ದಂಡಕ್ಕೆ ಆತ್ಮಹತ್ಯೆ ಬೆದರಿಕೆ
ಮೊಬೈಲಲ್ಲಿ ಮಾತನಾಡಿಕೊಂಡು ಹೋಗುತ್ತಿದ್ದ ಚಾಲಕಿ
Team Udayavani, Sep 17, 2019, 5:53 AM IST
ಹೈದರಾಬಾದ್/ನವದೆಹಲಿ: ಮೋಟಾರು ವಾಹನ ಕಾಯ್ದೆಯ ಹೊಸ ನಿಯಮದ ಅನ್ವಯ ದಂಡ ವಿಧಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆ ಸಾರಿಗೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ನವದೆಹಲಿಯಲ್ಲಿ ಶನಿವಾರ ಈ ಘಟನೆ ನಡೆದಿದೆ.
ರಾಷ್ಟ್ರ ರಾಜಧಾನಿಯ ಕಾಶ್ಮೀರಿ ಗೇಟ್ ಬಳಿ ಮಹಿಳೆ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಮೊಬೈಲ್ನಲ್ಲಿ ಮಾತನಾಡುತ್ತಿದ್ದರು. ಅದನ್ನು ಕಂಡು ಅಧಿಕಾರಿಗಳು ಅವರನ್ನು ನಿಲ್ಲಿಸಿದರು. ಕೂಡಲೇ ಮಹಿಳೆ ಬೊಬ್ಬೆ ಹಾಕಲಾರಂಭಿಸಿದರು ಮತ್ತು ದಂಡ ವಿಧಿಸಬಾರದೆಂದು ಮನವಿ ಮಾಡಿಕೊಂಡರು. ಅಧಿಕಾರಿಗಳು ಒಪ್ಪದೇ ಇದ್ದಾಗ ಆತ್ಮಹತ್ಯೆ ಮಾಡಿಕೊಳ್ಳುವೆನೆಂದು ಬೆದರಿಕೆ ಹಾಕಿದರು. ಸುಮಾರು 20 ನಿಮಿಷಗಳ ಕಾಲ ಈ ವಾಗ್ವಾದ, ಕೋಲಾಹಲ ಮುಂದುವರಿಯಿತು. ಅಂತಿಮವಾಗಿ ಸೋತ ಅಧಿಕಾರಿಗಳು ಆಕೆಯನ್ನು ಹೋಗಗೊಟ್ಟರು.
ದಂಡ ನೀಡಿ ಹಿಂಪಡೆದರು: ಡೆಹ್ರಾಡೂನ್ನಲ್ಲಿ ಎತ್ತಿನ ಗಾಡಿಗೆ ದಂಡ ವಿಧಿಸಲಾಗಿದೆ. ಶನಿವಾರ ಈ ಘಟನೆ ನಡೆದಿದೆ. ಪರಿಶೀಲನೆಯ ಬಳಿಕ ಎತ್ತಿನ ಗಾಡಿಗೆ ದಂಡ ವಿಧಿಸಲು ಅವಕಾಶವಿಲ್ಲ ಎಂದು ಗೊತ್ತಾದ ಬಳಿಕ ಚಲನ್ ರದ್ದು ಮಾಡಲಾಗಿದೆ.
ಜಾರಿ ಮಾಡಲ್ಲ: ದೇಶಾದ್ಯಂತ ಜಾರಿಗೊಂಡಿರುವ ಹೊಸ ಸಾರಿಗೆ ನಿಯಮಗಳನ್ನು ಜಾರಿ ಮಾಡುವುದಿಲ್ಲ ಎಂದು ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಹೇಳಿದ್ದಾರೆ. ಅವರು ತೆಲಂಗಾಣ ವಿಧಾನಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. “ಹೆಚ್ಚಿನ ಪ್ರಮಾಣದ ದಂಡ ವಿಧಿಸುವ ಮೂಲಕ ಜನರಿಗೆ ಕಿರುಕುಳ ನೀಡಲು ಬಯಸುತ್ತಿಲ್ಲ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ