
1990ರಿಂದಲೇ ಆರಂಭ; ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಯಾವ ಹಂತದಲ್ಲಿದೆ ಗೊತ್ತಾ?
Team Udayavani, Nov 9, 2019, 11:54 AM IST

ನವದೆಹಲಿ/ಉತ್ತರಪ್ರದೇಶ: ರಾಜಕೀಯವಾಗಿ ಸೂಕ್ಷ್ಮವಾಗಿರುವ ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೋಗೊಯಿ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ ಪೀಠ ಶನಿವಾರ ಸರ್ವಾನುಮತದ ತೀರ್ಪನ್ನು ನೀಡಿದೆ.
ಅಯೋಧ್ಯೆಯಲ್ಲಿಯೇ ರಾಮಮಂದಿರ ನಿರ್ಮಾಣಕ್ಕೆ ಕಾನೂನು ರೂಪಿಸುವಂತೆ ಸುಪ್ರೀಂಪೀಠ ಕೇಂದ್ರಕ್ಕೆ ಸೂಚನೆ ನೀಡಿದ್ದು, ಸುನ್ನಿ ವಕ್ಫ್ ಬೋರ್ಡ್ ಗೆ ಅಯೋಧ್ಯೆಯಲ್ಲಿಯೇ ಐದು ಎಕರೆ ಜಾಗ ನೀಡಬೇಕೆಂದು ಹೇಳಿದೆ. 2.77ಎಕರೆ ರಾಮಲಲ್ಲಾ ವಶಕ್ಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ದಶಕಗಳಿಂದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಹೇಗೆ ನಡೆಯುತ್ತಿದೆ ಎಂಬ ಸಂಕ್ಷಿಪ್ತ ನೋಟ ಇಲ್ಲಿದೆ.
1992ರ ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸಗೊಳ್ಳುವ ಘಟನೆಯ ಮುನ್ನವೇ ಅಯೋಧ್ಯೆಯ ಕರಸೇವಕಪುರಂನಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ಚಟುವಟಿಕೆ 1990ರಿಂದಲೇ ಆರಂಭಗೊಂಡಿತ್ತು. ನಂತರವೂ ಕೂಡಾ ಪ್ರಕರಣ ಕೋರ್ಟ್ ಕಟಕಟೆಯಲ್ಲಿ ಇದ್ದಾಗಲೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಮುಂದುವರಿದಿತ್ತು.
1990ರಲ್ಲಿ 150 ಮಂದಿ ಕುಶಲ ಕರ್ಮಿಗಳು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದರು. ಪ್ರತಿದಿನ ಬೆಳಗ್ಗೆ 7ಗಂಟೆಯಿಂದ ಸಂಜೆ 5ಗಂಟೆವರೆಗೆ ಕೆಲಸ ಮಾಡುತ್ತಿದ್ದರು. ಅಮಾವಾಸ್ಯೆ ದಿನ ಮಾತ್ರ ಕೆಲಸ ಸ್ಥಗಿತಗೊಳಿಸುತ್ತಿದ್ದರು ಎಂದು ಕಾರ್ಯಶಾಲಾದ ಉಸ್ತುವಾರಿ ವಹಿಸಿಕೊಂಡಿದ್ದ ಅನ್ನು ಭಾಯ್ ಸೋಮಪುರ್ ಅಭಿಪ್ರಾಯವ್ಯಕ್ತಪಡಿಸಿದ್ದರು.
ಸದ್ಯ ಕೆಲವೇ ಕೆಲವು ಕುಶಲಕರ್ಮಿಗಳು ರಾಮಮಂದಿರ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದು, ಇನ್ನು ಕುಶಲಕರ್ಮಿಗಳ ಸಂಖ್ಯೆ ಹೆಚ್ಚಿಸಲಾಗುವುದು ಎಂದು ತಿಳಿಸಿದ್ದಾರೆ. ಈಗ ಸುಮಾರು ಶೇ.60ರಷ್ಟು ಕೆಲಸ ಮುಕ್ತಾಯಗೊಂಡಿದ್ದು, ಮೊದಲ ಮಹಡಿಗೆ ಸಂಬಂಧಿಸಿದ ಕಾರ್ಯ ಮುಕ್ತಾಯಗೊಂಡಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

ಬಳ್ಳಾರಿಯಲ್ಲಿ ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!!

180 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಏರ್ ಏಷ್ಯಾ ವಿಮಾನಕ್ಕೆ ಹಕ್ಕಿ ಢಿಕ್ಕಿ ಲಕ್ನೋದಲ್ಲಿ ತುರ್ತು ಭೂಸ್ಪರ್ಶ

ಡಾ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ : ಅಭಿಮಾನಿಗಳ ಭಾವನೆಗಳಿಗೆ ಸಕಾರಾತ್ಮಕ ಸ್ಪಂದನೆ: ಸಿಎಂ

ಪಾಕಿಸ್ತಾನದಲ್ಲಿ 4.1 ತೀವ್ರತೆಯ ಭೂಕಂಪ: ಕಳೆದ 10 ದಿನದಲ್ಲಿ 2ನೇ ಬಾರಿ ಕಂಪಿಸಿದ ಭೂಮಿ

ಕಂದಕಕ್ಕೆ ಉರುಳಿದ ಪ್ರಯಾಣಿಕರ ವಾಹನ: 39 ಮಂದಿ ಸ್ಥಳದಲ್ಲೇ ಸಾವು