4 ವರ್ಷದ ಮಗುವನ್ನೇ ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ: ವೈದ್ಯಕೀಯ ವರದಿ


Team Udayavani, Feb 23, 2024, 3:38 PM IST

4 ವರ್ಷದ ಮಗುವನ್ನೇ ಕೊಂದ ಸುಚನಾ ಸೇಠ್‌ಗೆ ಯಾವುದೇ ಮಾನಸಿಕ ಖಿನ್ನತೆ ಇಲ್ಲ: ಗೋವಾ ಪೊಲೀಸ್

ಪಣಜಿ: ತನ್ನ ಸ್ವಂತ ನಾಲ್ಕು ವರ್ಷದ ಮಗನನ್ನು ಹತ್ಯೆಗೈದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿ ಸುಚನಾ ಸೇಠ್ ಪ್ರಕರಣದಲ್ಲಿ ಹೊಸ ಅಪ್ಡೇಟ್ ಹೊರಬಿದ್ದಿದೆ.

ಆರೋಪಿಯ ಮಾನಸಿಕ ಮೌಲ್ಯಮಾಪನ ವರದಿಯು ಆಕೆಯ ಮಾನಸಿಕ ಸ್ಥಿತಿಯು ಸಂಪೂರ್ಣವಾಗಿ ಉತ್ತಮವಾಗಿದೆ ಎಂದು ಬಹಿರಂಗಪಡಿಸಿದೆ. ಆರೋಪಿ ಪರ ವಕೀಲ ಅರುಣ್ ಬ್ರಾಸ್ ಡಿ ಸಾ ಅವರು ಗೋವಾ ಪೊಲೀಸರು ಸಲ್ಲಿಸಿದ ಮಾನಸಿಕ ಫಿಟ್ನೆಸ್ ವರದಿ ತಪ್ಪು ಎಂದು ಪ್ರತಿಪಾದಿಸಿದರು ಮತ್ತು ಆರೋಪಿಯ ಮಾನಸಿಕ ಸ್ಥಿತಿ ಸರಿಯಾಗಿಲ್ಲ ಎಂದು ವಾದಿಸಿದ್ದಾರೆ.

ಆರೋಪಿ ಸುಚನಾ ಸೇಠ್ ಅವರ ವಕೀಲರು ಸೆಠ್ ಅವರ ಮಾನಸಿಕ ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲು ಮನೋವೈದ್ಯರ ವೈದ್ಯಕೀಯ ಮಂಡಳಿಯನ್ನು ರಚಿಸುವಂತೆ ನ್ಯಾಯಾಲಯವನ್ನು ಕೋರಿದರು. ಪಬ್ಲಿಕ್ ಪ್ರಾಸಿಕ್ಯೂಟರ್ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಸೇಠ್ ಸಂಪೂರ್ಣ ಮಾನಸಿಕವಾಗಿ ಆರೋಗ್ಯವಾಗಿದ್ದಾರೆ ಎಂದರು. ಮಗುವಿನ ಹತ್ಯೆಗೆ ಸಂಬಂಧಿಸಿದಂತೆ ಸೇಠ್ ಬಂಧನದಲ್ಲಿದ್ದಾರೆ. ಆಕೆಯ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ಸುಚನಾ ತಂದೆ ಹೇಳಿಕೊಂಡಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು ಎಂದು ಆಗ್ರಹಿಸಿದರು. ಸಲಹೆಯ ಮೇರೆಗೆ ಮಾನಸಿಕ ಪರೀಕ್ಷೆ ನಡೆಸಲಾಗಿದೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.

ಈ ಪರೀಕ್ಷೆಯಲ್ಲಿ ಆರೋಪಿ ಸುಚನಾ ಸೇಠ್ ಮಾನಸಿಕ ಸ್ಥಿತಿ ಉತ್ತಮವಾಗಿದೆ ಎಂದು ತಿಳಿದುಬಂದಿದೆ. ಆದರೆ, ಇದೀಗ ಪೊಲೀಸರು ಸಲ್ಲಿಸಿರುವ ವರದಿ ತಪ್ಪು ಎಂದು ವಕೀಲ ಅರುಣ್ ಬ್ರಾಸ್ ಡಿ ಸಾ ಹೇಳಿದ್ದಾರೆ. ಆದರೆ, ಸರಕಾರಿ ವಕೀಲರು ಆ ವಾದವನ್ನು ಅಲ್ಲಗಳೆದಿದ್ದಾರೆ.

ಆರೋಪಿ ಸೇಠ್ ನಾಲ್ಕು ವರ್ಷದ ತನ್ನ ಮಗನೊಂದಿಗೆ ಜನವರಿ 06 ರಂದು ಗೋವಾಕ್ಕೆ ಬಂದಿದ್ದರು. ಮಗುವನ್ನು ಕೊಂದು ಬೆಂಗಳೂರಿಗೆ ಹೋಗುತ್ತಿದ್ದಾಗ ಜನವರಿ 08 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಬಂಧಿಸಲಾಯಿತು. ಅವಳು ಹುಡುಗನ ದೇಹವನ್ನು ಚೀಲದಲ್ಲಿ ತುಂಬಿಕೊಂಡು ಪ್ರಯಾಣ ಬೆಳೆಸಿದ್ದಳು. ಆಕೆ ಗೋವಾದಿಂದ ಬೆಂಗಳೂರಿಗೆ ಪ್ರಯಾಣಿಸಲು ಕ್ಯಾಬ್ ಬುಕ್ ಮಾಡಿದ್ದಳು, ಕ್ಯಾಬ್ ಡ್ರೈವರ್ ಸಹಾಯದಿಂದ ಆರೋಪಿ ಸುಚನಾ ಸೇಠ್‍ಳನ್ನು ಬಂಧಿಸಲು ಸಾಧ್ಯವಾಯಿತು.

ಇದನ್ನೂ ಓದಿ: Gyanvapi, ಮಥುರಾ ಮಸೀದಿ ವಿವಾದ ಬಗೆಹರಿಸಲು ಹೀಗೆ ಮಾಡಿ… ಅಜ್ಮೀರ್ ದರ್ಗಾ ಮುಖ್ಯಸ್ಥರ ಸಲಹೆ

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

supreem

ಬಂಗಾಲ ಶಿಕ್ಷಕರ ನೇಮಕ ಸಿಬಿಐ ತನಿಖೆಗೆ ಮಾತ್ರ ತಡೆ: ಸುಪ್ರೀಂ ಕೋರ್ಟ್‌

Exam

NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.