ಕೂಲಿ ಕಾರ್ಮಿಕರ ನೆರವಿಗೆ ಬಂದ ಐಐಟಿ, ಐಐಎಂ ಸಂಸ್ಥೆಗಳ ವಿದ್ಯಾರ್ಥಿಗಳು

ಥಿಂಕ್‌-ಟ್ಯಾಂಕ್‌ ಸಹಾಯವಾಣಿ ಮೂಲಕ ಉದ್ಯೋಗ ಆನ್ವೇಷಣೆಗೆ ನೆರವು

Team Udayavani, Jun 22, 2020, 12:38 AM IST

ಕೂಲಿ ಕಾರ್ಮಿಕರ ನೆರವಿಗೆ ಬಂದ ಐಐಟಿ, ಐಐಎಂ ಸಂಸ್ಥೆಗಳ ವಿದ್ಯಾರ್ಥಿಗಳು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್‌-19 ಲಕ್ಷಾಂತರ ಮಂದಿ ತಮ್ಮ ಕೆಲಸವನ್ನು ಕಳೆದುಕೊಂಡಿದ್ದಾರೆ.

ಆದರಲ್ಲೂ ಕೂಲಿ ಕಾರ್ಮಿಕರ ಜೀವನ ಸಂಪೂರ್ಣವಾಗಿ ಅತಂತ್ರವಾಗಿದ್ದು, ಅವರ ಕಷ್ಟಗಳನ್ನು ಹೇಳತೀರದಾಗಿದೆ.

ಇಂತಹ ಪರಿಸ್ಥಿತಿಯಲ್ಲಿ ಸಮಸ್ಯೆಯ ತೀವ್ರತೆಯನ್ನು ಅರಿತುಕೊಂಡು ಕೆಲ ವಿದ್ಯಾರ್ಥಿಗಳ ತಂಡ ವಿನೂತನ ಆನ್ವೇಷಣೆಯಲ್ಲಿ ನಿರತವಾಗಿದ್ದು, ಲಾಕ್‌ ಡೌನ್‌ ಸಮಯದಲ್ಲಿ ಮತ್ತೊಬ್ಬರಿಗೆ ನೆರವಾಗುವಂತಹ ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಇದೀಗ ಅಂತಹುದೇ ಕಾರ್ಯಕ್ಕೆ ಐಐಟಿ, ಐಐಎಂ ಮತ್ತು ಇತರ ಹೆಸರಾಂತ ಸಂಸ್ಥೆಗಳ ವಿದ್ಯಾರ್ಥಿಗಳು ಮುಂದಾಗಿದ್ದು, ಕೆಲಸ ಕಳೆದುಕೊಂಡ ಕಾರ್ಮಿಕರಿಗೆ ಸಹಾಯ ಮಾಡುವ ಸಲುವಾಗಿ ವಿಭಿನ್ನ ಯೋಜನೆಯೊಂದು ಆರಂಭಿಸಿದ್ದಾರೆ.

ಥಿಂಕ್‌ – ಟ್ಯಾಂಕ್‌ ಸಹಾಯವಾಣಿ
ಹೌದು, ಐಐಟಿ, ಐಐಎಂ ಮತ್ತು ಇತರ ಹೆಸರಾಂತ ಸಂಸ್ಥೆಗಳ ವಿದ್ಯಾರ್ಥಿಗಳು ಲಾಕ್‌ ಡೌನ್‌ನಿಂದಾಗಿ ಉದ್ಯೋಗ ಕಳೆದುಕೊಂಡಿರು ಕಾರ್ಮಿಕರು, ಕೂಲಿ ಕೆಲಸಗಾರರು ಮತ್ತಿತ್ತರ ನಿರುದ್ಯೋಗಿಗಳಿಗೆ ಅನುಕೂಲವಾಗಲೆಂದು ಸ್ಟೂಡೆಂಟ್ಸ್ ಫಾರ್‌ ಇನ್ವಾಲ್ವ್ಡ್ ಗವರ್ನೆನ್ಸ್ ಆ್ಯಂಡ್‌ ಮ್ಯೂಚುಯಲ್‌ ಆ್ಯಕ್ಷನ್‌ (ಸಿಗ್ಮಾ) ಎಂಬ ಸಂಸ್ಥೆಯನ್ನು ಪ್ರಾರಂಭಿಸಿದ್ದು, ಈ ಪೈಲಟ್‌ ಯೋಜನೆಗೆ ಥಿಂಕ್‌ – ಟ್ಯಾಂಕ್‌ ಸಹಾಯವಾಣಿ ಎಂಬ ಹೆಸರಿಟ್ಟಿದ್ದಾರೆ. ಇನ್ನು, ಈ ವಿದ್ಯಾರ್ಥಿಗಳ ತಂಡಕ್ಕೆ ದೆಹಲಿಯ ಜಿಲ್ಲಾಧಿಕಾರಿ ಅಭಿಷೇಕ್‌ ಸಿಂಗ್‌ ಮತ್ತು ಅಧಿಕಾರಿ ದುರ್ಗಾ ಶಕ್ತಿ ನಾಗ್ಪಾಲ್‌ ಅವರು ಸಹಾಯ ಹಸ್ತ ಮತ್ತು ಅವರಿಗೆ ಬೇಕಾದ ಮಾರ್ಗದರ್ಶನ ಸಲಹೆಗಳನ್ನು ನೀಡಿದ್ದಾರೆ.

ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ಕಾರ್ಯಾಚರಣೆ
ಕೌಶಲ್ಯರಹಿತ, ಅರೆ-ನುರಿತ ಮತ್ತು ನುರಿತ ಕಾರ್ಮಿಕರನ್ನು ನೇಮಿಸಿಕೊಳ್ಳಲು ಹಾಗೂ ಸಹಾಯ ಮಾಡಲು ನಿರ್ದಿಷ್ಟ ಸಹಾಯವಾಣಿ ಸಂಖ್ಯೆಯನ್ನು (8800883323) ವಿದ್ಯಾರ್ಥಿಗಳು ನೀಡಿದ್ದು, ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 7ರವರೆಗೆ ಥಿಂಕ್‌-ಟ್ಯಾಂಕ್‌ ಸಹಾಯವಾಣಿ ಕಾರ್ಯನಿರ್ವಹಿಸಲಿದೆ.

ವಿದ್ಯಾರ್ಥಿ ಸ್ವಯಂಸೇವಕರು, ಸಂಭಾವ್ಯ ಉದ್ಯೋಗದಾತರು ಕಾರ್ಮಿಕರ ಕರೆಗಳನ್ನು ಸ್ವೀಕರಿಸಲಿದ್ದು, ಸ್ಥಳೀಯರಿಗೆ ಮತ್ತು ವಲಸೆ ಕಾರ್ಮಿಕರಿಗೆ ಕೆಲಸ ಹುಡುಕಲು ಸಹಾಯ ಮಾಡುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ ಎಂದು ಪೈಲಟ್‌ ಯೋಜನೆ ಮತ್ತು ಸಹಾಯವಾಣಿ ಸಂಖ್ಯೆಯ ಬಿಡುಗಡೆಯ ಸಂದರ್ಭದಲ್ಲಿ ಅಭಿಷೇಕ್‌ ಸಿಂಗ್‌ ಹೇಳಿದ್ದು, ಇದು ಅನೇಕ ಕೈಗಾರಿಕೆಗಳಲ್ಲಿ ಕಾರ್ಮಿಕರ ಕೊರತೆ ಸಹ ನೀಗಿಸಲಿದೆ ಎಂದು ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.