ಪೌರತ್ವ ಕಾಯ್ದೆ ಜಾರಿ ತಡೆಯೋ ಅಧಿಕಾರ ರಾಜ್ಯಕ್ಕೆ ಇಲ್ಲ;ಸಂವಿಧಾನದ 7ನೇ ಕಲಂನಲ್ಲೇನಿದೆ?
ಕೇಂದ್ರ ಸರ್ಕಾರದ ಅಧಿಕೃತ ಆದೇಶದ ನಂತರ ಕಾಯ್ದೆಯಾಗಿ ರೂಪುಗೊಂಡಿದೆ
Team Udayavani, Dec 13, 2019, 6:07 PM IST
ನವದೆಹಲಿ:ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸುವುದನ್ನು ತಡೆಯಲು ಯಾವುದೇ ರಾಜ್ಯ ಸರ್ಕಾರಕ್ಕೆ ಅಧಿಕಾರ ಇಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರುದ್ಧ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ಅಧಿಕೃತ ಆದೇಶದ ನಂತರ ಕಾಯ್ದೆಯಾಗಿ ರೂಪುಗೊಂಡ ಸಿಎಬಿ ಜಾರಿಯನ್ನು ತಡೆಯಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರ ಇಲ್ಲ ಎಂದು ತಿಳಿಸಿದೆ.
ಕೇಂದ್ರ ಸರ್ಕಾರದ ಕಾಯ್ದೆಯನ್ನು ಸಂವಿಧಾನದ 7ನೇ ಶೆಡ್ಯೂಲ್ ಪ್ರಕಾರ ಶಾಸನ ಮಾಡಿದ ನಂತರ ರಾಜ್ಯ ಸರ್ಕಾರಗಳಿಗೆ ಅದನ್ನು ತಿರಸ್ಕರಿಸುವ ಯಾವ ಅಧಿಕಾರವೂ ಇಲ್ಲ ಎಂದು ಸಚಿವಾಲಯದ ಅಧಿಕಾರಿಗಳು ವಿವರಿಸಿದ್ದಾರೆ. ಯಾವುದೇ ವ್ಯಕ್ತಿಗೆ ಪೌರತ್ವ ನೀಡುವುದು ಕೇಂದ್ರದ ವಿಶೇಷಾಧಿಕಾರವಾಗಿದೆ ಎಂದು ಹೇಳಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೊಳಿಸಲು ಪಶ್ಚಿಮಬಂಗಾಳ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಚತ್ತೀಸ್ ಗಢ್ ಮತ್ತು ಪಂಜಾಬ್ ವಿರೋಧ ವ್ಯಕ್ತಪಡಿಸುತ್ತಿದ್ದು, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅವಕಾಶ ಕೊಡುವುದಿಲ್ಲ ಎಂದು ಹೇಳಿವೆ. ನೆರೆಯ ಬಾಂಗ್ಲಾದೇಶದ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡಲಿದ್ದು, ಇದೊಂದು ತಾರತಮ್ಯದ ಮತ್ತು ಅಸಾಂವಿಧಾನಿಕ ಎಂದು ಆರೋಪಿಸಿವೆ.
ಪೌರತ್ವ ಕಾಯ್ದೆ ಭಾರತವನ್ನು ಇಬ್ಭಾಗಿಸುತ್ತದೆ. ಎಲ್ಲಿಯವರೆಗೆ ನಾವು ಅಧಿಕಾರದಲ್ಲಿ ಇರುತ್ತೇವೆಯೋ ಅಲ್ಲಿವರೆಗೆ ರಾಜ್ಯದಿಂದ ಒಬ್ಬನೇ ಒಬ್ಬ ವ್ಯಕ್ತಿಯನ್ನು ದೇಶವನ್ನು ತೊರೆಯಲು ಬಿಡುವುದಿಲ್ಲ ಎಂದು ಮಮತಾ ಬ್ಯಾನರ್ಜಿ ಗುಡುಗಿದ್ದಾರೆ.
ತಮ್ಮ ರಾಜ್ಯದಲ್ಲಿ ಅಸಾಂವಿಧಾನಿಕ ಕಾನೂನಿಗೆ ಜಾಗವಿಲ್ಲ. ಅದು ಒಂದು ಸಮುದಾಯದ ವಿರುದ್ಧವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ದೂರಿದ್ದಾರೆ. ಭಾರತದ ಸಂವಿಧಾನ ಪ್ರತಿಯೊಬ್ಬ ಭಾರತೀಯನಿಗೂ ಧರ್ಮ, ಜಾತಿ ಹಾಗೂ ಭಾಷೆಯನ್ನು ಮೀರಿ ಪೌರತ್ವದ ಹಕ್ಕನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!