ಹಳ್ಳಿಗಾಡಿನ ಸೇವೆಗೆ ಕೋಟಾ ಕೃಪೆ ; ವೈದ್ಯಕೀಯ ಸ್ನಾತಕೋತ್ತರ ಪ್ರವೇಶ: ಸುಪ್ರೀಂ ಮಹತ್ವದ ಆದೇಶ
Team Udayavani, Sep 1, 2020, 6:50 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಗ್ರಾಮೀಣ, ಗುಡ್ಡಗಾಡು ಮತ್ತು ದುರ್ಗಮ ಪ್ರಾಂತಗಳಲ್ಲಿ ಸೇವೆ ಸಲ್ಲಿಸಿದ ಎಂಬಿಬಿಎಸ್ ವೈದ್ಯರಿಗೆ ವೈದ್ಯಕೀಯ ಸ್ನಾತಕೋತ್ತರ ಪ್ರವೇಶದಲ್ಲಿ ಮೀಸಲಾತಿ ಕಲ್ಪಿಸಲು ಸು. ಕೋರ್ಟ್ ಸಮ್ಮತಿಸಿದೆ.
ಕೋಟಾ ಕುರಿತಂತೆ ಹಲವಾರು ವೈದ್ಯರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ನ ಸಾಂವಿಧಾನಿಕ ಪೀಠ, ಈ ರೀತಿ ಕೋಟಾ ನಿಗದಿ ಕಾನೂನು ಬಾಹಿರವಲ್ಲ. ಹಾಗಾಗಿ ರಾಜ್ಯ ಸರಕಾರಗಳು ಈ ಕೋಟಾ ನಿರ್ಧರಿಸಬಹುದು.
ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ)ಗೆ ಈ ಕೋಟಾ ನಿಗದಿಪಡಿಸಲು ಸಾಂವಿಧಾನಿಕ ಅಧಿಕಾರ ಇಲ್ಲವಾದರೆ ರಾಜ್ಯ ಸರಕಾರಗಳು ತಮ್ಮ ಸ್ವ ವಿವೇಚನೆಯ ಮೇರೆಗೆ ನಿಗದಿಪಡಿಸಬಹುದು.
ಈ ತೀರ್ಪು ಈಗಾಗಲೇ ಸ್ನಾತಕೋತ್ತರ ವೈದ್ಯಕೀಯ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ, ಮುಂದೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಅನ್ವಯಿಸಲಿದೆ ಎಂದಿದೆ.
ಕೆಲವು ರಾಜ್ಯಗಳು ಇಂಥ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಉಚಿತ ಅಂಕ ನೀಡುತ್ತಿರುವುದು ಔಚಿತ್ಯಪೂರ್ಣ ಎಂದೂ ನ್ಯಾಯಪೀಠ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು