ಸುಬೋಧ್ ಸಿಂಗ್ಗೆ ಬೆದರಿಕೆ ಕರೆ: ಪತ್ನಿ ಮಾಹಿತಿ
Team Udayavani, Dec 7, 2018, 6:00 AM IST
ಲಕ್ನೋ: ಇತ್ತೀಚೆಗೆ ಸಂಭವಿಸಿದ ಬುಲಂದ್ಶಹರ್ ಗಲಭೆಯಲ್ಲಿ ಉದ್ರಿಕ್ತ ಗುಂಪಿನಿಂದ ಹತ್ಯೆ ಗೀಡಾದ ಪೊಲೀಸ್ ಇನ್ಸ್ಪೆಕ್ಟರ್ ಸುಬೋಧ್ ಕುಮಾರ್ ಸಿಂಗ್ ಅವರಿಗೆ ಬೆದರಿಕೆ ಕರೆಗಳು ಬರುತ್ತಿದ್ದವು ಎಂದು ಅವರ ಪತ್ನಿ ರಜನಿ ಅವರು, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ತಿಳಿಸಿದ್ದಾರೆ.
ಲಕ್ನೋದಲ್ಲಿನ ಸಿಎಂ ನಿವಾಸದಲ್ಲಿ ಯೋಗಿ ಅವರನ್ನು ಭೇಟಿ ಮಾಡಿದ ಅವರು, ಅಕ್ರಮ ಗೋ ಹತ್ಯೆ ಕುರಿತ ದೂರು ಗಳನ್ನು ಸಿಂಗ್ ಅವರೇ ತನಿಖೆ ಮಾಡುತ್ತಿದ್ದರು. ಹಾಗಾಗಿ, ಅವರಿಗೆ ಬೆದ ರಿಕೆ ಕರೆಗಳು ಬರುತ್ತಿದ್ದವು ಎಂದಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಿಎಂ ಯೋಗಿ, ತಪ್ಪಿ ತಸ್ಥರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವ ಆಶ್ವಾಸನೆ ನೀಡಿದ್ದಾರೆ. ಜತೆಗೆ, ಕುಮಾರ್ ಸಿಂಗ್ ಮಾಡಿದ್ದ ಎಲ್ಲಾ ಸಾಲಗಳ (ಅಂದಾಜು 25-30 ಲಕ್ಷ ರೂ.) ಮನ್ನಾ, ಇಟಾ ಜಿಲ್ಲೆಯ ಜೈತಾರಾ-ಕುರೋಲಿ ರಸ್ತೆಗೆ ಹಾಗೂ ಕಾಲೇಜೊಂದಕ್ಕೆ ಸಿಂಗ್ ಹೆಸರಿಡುವ ಭರವಸೆ ನೀಡಿದ್ದಾರೆ.
ಹತ್ಯೆ ಆರೋಪಿ ಶಿಖರ್ ಅಗರ್ವಾಲ್ ಎಂಬಾತ ವಿಡಿಯೋ ಸಂದೇಶ ರವಾನಿಸಿ, ಗಲಭೆಯಲ್ಲಿ ತನ್ನ ಪಾತ್ರವಿಲ್ಲವೆಂದು ಹೇಳಿ ಕೊಂಡಿದ್ದಾನೆ. ಇದೇ ವೇಳೆ, ಪ್ರಕರಣದ ಪ್ರಮುಖ ಆರೋಪಿ, ಬಜರಂಗದಳ ನಾಯಕ ಯೋಗೇಶ್ ರಾಜ್ನನ್ನು ಗುರು ವಾರ ಪೊಲೀಸರು ಬಂಧಿಸಿದ್ದಾರೆ ಎಂದು ನ್ಯೂಸ್18 ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್