ಸ್ಟಾರ್ಟ್‌ಅಪ್‌: ಪ್ರಧಾನಿ ಮೋದಿ ಮೆಚ್ಚುಗೆ


Team Udayavani, Nov 29, 2021, 6:20 AM IST

ಸ್ಟಾರ್ಟ್‌ಅಪ್‌: ಪ್ರಧಾನಿ ಮೋದಿ ಮೆಚ್ಚುಗೆ

ಹೊಸದಿಲ್ಲಿ: ಇದು ಸ್ಟಾರ್ಟ್‌ಅಪ್‌ ಗಳ ಯುಗವಾಗಿದ್ದು, ಈ ಕ್ಷೇತ್ರದಲ್ಲಿ ಭಾರತವು ಜಗತ್ತಲ್ಲೇ ಮುಂಚೂಣಿಯಲ್ಲಿದೆ. ದೇಶದಲ್ಲಿರುವ 70ಕ್ಕೂ ಅಧಿಕ ಸ್ಟಾರ್ಟ್‌ಅಪ್‌ ಗಳ ಮಾರುಕಟ್ಟೆ ಮೌಲ್ಯ 7,500 ಕೋಟಿ ರೂ.ಗೂ ಹೆಚ್ಚಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರವಿವಾರ ಪ್ರಸಾರವಾದ 83ನೇ ಆವೃತ್ತಿಯ ಮನ್‌ ಕೀ ಬಾತ್‌ ಕಾರ್ಯಕ್ರಮದಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಅಧಿಕಾರ ತಮಗೆ ಮಹತ್ವದ್ದಲ್ಲ ಎಂದು ಹೇಳಿಕೊಂಡಿರುವ ಅವರು, “ನಾನು ಇವತ್ತಿಗೂ ಅಧಿಕಾರದಲ್ಲಿಲ್ಲ ಮತ್ತು ಮುಂದೆಯೂ ಅಧಿಕಾರದಲ್ಲಿರಲು ಬಯಸುವುದಿಲ್ಲ. ನಾನು ಯಾವತ್ತೂ ಸೇವೆ ಮಾಡಲು ಬಯಸುತ್ತೇನೆ. ಅದಕ್ಕಾಗಿಯೇ ನಾನು ಪ್ರಧಾನಮಂತ್ರಿ ಹುದ್ದೆಯಲ್ಲಿದ್ದೇನೆ. ಇವೆಲ್ಲವೂ ಅಧಿಕಾರಕ್ಕಾಗಿ ಅಲ್ಲ, ಎಲ್ಲವೂ ಸೇವಾ ಕೈಂಕರ್ಯಕ್ಕಾಗಿ’ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರ ಜಾರಿಗೊಳಿಸಿದ ಯೋಜನೆಗಳಿಂದ ಜೀವನ ಕ್ರಮಗಳಲ್ಲಿ ಸುಧಾರಣೆಯಾಗಿದೆ ಎಂದು ಹೇಳಿದ ಅವರು, ಯೋಜನೆಗಳ ಫ‌ಲಾನುಭವಿಗಳಿಂದ ಪ್ರಯೋಜನಗಳ ಅನುಭವ ಕೇಳಿದಾಗ ಭಾವ ಪರವಶನಾಗುತ್ತೇನೆ ಎಂದಿದ್ದಾರೆ. ಅದಕ್ಕೆ ಪೂರಕವಾಗಿ, ಆಯುಷ್ಮಾನ್‌ ಭಾರತ ಯೋಜನೆಯ ಫ‌ಲಾನುಭವಿ ರಾಜೇಶ್‌ ಕುಮಾರ್‌ ಪ್ರಜಾಪತಿ ಎಂಬವರ ಜತೆಗೆ ಸಂವಾದ ನಡೆಸಿದ ಮೋದಿ, ಯೋಜನೆಯಿಂದ ಉಂಟಾಗಿದ್ದ ಅನುಕೂಲಗಳ ವಿವರ ಪಡೆದಿದ್ದಾರೆ.

ಇದನ್ನೂ ಓದಿ:ಜಿಯೋ ಬಳಕೆದಾರರಿಗೆ ಕಹಿ ಸುದ್ದಿ

ಇದೇ ವೇಳೆ ದೇಶದಿಂದ ಕೊರೊನಾ ಇನ್ನೂ ಸಂಪೂರ್ಣವಾಗಿ ಹೋಗಿಲ್ಲ. ಎಲ್ಲರೂ ಸುರಕ್ಷತ ಕ್ರಮಗಳನ್ನು ಅನುಸರಿಸಬೇಕು ಎಂದೂ ಸಲಹೆ ನೀಡಿದ್ದಾರೆ.

ಮ್ಯೂಸಿಕ್‌ ಆ್ಯಪ್‌ಗಳಲ್ಲೂ ಇನ್ನು ಮನ್‌ ಕೀ ಬಾತ್‌
ಪ್ರಧಾನಿ ಮೋದಿ ಅವರ “ಮನ್‌ ಕೀ ಬಾತ್‌’ ಕಾರ್ಯಕ್ರಮ ಇನ್ನು ಎಲ್ಲ ಖಾಸಗಿ ರೇಡಿಯೋ ಮತ್ತು ಸಂಗೀತ ಆ್ಯಪ್‌ ಗಳಲ್ಲೂ ಲಭ್ಯವಾಗಲಿದೆ. ನ್ಪೋಟಿಫೈ, ಹಂಗಾಮಾ, ಗಾನ, ಜಿಯೋಸಾವನ್‌, ವಿಂಕ್‌ ಮತ್ತು ಅಮೆಜಾನ್‌ ಮ್ಯೂಸಿಕ್‌ಗಳಲ್ಲಿ ಮನ್‌ ಕೀ ಬಾತ್‌ ಪ್ರಸಾರವಾಗಲಿದೆ. ಇದ ರಿಂದಾಗಿ ಹೆಚ್ಚಿನ ಜನರನ್ನು ವಿಶೇಷವಾಗಿ ಯುವಜನತೆಯನ್ನು ತಲುಪಲು ಸಾಧ್ಯವಾಗಲಿದೆ.

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.