ರಾಷ್ಟ್ರಪತಿ ಭವನದಲ್ಲಿ ಸಾವು
Team Udayavani, Jun 9, 2018, 6:00 AM IST
ಹೊಸದಿಲ್ಲಿ: ರಾಷ್ಟ್ರಪತಿ ಭವನದ ಸಿಬ್ಬಂದಿ ವಸತಿಗೃಹದಲ್ಲಿ ಗುರುವಾರ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಅದು ರಾಷ್ಟ್ರಪತಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯದ್ದು ಎಂದು ಪೊಲೀಸರು ತಿಳಿಸಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದ ವ್ಯಕ್ತಿ 5 ದಿನಗಳ ಹಿಂದೆಯೇ ತಮ್ಮ ಕೊಠಡಿಯಲ್ಲೇ ಮೃತಪಟ್ಟಿದ್ದಾರೆ. ಆದರೆ, ಈ ವಿಷಯ ಯಾರಿಗೂ ಗೊತ್ತಾಗಿರಲಿಲ್ಲ. ಗುರುವಾರ ಕೆಟ್ಟ ವಾಸನೆ ಬರುತ್ತಿದೆ ಎಂದು ನಿವಾಸಿಗಳು ದೂರಿದ್ದು, ಪರಿಶೀಲಿಸಿದಾಗ ಕೊಠಡಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಠಡಿಗೆ ಒಳಗಿನಿಂದಲೇ ಚಿಲಕ ಹಾಕಲಾಗಿತ್ತು. ವ್ಯಕ್ತಿಯು ಹೃದಯಾಘಾತದಿಂದ ನಿಧನರಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು