲಿ ಷಟಪ್ ಇಂಡಿಯಾ ಬೇಡ
Team Udayavani, Oct 27, 2017, 7:00 AM IST
ಹೊಸದಿಲ್ಲಿ: ಸ್ಟಾರ್ಟ್ ಅಪ್ ಇಂಡಿಯಾಗೆ ನಮ್ಮ ಬೆಂಬಲ ಇದೆ. ಆದರೆ ಷಟ್ಅಪ್ ಇಂಡಿಯಾಗೆ ಬೆಂಬಲ ಇಲ್ಲ ಎಂದಿದ್ದಾರೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ. ದಿಲ್ಲಿಯ ಕಾರ್ಯಕ್ರಮದಲ್ಲಿ ಮಾತ ನಾಡಿದ ಅವರು, ಸ್ಟಾರ್ಟಪ್ ಇಂಡಿಯಾ ದಿಂದ ದೇಶದ ಅರ್ಥ ವ್ಯವಸ್ಥೆಗೆ ಅನುಕೂಲ ವಾದರೆ, ಕೇಂದ್ರ ಸರಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಬೆಂಬಲ ಇಲ್ಲವೆಂದಿದ್ದಾರೆ. ಯುಪಿಎ ಸರಕಾರದಲ್ಲಿ ಹಲವು ನ್ಯೂನತೆಗಳಿದ್ದವು ಎನ್ನುವುದನ್ನು ಒಪ್ಪಿಕೊಂಡ ಅವರು, ಮೂರೂವರೆ ವರ್ಷಗಳ ಬಳಿಕ ಹಾಲಿ ಬಿಜೆಪಿ ಸರಕಾರದ ಮೇಲೆ ಜನರ ನಂಬಿಕೆ ಹುಸಿಯಾಗುತ್ತದೆ ಎಂದಿದ್ದಾರೆ.
ನೋಟು ಅಮಾನ್ಯ ಮತ್ತು ಜಿಎಸ್ಟಿ ಜಾರಿಯ ಮೂಲಕ ಅರ್ಥ ವ್ಯವಸ್ಥೆಯ ಹೃದಯಕ್ಕೆ ದ್ವಿಘಾತವನ್ನು ಪ್ರಧಾನಿ ಮೋದಿ ಮತ್ತು ಹಣಕಾಸು ಸಚಿವ ಅರುಣ್ ಜೇಟಿÉ ನೀಡಿದ್ದಾರೆ ಎಂದು ಟೀಕಿಸಿದ್ದಾರೆ. ಚೀನ ಪ್ರತಿ ದಿನಕ್ಕೆ 50 ಸಾವಿರ ಉದ್ಯೋಗ ಸೃಷ್ಟಿ ಮಾಡುತ್ತಿದ್ದರೆ, ಭಾರತದಲ್ಲಿ ಪ್ರತಿ ದಿನ 450 ಉದ್ಯೋಗ ಸೃಷ್ಟಿ ಮಾತ್ರವೇ ಆಗುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ದೂರಿದ್ದಾರೆ.
ವಿವಾಹ ಆಗುವಾಗ ಆಗುತ್ತದೆ…
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ “ಯಾವಾಗ ವಿವಾಹವಾಗ್ತಿàರಿ?’ ಎಂಬ ಪ್ರಶ್ನೆ ಅತ್ಯಂತ ಸಹಜ. ಆದರೆ ಪ್ರತಿ ಬಾರಿಯೂ ಇದನ್ನು ಅವರು ನಿರ್ಲಕ್ಷಿಸುತ್ತಾರೆ. ಈ ಬಾರಿ ಚಾಂಪಿಯನ್ ಬಾಕ್ಸರ್ ವಿಜೇಂದರ್ ಸಿಂಗ್ ಕೇಳಿದ ಪ್ರಶ್ನೆಗೆ ರಾಹುಲ್ ಪ್ರತಿಕ್ರಿಯಿಸದೇ ಇರಲು ಸಾಧ್ಯವಾಗಿಲ್ಲ. ಇದಕ್ಕೆ ಉತ್ತರಿಸಿದ ರಾಹುಲ್ “ಯಾವಾಗ ಆಗಬೇಕೋ ಅದು ಆಗಿಯೇ ತೀರುತ್ತದೆ. ನಾನು ವಿಧಿಯ ಮೇಲೆ ನಂಬಿಕೆ ಇರಿಸಿದ್ದೇನೆ’ ಎಂದರು. ರಾಹುಲ್ ಭಯ್ನಾ ಯಾವಾಗ ವಿವಾÖವಾಗುತ್ತಾರೆ ಎಂದು ಜನರು ಕೇಳುತ್ತಾರೆ. ಎಲ್ಲರೂ ನಿಮ್ಮ ವಿವಾಹಕ್ಕೆ ಎದುರು ನೋಡುತ್ತಿದ್ದಾರೆ. ನೀವು ಪ್ರಧಾನಿಯಾದ ನಂತರ ವಿವಾಹವಾದರೆ ವಿಶಿಷ್ಟವಾಗಿರುತ್ತದೆ ಎಂದು ವಿಜೇಂದರ್ ಸಿಂಗ್ ಕೇಳಿದರು. ಇದಕ್ಕೆ ರಾಹುಲ್ ಇದು ಅತ್ಯಂತ ಹಳೆಯ ಪ್ರಶ್ನೆ ಎಂದು ಮುಗುಳ್ನಗು ಬೀರಿದರು. ಆರಂಭದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಇದಕ್ಕೆ ಉತ್ತರಿಸಲು ನಿರಾಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್