ರಾಜ್ಯ ಯೋಜನೆಗಳ ವಿಲೀನ?
Team Udayavani, Feb 14, 2018, 9:32 AM IST
ಹೊಸದಿಲ್ಲಿ: ಕೇಂದ್ರ ಬಜೆಟ್ನಲ್ಲಿ ಘೋಷಣೆ ಮಾಡಲಾಗಿರುವ ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ (ಎನ್ಎಚ್ಪಿಎಸ್)ಯಲ್ಲಿ ಕರ್ನಾಟಕ, ಆಂಧ್ರಪ್ರದೇಶ ಸರಕಾರಗಳು ಈಗಾಗಲೇ ಘೋಷಣೆ ಮಾಡಿರುವ ಆರೋಗ್ಯ ಯೋಜನೆಗಳನ್ನೂ ವಿಲೀನ ಮಾಡುವ ಸಾಧ್ಯತೆಯಿದೆ. ಈ ಬಗ್ಗೆ ಶೀಘ್ರದಲ್ಲಿಯೇ ವಿವಿಧ ರಾಜ್ಯಗಳ ಆರೋಗ್ಯ ಕಾರ್ಯದರ್ಶಿಗಳ ಜತೆಗೆ ಸಭೆ ನಡೆಯಲಿದೆ. ಅದರಲ್ಲಿ ಯೋಜನೆಯ ರೂಪುರೇಷೆಗಳನ್ನು ಚರ್ಚಿಸಿ ಪರಾಮರ್ಶಿಸಲಾಗುತ್ತದೆ. ಯೋಜನೆಯ ಅಷ್ಟೂ ವೆಚ್ಚವನ್ನು ಕೇಂದ್ರ ಮತ್ತು ರಾಜ್ಯಗಳು 60:40 ಅನುಪಾತದಲ್ಲಿ ಹಂಚಿಕೊಳ್ಳುವ ಬಗ್ಗೆಯೂ ವಿಚಾರ ವಿನಿಮಯ ನಡೆವ ಸಾಧ್ಯತೆ ಇದೆ.
10 ಕೋಟಿ ಬಡ ಕುಟುಂಬಗಳಿಗೆ 5 ಲಕ್ಷ ರೂ. ವಿಮೆ ನೀಡುವ ಯೋಜನೆ ಇದಾಗಿದೆ. ಅದಕ್ಕಾಗಿ ಕೇಂದ್ರ ಸರಕಾರದ ವತಿಯಿಂದ ಈಗಾಗಲೇ 2 ಸಾವಿರ ಕೋಟಿ ರೂ. ಮೀಸಲಾಗಿ ಇರಿಸಲಾಗಿದೆ. ಯೋಜನೆ ಹೇಗೆ ಇರಬೇಕು ಮತ್ತು ಯಾವ ರೀತಿ ಜಾರಿಯಾಗಬೇಕು ಎಂಬ ವಿವರವಾಗಿರುವ ಟಿಪ್ಪಣಿ ಈಗಾಗಲೇ ಸಿದ್ಧಗೊಂಡಿದೆ.
ನೀತಿ ಆಯೋಗ ನಡೆಸಿದ ಅಧ್ಯಯನದಲ್ಲಿ ವಿವಿಧ ರಾಜ್ಯಗಳಲ್ಲಿರುವ ಆರೋಗ್ಯ ಯೋಜನೆಗಳನ್ನು ಕೂಡ ಕೇಂದ್ರದ ಯೋಜನೆ ವ್ಯಾಪ್ತಿಯಲ್ಲಿ ವಿಲೀನಗೊಳಿಸುವ ಬಗ್ಗೆ ನೀತಿ ಆಯೋಗ ಅಧ್ಯಯನ ನಡೆಸಿದೆ. ಜತೆಗೆ ಅದರ ಅನುಷ್ಠಾನಕ್ಕಾಗಿ 12 ಸಾವಿರ ಕೋಟಿ ರೂ. ಬೇಕಾಗಬಹುದೆಂದು ಅದು ಅಂದಾಜಿಸಿದೆ. ಸುಮಾರು ಎರಡು ವರ್ಷಗಳಿಂದಲೇ ಯೋಜನೆ ಜಾರಿ ಬಗ್ಗೆ ಅಧ್ಯಯನ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ