ಜಂತರ್ ಮಂತರ್ನಲ್ಲಿ ಎಲ್ಲ ಪ್ರತಿಭಟನೆ ನಿಲ್ಲಿಸಿ: ಎನ್ಜಿಟಿ ಆದೇಶ
Team Udayavani, Oct 5, 2017, 5:36 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯ ಹೃದಯ ಭಾಗದಲ್ಲಿರುವ ಐತಿಹಾಸಿಕ ಜಂತರ್ ಮಂತರ್ ಪ್ರದೇಶದಲ್ಲಿ ಎಲ್ಲ ಬಗೆಯ ಧರಣಿ, ಪ್ರತಿಭಟನೆ, ಜನ ಜಮಾವಣೆಯನ್ನು ತತ್ಕ್ಷಣದಿಂದ ತಡೆಯಬೇಕು ಎಂದು ಹಸಿರು ರಾಷ್ಟ್ರೀಯ ನ್ಯಾಯ ಮಂಡಳಿ ದಿಲ್ಲಿ ಸರಕಾರಕ್ಕೆ ಆದೇಶ ನೀಡಿದೆ.
ಅಂತೆಯೇ ಕನ್ಹಾಟ್ ಪ್ಲೇಸ್ ಪ್ರದೇಶಕ್ಕೆ ಸಮೀಪದ ರಸ್ತೆಯ ಉದ್ದಕ್ಕೂ ಕಂಡು ಬರುವ ಎಲ್ಲ ತಾತ್ಕಾಲಿಕ ರಚನೆಗಳನ್ನು, ಲೌಡ್ ಸ್ಪೀಕರ್ಗಳನ್ನು ಮತ್ತು ಸಾರ್ವಜನಿಕ ಭಾಷಣ ವ್ಯವಸ್ಥೆಯನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದು ಜಸ್ಟಿಸ್ ಆರ್ ಎಸ್ ರಾಠೊಡ್ ನೇತೃತ್ವದ ಹಸಿರು ನ್ಯಾಯ ಮಂಡಳಿ ಪೀಠ ದಿಲ್ಲಿ ಮುನಿಸಿಪಲ್ ಕೌನ್ಸಿಲ್ (ಎನಎಂಡಿಸಿ)ಗೆ ಆದೇಶಿಸಿದೆ.
ಜಂತರ್ ಮಂತರ್ ಪ್ರದೇಶದಲ್ಲಿ ಎಲ್ಲ ಬಗೆಯ ಧರಣಿ, ಪ್ರತಿಭಟನೆ, ಆಂದೋಲನ, ಸತ್ಯಾಗ್ರಹ, ಜನ ಸೇರುವಿಕೆ, ಸಾರ್ವಜನಿಕ ಭಾಷಣ ಕಾರ್ಯಕ್ರಮಗಳು, ಧ್ವನಿ ವರ್ಧಕಗಳ ಬಳಕೆ ಇತ್ಯಾದಿಗಳನ್ನು ಈ ಕೂಡಲೇ ನಿಲ್ಲಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಉತ್ತರದಾಯಿಗಳಾಗಿರುವ ದಿಲ್ಲಿ ಸರಕಾರ, ಎನ್ಎಂಡಿಸಿ ಹಾಗೂ ದಿಲ್ಲಿ ಪೊಲೀಸ್ ಕಮಿಷನರ್ಗೆ ಆದೇಶ ನೀಡಿದೆ.
ಜಂತರ್ ಮಂತರ್ ಪ್ರದೇಶದಲ್ಲಿ ನಡೆಯುತ್ತಿರುವ ಎಲ್ಲ ಪ್ರತಿಭಟನೆ, ಆಂದೋಲನ ಇತ್ಯಾದಿಗಳು ವಾಯು ಮಾಲಿನ್ಯ ಸೇರಿದಂತೆ ಪರಿಸರ ಸಂರಕ್ಷಣೆಯ ಕಾನೂನುಗಳ ಸಾರಾ ಸಗಟು ಉಲ್ಲಂಘನೆಯಾಗಿವೆ ಎಂದು ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು