ನಿಮ್ಮ ಯಾತ್ರೆ ಸಾಕು.. ಹಿಮಾಚಲ ಪ್ರದೇಶಕ್ಕೆ ಹೋಗಿ: ರಾಹುಲ್ ಗೆ ಕಾಂಗ್ರೆಸ್ ಮಾಜಿ ಸಿಎಂ ಪಾಠ
Team Udayavani, Oct 17, 2022, 5:31 PM IST
ಪಣಜಿ: ರಾಹುಲ್ ಗಾಂಧಿ ಅವರು ಕೂಡಲೇ ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಬೇಕು. ಅಲ್ಲದೆ ವಿಧಾನಸಭೆ ಚುನಾವಣೆ ಇರುವ ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಿಗೆ ಹೋಗಬೇಕು ಎಂದು ಗೋವಾದ ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಫ್ರಾನ್ಸಿಸ್ಕೊ ಸರ್ಡಿನ್ಹಾ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷವನ್ನು ಸೋಲಿಸಲು ಕೇವಲ ಕಾಂಗ್ರೆಸ್ ಗೆ ಮಾತ್ರ ಸಾಧ್ಯ ಎಂದು ಫ್ರಾನ್ಸಿಸ್ಕೊ ಸರ್ಡಿನ್ಹಾ ಅಭಿಪ್ರಾಯ ಪಟ್ಟಿದ್ದಾರೆ.
‘ಭಾರತ್ ಜೋಡೋ ಯಾತ್ರೆಯು ಕಾಂಗ್ರೆಸ್ ಗೆ ಬಹಳ ಮುಖ್ಯ. ಪಕ್ಷವು ತಳಮಟ್ಟದವರೆಗೆ ತಲುಪಬೇಕು ಎನ್ನುವುದು ನಮ್ಮ ಆಶಯ. ರಾಹುಲ್ ಗಾಂಧಿ ಅದ್ಭುತ ಕೆಲಸ ಮಾಡುತ್ತಿದ್ದಾರೆ. ಆದರೆ ಇದೀಗ ರಾಹುಲ್ ಕೂಡಲೇ ಇದನ್ನೆಲ್ಲಾ ನಿಲ್ಲಿಸಿ ಚುನಾವಣೆಗೆ ಸಿದ್ದವಾಗಿರುವ ಹಿಮಾಚಲ ಪ್ರದೇಶ ಮತ್ತು ಗುಜರಾತ್ ಗೆ ಹೋಗಬೇಕು” ಎಂದು ಪಣಜಿಯಲ್ಲಿ ಗೋವಾ ಮಾಜಿ ಸಿಎಂ ಫ್ರಾನ್ಸಿಸ್ಕೊ ಸರ್ಡಿನ್ಹಾ ಹೇಳಿದರು.
ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯು ನವೆಂಬರ್ 12ರಂದು ಒಂದೇ ಹಂತದಲ್ಲಿ ನಡೆಯಲಿದೆ. ಡಿಸೆಂಬರ್ 8ರಂದು ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದೆ. ಗುಜರಾತ್ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಇನ್ನೂ ಘೋಷಣೆ ಮಾಡಿಲ್ಲ.
ಇದನ್ನೂ ಓದಿ:300 ಕಿಮೀ ಸ್ಪೀಡ್… ಫೇಸ್ ಬುಕ್ ಲೈವ್; ಬಿಎಂಡಬ್ಲ್ಯು ನಾಗಾಲೋಟ…ನಾಲ್ವರ ದೇಹ ಛಿದ್ರ, ಛಿದ್ರ!
ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ಸೆ.7ರಂದು ಕನ್ಯಾಕುಮಾರಿಯಲ್ಲಿ ಆರಂಭವಾಗಿತ್ತು. 150 ದಿನಗಳಲ್ಲಿ 3,570 ಕಿ.ಮೀ. ಗಳಷ್ಟು ದೂರ ಭಾರತ್ ಜೋಡೋ ಯಾತ್ರೆಯು ಕ್ರಮಿಸಲಿದೆ. ರಾಹುಲ್ ಗಾಂಧಿ ನೇತೃತ್ವದ ಯಾತ್ರೆಯು ತಮಿಳುನಾಡು, ಕೇರಳ, ಕರ್ನಾಟಕದ ಬಳಿಕ ಇದೀಗ ಆಂಧ್ರ ಪ್ರದೇಶದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?