ವಿವಾದಿತ ಸ್ಥಳದಲ್ಲಿ ನಮಾಜ್ ನಡೆಸುವುದನ್ನು ನಿಲ್ಲಿಸಿ: ರಿಜ್ವಿ
Team Udayavani, Mar 16, 2018, 11:07 AM IST
ಲಕ್ನೋ : ವಿವಾದಿತ ಧಾರ್ಮಿಕ ಸ್ಥಳದಲ್ಲಿ ಮುಸ್ಲಿಂ ಸಮುದಾಯದವರು ನಮಾಜ್ ನಡೆಸಬಾರದು ಎಂಬ ಹೊಸ ಸಲಹೆಯನ್ನು ಉತ್ತರ ಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಬೋರ್ಡ್ (ಯುಪಿಎಸ್ಸಿಡಬ್ಲ್ಯುಬಿ)ನ ಮುಖ್ಯಸ್ಥರಾಗಿರುವ ಡಾ. ವಸೀಂ ರಿಜ್ವಿ ಅವರು ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ (ಎಐಎಂಪಿಎಲ್ಬಿ) ಗೆ ನೀಡಿದ್ದಾರೆ.
ಭಾರತದಲ್ಲಿ ಒಟ್ಟು 9 ವಿವಾದಿತ ಧಾರ್ಮಿಕ ಸ್ಥಳಗಳಿವೆ; ಅವುಗಳಲ್ಲಿ 4 ಉತ್ತರ ಪ್ರದೇಶದಲ್ಲಿ , 2 ಗುಜರಾತ್ನಲ್ಲಿ, ತಲಾ ಒಂದು ಪಶ್ಚಿಮ ಬಂಗಾಲ, ಮಧ್ಯಪ್ರದೇಶ ಮತ್ತು ದಿಲ್ಲಿಯಲ್ಲಿವೆ. ಇವುಗಳು ವಿವಾದಿತ ಧಾರ್ಮಿಕ ಸ್ಥಳಗಳಾಗಿರುವುದರಿಂದ ಅಲ್ಲಿ ಮುಸ್ಲಿಮರು ನಮಾಜ್ ನಡೆಸುವುದನ್ನು ನಿಲ್ಲಿಸಬೇಕು ಎಂದು ರಿಜ್ವಿ ಅವರು ಎಐಎಂಪಿಎಲ್ಬಿ ಅಧ್ಯಕ್ಷ ಮೌಲಾನಾ ರಬಿ ಹಸನ್ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ಈ ವಿವಾದಿತ ಧಾರ್ಮಿಕ ಸ್ಥಳಗಳಲ್ಲಿ ಹಿಂದೆ ಹಿಂದೂ ದೇವಾಲಯಗಳಿದ್ದು ಮುಸ್ಲಿಮ್ ಅರಸರು ಬಲವಂತದಿಂದ ಅವುಗಳನ್ನು ಕೆಡವಿ ಮಸೀದಿಗಳನ್ನು ನಿರ್ಮಿಸಿರುವ ಬಗ್ಗೆ ಇತಿಹಾಸದಲ್ಲಿ ಸಾಕಷ್ಟು ಪುರಾವೆಗಳಿವೆ ಎಂದು ರಿಜ್ವಿ ಹೇಳಿದ್ದಾರೆ.
ಇತರ ಧರ್ಮಗಳ ಮಂದಿರಗಳನ್ನು ಕೆಡವಿ ಆ ಭೂಮಿಯನ್ನು ಬಲವಂತದಿಂದ ವಶಪಡಿಸಿಕೊಂಡು ಅಲ್ಲಿ ಮಸೀದಿ ನಿರ್ಮಿಸುವುದಕ್ಕೆ ಇಸ್ಲಾಮಿಕ್ ಕಾನೂನುಗಳು ಅವಕಾಶ ನೀಡುವುದಿಲ್ಲ; ಮಾತ್ರವಲ್ಲ ಅಂತಹ ಮಸೀದಿಗಳಲ್ಲಿ ಮುಸ್ಲಿಮರು ಸಲ್ಲಿಸುವ ಪ್ರಾರ್ಥನೆ ಕುರಾನ್ ಮತ್ತು ಶರೀಯಾದಲ್ಲಿ ಸ್ವೀಕೃತವಾಗುವುದಿಲ್ಲ ಎಂದು ಡಾ. ವಸೀಂ ರಿಜ್ವಿ ಹೇಳಿದ್ದಾರೆ.
ರಿಜ್ವಿ ಅವರು ಈ ಹಿಂದೆ ಅಯೋಧ್ಯೆಯಲ್ಲಿನ ವಿವಾದಿತ ಧಾರ್ಮಿಕ ಸ್ಥಳವನ್ನು ಹಿಂದುಗಳಿಗೆ ಬಿಟ್ಟುಕೊಡಬೇಕೆಂಬ ಸಲಹೆಯನ್ನು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…