ಒಡಿಶಾ ಸರ್ಕಾರಿ ಆಸ್ಪತ್ರೆ: ಬೀದಿ ನಾಯಿ ಬಾಯಿಯಲ್ಲಿ ನವಜಾತ ಶಿಶುವಿನ ಶವ!
ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
Team Udayavani, Mar 17, 2021, 1:15 PM IST
Representative Image
ಭದ್ರಾಕ್(ಒಡಿಶಾ): ಸರ್ಕಾರಿ ಆಸ್ಪತ್ರೆಯೊಳಗಿಟ್ಟಿದ್ದ ನವಜಾತ ಶಿಶುವಿನ ಕಳೇಬರವನ್ನು ಬೀದಿ ನಾಯಿ ಕಚ್ಚಿಕೊಂಡು ಓಡಿ ಹೋದ ಘಟನೆ ಒಡಿಶಾದ ಭದ್ರಾಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಟವೇರಾಗೆ ಕಂಟೇನರ್ ಡಿಕ್ಕಿ: ಇಬ್ಬರು ಕಬಡ್ಡಿ ಆಟಗಾರರ ದುರಂತ ಸಾವು
ಈ ದುರದೃಷ್ಟಕರ ಘಟನೆ ಭದ್ರಾಕ್ ಜಿಲ್ಲೆಯ ಮುಖ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ(ಮಾರ್ಚ್ 15) ನಡೆದಿತ್ತು. ವರದಿಗಳ ಪ್ರಕಾರ, ಬೀದಿ ನಾಯಿ ಏಕಾಏಕಿ ನವಜಾತ ಶಿಶುವಿನ ಹೆಣವನ್ನು ಕಚ್ಚಿಕೊಂಡು ಸರ್ಕಾರಿ ಆಸ್ಪತ್ರೆಯ ಆವರಣದೊಳಗೆ ಓಡಿ ಹೋಗುತ್ತಿರುವುದನ್ನು ಸಿಬಂದಿಗಳು, ಜನರು ಗಮನಿಸಿದ್ದರು. ಬಳಿಕ ಜನರು ನಾಯಿಯನ್ನು ಅಟ್ಟಿಸಿಕೊಂಡು ಹೋದಾಗ ಶವವನ್ನು ಬಿಸಾಕಿ ಕಾಲ್ಕಿತ್ತಿರುವುದಾಗಿ ವರದಿ ವಿವರಿಸಿದೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಬೀದಿ ನಾಯಿ ನವಜಾತ ಹೆಣ್ಣುಮಗುವಿನ ಶವವನ್ನು ಕಚ್ಚಿಕೊಂಡು ಆಸ್ಪತ್ರೆಯ ಆವರಣದಲ್ಲಿ ಸುತ್ತಾಡುತ್ತಿತ್ತು. ಆ ಮಗು ಜೀವಂತವಾಗಿದೆ ಎಂದು ಭಾವಿಸಿ, ನಾಯಿಯನ್ನು ಅಟ್ಟಿಸಿಕೊಂಡು ಹೋದಾಗ ಅದು ಶವವನ್ನು ಬಿಟ್ಟು ಓಡಿ ಹೋಗಿತ್ತು ಎಂದು ತಿಳಿಸಿದ್ದಾರೆ.
ಈ ಘಟನೆ ಬಗ್ಗೆ ಪ್ರತ್ಯದರ್ಶಿಗಳು ಭಯವನ್ನು ವ್ಯಕ್ತಪಡಿಸಿದ್ದು, ಆಸ್ಪತ್ರೆಯ ಆವರಣದೊಳಗೆ ಒಂದು ವೇಳೆ ಇಂತಹ ಘಟನೆಗಳು ನಡೆಯುತ್ತಿದ್ದರೆ, ನವಜಾತ ಶಿಶುಗಳನ್ನು ಚಿಕಿತ್ಸೆಗೆ ಹೇಗೆ ಕರೆತರಲಿ ಎಂದು ಪ್ರಶ್ನಿಸಿದ್ದಾರೆ. ಇದೊಂದು ಭಯಾನಕ ಘಟನೆ, ಇದನ್ನು ಗಮನಿಸಿದ ಮೇಲೆ ಆಸ್ಪತ್ರೆ ಮೇಲಿನ ನಂಬಿಕೆಯೇ ಹೊರಟು ಹೋಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ. ಘಟನೆ ಬಗ್ಗೆ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿರುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್