ಪಿಎಂಒ, ಜಡ್ಜ್ ಹೆಸರಲ್ಲೂ ವಂಚಕ ದಂಪತಿ ಕರಾಮತ್ತು
Team Udayavani, Sep 24, 2021, 7:30 AM IST
ಕೊಚ್ಚಿ: ತಿಹಾರ್ ಜೈಲಲ್ಲಿದ್ದುಕೊಂಡೇ 200 ಕೋಟಿ ರೂ.ಹಗರಣ ನಡೆಸಿದ ವಂಚಕ ಸುಕೇಶ್ ಚಂದ್ರಶೇಖರ್ ಮತ್ತು ಆತನ ಪತ್ನಿ ಲೀನಾ ಮರಿಯಾ ಅವರು ಕೇಂದ್ರ ಗೃಹ ಸಚಿವಾಲಯ, ಪ್ರಧಾನಿ ಕಾರ್ಯಾಲಯ ಹಾಗೂ ಸುಪ್ರೀಂ ಕೋರ್ಟ್ ಜಡ್ಜ್ ಯೊಬ್ಬರ ದೂರವಾಣಿ ಸಂಖ್ಯೆಯನ್ನೇ ನಕಲು ಮಾಡಿ ಹಲವರನ್ನು ವಂಚಿಸುತ್ತಿದ್ದ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ.
ಕೇಂದ್ರ ತನಿಖಾ ಸಂಸ್ಥೆ ಸಿಬಿಐ ವರದಿಯಲ್ಲಿ ಈ ಅಂಶ ಉಲ್ಲೇಖೀಸಲಾಗಿದೆ. ಪ್ರಧಾನ ಮಂತ್ರಿಗಳ ಕಚೇರಿ, ಕೇಂದ್ರ ಗೃಹ ಸಚಿವಾ ಲಯ, ಸುಪ್ರೀಂ ಕೋರ್ಟ್ನ ನ್ಯಾಯ ಮೂರ್ತಿಯೊಬ್ಬರ ದೂರವಾಣಿ ಸಂಖ್ಯೆಯನ್ನು ನಕಲು (ಸ್ಪೂಫ್) ಮಾಡಿ, ವಿವಿಧ ಪ್ರಕರಣಗಳಲ್ಲಿ ಸಿಲುಕಿರುವ ಶ್ರೀಮಂತರಿಗೆ ಕರೆ ಮಾಡುತ್ತಿದ್ದರು. ಅನಂತರ ತಮಗಿರುವ ಪ್ರಭಾವ ಬೆಳೆಸಿ ನಿಮ್ಮನ್ನು ಕೇಸಿನಿಂದ ಪಾರು ಮಾಡುವುದಾಗಿ ಹೇಳಿ ನಂಬಿಸುತ್ತಿದ್ದರು.
ಸದ್ಯ ಜೈಲಲ್ಲಿರುವ ಹೈದರಾಬಾದ್ನ ಉದ್ಯಮಿ ಸಾಂಬಶಿವ ರಾವ್ ಅವರನ್ನು ತನಿಖೆಯಿಂದ ಪಾರು ಮಾಡುತ್ತೇವೆ ಎಂದು ಲೀನಾ ಮರಿಯಾ ನಂಬಿಸಿದ್ದಳು. ತನ್ನನ್ನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ನಂಬಿಸಿದ್ದ ಸುಕೇಶ್ ಚಂದ್ರಶೇಖರ್, ಉದ್ಯಮಿಯಿಂದ 3 ಕೋಟಿ ರೂ. ವಸೂಲು ಮಾಡಿದ್ದ. ಸಂಶಯಗೊಂಡ ರಾವ್ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾಗ ಸಿಬಿಐ ಹೆಸರಿನಲ್ಲಿ ವಂಚಿಸಿದ್ದು ದೃಢವಾ ಯಿತು. ಆತ ವಿಶೇಷ ಆ್ಯಪ್ಗ್ಳ ಮೂಲಕ ಪ್ರಮುಖರಿಗೆ ಕರೆಗಳನ್ನು ಮಾಡಿದ್ದಾನೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ