
ಭುವನೇಶ್ವರದಲ್ಲಿ ಜನರ ನಿದ್ದೆಗೆಡಿಸಿದ ಕರಿ ಬೆಕ್ಕು : 25 ಜನರ ಮೇಲೆ ದಾಳಿ, ಶೋಧ ಕಾರ್ಯ…
ಮನೆಯಿಂದ ಹೊರ ಬರಲು ಹಿಂದೆ ಮುಂದೆ ನೋಡಬೇಕಾದ ಪರಿಸ್ಥಿತಿ...
Team Udayavani, Sep 17, 2022, 12:20 PM IST

ಭುವನೇಶ್ವರ : ಬೀದಿ ನಾಯಿಗಳ ದಾಳಿಯಿಂದ ಜನ ರೋಸಿ ಹೋಗಿರುವುದು ಕೇಳಿದ್ದೇವೆ ಆದರೆ ಭುವನೇಶ್ವರದಲ್ಲಿ ಕರಿ ಬೆಕ್ಕೊಂದು ಇಪ್ಪತ್ತೈದು ಜನರ ಮೇಲೆ ದಾಳಿ ನಡೆಸಿ ಸುತ್ತಮುತ್ತಲ ಜನರ ನಿದ್ದೆಗೆಡಿಸಿ ಬಾರಿ ಸುದ್ದಿಯಾಗಿದೆ.
ಒಡಿಶಾದ ರಾಜಧಾನಿ ಭುವನೇಶ್ವರದ ಶಾಸ್ತ್ರಿನಗರ ಪ್ರದೇಶದ ಸುತ್ತಮುತ್ತ ಈ ಘಟನೆ ನಡೆದಿದ್ದು. ಕಳೆದ ಎರಡು ದಿನಗಳಿಂದ ಈ ವಠಾರದಲ್ಲಿ ಸುಮಾರು ಇಪ್ಪತ್ತೈದಕ್ಕೂ ಹೆಚ್ಚು ಜನರ ಮೇಲೆ ಈ ಕರಿ ಬೆಕ್ಕು ದಾಳಿ ನಡೆಸಿದೆಯಂತೆ.
ಇಲ್ಲಿನ ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬರುವ ಬೆಕ್ಕು ಮಕ್ಕಳು, ಹಿರಿಯರು ಎನ್ನದೆ ಎಲ್ಲರ ಮೇಲೆ ದಾಳಿ ನಡೆಸುತ್ತಿದೆಯಂತೆ ಇದರಿಂದ ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ, ಇನ್ನೂ ಕೆಲವರು ಕೈಯಲ್ಲಿ ಕೋಲು ಹಿಡಿದುಕೊಂಡು ನಡೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿಕೊಂಡಿದ್ದಾರೆ.
“ಬುಧವಾರ ಸಂಜೆಯ ವೇಳೆ ಮನೆಯ ಮಾಳಿಗೆಯ ಮೇಲೆ ಬಟ್ಟೆ ಒಣಗಿಸಲು ಹೋಗಿದ್ದ ಮಹಿಳೆಯ ಕಾಲಿಗೆ ಕರಿ ಬೆಕ್ಕು ಕಚ್ಚಿ ಪರಾರಿಯಾಗಿದೆ
ಮಹಿಳೆಯ ಕಾಲಿಗೆ ಗಾಯವಾಗಿದೆಎಂದು ಹೇಳಿದ್ದಾರೆ.
ಇದನ್ನೂ ಓದಿ : ನೀರು ಕುಡಿಯಲು ಬಂದಿದ್ದೇ ಈ ಆನೆಗಳ ಜೀವಕ್ಕೆ ಕಂಟಕವಾಯಿತು… ಆದರೆ ಕೊನೆಗೆ ಆಗಿದ್ದೇ ಬೇರೆ
ಅಲ್ಲದೆ 6 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಸಹೋದರನನ್ನು ಶಾಲೆಯಿಂದ ಕರೆತರಲು ಹೋದಾಗ ಬೆಕ್ಕು ಬಾಲಕಿಯ ಕಾಲಿಗೆ ಪರಚಿ ಗಾಯಮಾಡಿದ್ದು, ಆಕೆಯ ತಂದೆ ಕೂಡಲೇ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.
ಬೆಕ್ಕಿನ ದಾಳಿಯಿಂದ ಕಂಗೆಟ್ಟ ಜನ ಮಹಾನಗರ ಪಾಲಿಕೆಗೆ ದೂರು ನೀಡಿ ಬೆಕ್ಕನ್ನು ಸೆರೆಹಿಡಿಯಲು ಮನವಿ ಮಾಡಿದ್ದಾರೆ ಅದರಂತೆ ಬೆಕ್ಕಿನ ಕಾರ್ಯಾಚರಣೆ ನಡೆಸಿದ ಮಹಾನಗರ ಪಾಲಿಕೆ ಸತತ ಕಾರ್ಯಾಚರಣೆಯ ಬಳಿಕ ಬೆಕ್ಕನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ

Union Budget 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ?

Union Budget 2023: ಆದಾಯ ತೆರಿಗೆಯಲ್ಲಿ ಭಾರಿ ಬದಲಾವಣೆ; 7 ಲಕ್ಷದವರೆಗೆ ಟ್ಯಾಕ್ಸ್ ಕಟ್ಟಬೇಕಿಲ್ಲ

ಮದ್ಯದಂಗಡಿಗಳನ್ನು ಗೋಶಾಲೆಗಳಾಗಿ ಪರಿವರ್ತಿಸಿ: ಬಿಜೆಪಿ ನಾಯಕಿ ಉಮಾ ಭಾರತಿ

ತಮಿಳುನಾಡು: ನಡು ರಸ್ತೆಯಲ್ಲೇ ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ಮುಖಂಡನ ಥಳಿಸಿ ಹತ್ಯೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ

Union Budget 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ?