ವಿದ್ಯಾರ್ಥಿನಿಗೆ ಬೆಂಕಿ ಹಚ್ಚಿ ತಾನೇ ಆತ್ಮಹತ್ಯೆ ಮಾಡ್ಕೊಂಡ
Team Udayavani, Feb 3, 2017, 3:45 AM IST
ಕೊಟ್ಟಾಯಂ: ಪ್ರೇಮ ನಿರಾಕರಿಸಿದ ಕಾರಣಕ್ಕೆ ವಿದ್ಯಾರ್ಥಿನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟಾಯಂ ಮೆಡಿಕಲ್ ಕಾಲೇಜಿನಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ.
ಫಿಸಿಯೋಥೆರಪಿ ಕಲಿತಿದ್ದ ಕಾಲೇಜಿನ ಮಾಜಿ ವಿದ್ಯಾರ್ಥಿ ಆದರ್ಶ ಸುನೀಂದ್ರನ್ (26) ಮರುಪರೀಕ್ಷೆ ನೆವದಲ್ಲಿ ಕಾಲೇಜಿಗೆ ಆಗಮಿಸಿದ್ದು, ಅಲ್ಲಿ ಅಂತಿಮ ವರ್ಷದ ವಿದ್ಯಾರ್ಥಿನಿ ರಶ್ಮಿ (21)ಯನ್ನು ಭೇಟಿ ಮಾಡಿದ್ದಾನೆ. ಎಲ್ಲರೆದುರೇ ತರಗತಿಯಲ್ಲಿ ಆಕೆ ಮೇಲೆ ಪೆಟ್ರೋಲ್ ಸುರಿದಿದ್ದಾನೆ. ಈ ವೇಳೆ ಆಕೆ ಕೂಗಿಕೊಂಡು ಹೊರಗೋಡಿದ್ದು, ಗ್ರಂಥಾಲಯದಲ್ಲಿ ಆದರ್ಶ ಆಕೆಯನ್ನು ತಬ್ಬಿಕೊಂಡಿದ್ದಾನೆ. ಆಕೆ ಅಲ್ಲಿಂದಲೂ ಹೊರಗೋಡಿದ್ದು, ಬೆಂಕಿ ನಂದಿಸಲು ಉಳಿದವರು ಯತ್ನಿಸಿದ್ದರೂ ಇಬ್ಬರೂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತಂತೆ ಆರೋಪಿ ಆದರ್ಶ ಆಸ್ಪತ್ರೆಯಲ್ಲಿ ಅಂತಿಮ ಹೇಳಿಕೆ ನೀಡಿದ್ದು ಆಕೆ ಮೊದಲು ಪ್ರೇಮಿಸಿ ಬಳಿಕ ನಿರಾಕರಿಸಿದ್ದರಿಂದ ಈ ಕೃತ್ಯವೆಸಗಿದ್ದಾಗಿ ಹೇಳಿ ಮೃತಪಟ್ಟಿದ್ದಾನೆ. ಆದರ್ಶ ಕೊಲ್ಲಂ ಜಿಲ್ಲೆಯವನಾಗಿದ್ದು, ರಶ್ಮಿ ಆಲಪ್ಪುಳ ಜಿಲ್ಲೆಯವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ