Sudha Murty- ಪದ್ಮಭೂಷಣ ಪ್ರಶಸ್ತಿ ದೇಶದ ಜನತೆಗೆ ಅರ್ಪಣೆ: ಸಮಾರಂಭದಲ್ಲಿ ಪುತ್ರಿ ಭಾಗಿ
ಎಸ್.ಜೈಶಂಕರ್, ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
Team Udayavani, Apr 6, 2023, 10:20 AM IST
ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಮಾಜ ಸೇವೆಗಾಗಿ ಲೇಖಕಿ, ಇನ್ಫೋಸಿಸ್ ನ ಸುಧಾ ಮೂರ್ತಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮ ಭೂಷಣ ಪ್ರಶಸ್ತಿ ಸ್ವೀಕರಿಸಿ ಮಾತನಾಡುತ್ತ, ನನಗೆ ಲಭಿಸಿರುವ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ದೇಶದ ಮಹಾನ್ ಜನತೆಗೆ ಅರ್ಪಿಸುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ:World Cup ಕನಸು ಕಿತ್ತ ಗಾಯ! ವಿಶ್ವಕಪ್ ನಿಂದಲೂ ಹೊರಬಿದ್ದ ಕಿವೀಸ್ ನಾಯಕ
“ ಈ ಪ್ರಶಸ್ತಿಗೆ ನನ್ನ ಗುರುತಿಸಿರುವುದರಿಂದ ದೇಶದ ಯುವ ಸಮುದಾಯವು ಸಾಮಾಜಿಕ ಕಾರ್ಯ ಮತ್ತು ಸೇವೆಗಳಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಲು ನೈಜ ಸ್ಫೂರ್ತಿ ನೀಡುತ್ತದೆ. ನಮ್ಮ ಮಹಾನ್ ಮತ್ತು ಬೃಹತ್ ದೇಶದ ನಿರಂತರ ಅಭಿವೃದ್ಧಿಗೆ ಇದು ಇಂದಿನ ಅಗತ್ಯವೂ ಆಗಿದೆ. ಕೆಲವು ವ್ಯಕ್ತಿಗಳ ಉದಾರ ಮನೋಭಾವವು ಲಕ್ಷಾಂತರ ಜನರ ಪಾಲಿಗೆ ಅಪಾರ ಭರವಸೆ ಮತ್ತು ಆಶಾವಾದ ಮೂಡಿಸುತ್ತದೆ ಎಂದು ನಾನು ಸದಾ ಭಾವಿಸುತ್ತೇನೆ” ಎಂದು ಸುಧಾಮೂರ್ತಿ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.
ಬುಧವಾರ ಸಂಜೆ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದ ವೇಳೆ ಸುಧಾ ಮೂರ್ತಿ ಪುತ್ರಿ, ಬ್ರಿಟನ್ ಪ್ರಧಾನಿ ರಿಷಿ ಸುನಾಕ್ ಪತ್ನಿ ಅಕ್ಷತಾ ಮೂರ್ತಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸಚಿವ ಎಸ್.ಜೈಶಂಕರ್, ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.
ರಾಷ್ಟ್ರಪತಿ ಭವನದ ಮೆಜೆಸ್ಟಿಕ್ ದರ್ಬಾರ್ ಹಾಲ್ ನಲ್ಲಿ ನಡೆದ ಪದ್ಮಪ್ರಶಸ್ತಿ ಸಮಾರಂಭದಲ್ಲಿ ರಾಷ್ಟ್ರಗೀತೆ ನುಡಿಸಿದ ಸಂದರ್ಭದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಪಕ್ಕದಲ್ಲೇ ಅಕ್ಷತಾ ಮೂರ್ತಿ ನಿಂತಿರುವ ಫೋಟೋ ಅಂತರ್ಜಾಲ ತಾಣ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ