ಆರ್ಥಿಕ ಕೊರತೆ ನಿರ್ವಹಣೆ ಅಭಿವೃದ್ಧಿಗೆ ಪೂರಕ


Team Udayavani, Feb 2, 2018, 6:00 AM IST

artika-korate.jpg

ದೇಶದ ಅಪಾರ ಜನರ ನಿರೀಕ್ಷೆಯಂತೆ ಬಜೆಟ್‌ನಲ್ಲಿ ಜನ ಸಾಮಾನ್ಯರು ಹಾಗೂ ರೈತರ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ದೊರೆತಿದೆ. ಜನರ ಕುಂದುಕೊರತೆಗೆ ಸ್ಪಂದಿಸುವ ಆಶಯವಿರುವ ಆರ್ಥಿಕತೆ ಅಭಿವೃದ್ಧಿಗೆ ಪೂರಕ ಎನಿಸಿದೆ. 15 ವರ್ಷಗಳಿಂದ ದೇಶದ ಆರ್ಥಿಕ ವ್ಯವಸ್ಥೆಯಲ್ಲಿನ ಸುಧಾರಣೆ ಹಂತ ಹಂತವಾಗಿ ನಡೆದಿದ್ದರಿಂದ ತೀವ್ರಗತಿಯಲ್ಲಿ ಅಭಿವೃದ್ಧಿ ಸಾಧಿಸುವುದು ಕಷ್ಟಕರವಾಗಿತ್ತು. ಕಾನೂನು ತೊಡಕು ಹಾಗೂ ಹಣಕಾಸಿನ ಕೊರತೆಯನ್ನು ಸಮತೋಲನದಿಂದ ನಿಭಾಯಿಸಿದಾಗಷ್ಟೇ ಅಭಿವೃದ್ಧಿ ಸಾಧ್ಯ.

ಈ ಬಾರಿಯ ಆಯವ್ಯಯದಲ್ಲಿ “ಆಪರೇಷನ್‌ ಗ್ರೀನ್‌’ ಮೂಲಕ ಮಹತ್ವದ ಕ್ಷೇತ್ರಗಳಾದ ಕೃಷಿ ಆಧಾರಿತ ಉದ್ಯೋಗ ಹಾಗೂ ಸೇವೆಗಳಿಗೆ ಮೀಸಲಿಟ್ಟಿರುವುದರಿಂದ ಕೃಷಿ ಕ್ಷೇತ್ರ ಮುಂಬರುವ ದಿನಗಳಲ್ಲಿ ಶೇ.5ರಷ್ಟು ವಾರ್ಷಿಕ ಬೆಳವಣಿಗೆ ಹೊಂದುವ ನಿರೀಕ್ಷೆ ಇದೆ. ಏಕೆಂದರೆ ರೈತರ ಸಾಲಕ್ಕೆ 11 ಲಕ್ಷ ಕೋಟಿ ರೂ. ಹಾಗೂ ಸುಮಾರು 50,000 ಕೋಟಿ ರೂ. ವೆಚ್ಚದಲ್ಲಿ ಹೈನುಗಾರಿಕೆ, ಮೀನುಗಾರಿಕೆ, ಕ್ಲಸ್ಟರ್‌ ಆಧಾರಿತ ಕೃಷಿ, ತೋಟಗಾರಿಕೆ ಹಾಗೂ ರಫ್ತು ಅಭಿವೃದ್ಧಿಗಾಗಿ ಮೀಸಲಿಟ್ಟಿರುವುದು ಉತ್ತಮವಾಗಿದೆ.

ಎಪಿಎಂಸಿ ಮಾರುಕಟ್ಟೆ, ಗ್ರಾಮೀಣ ಮಾರುಕಟ್ಟೆ ಹಾಗೂ ಮೂಲ ಸೌಕರ್ಯ ಕಾರ್ಯಗಳಿಗೆ ಗಮನ ಹರಿಸುವುದು ಸೂಕ್ತವಾಗಿದೆ. ಸುಮಾರು 50 ಕೋಟಿ ಜನರಿಗೆ ಅನುಕೂಲವಾಗುವಂತೆ ಆರೋಗ್ಯ, ಶಿಕ್ಷಣ, ನೈರ್ಮಲ್ಯ, ಮಳೆ ಹಾಗೂ ಇತರೆ ಕ್ಷೇತ್ರಗಳಿಗೆ ಅನುದಾನ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಒತ್ತು ನೀಡಿರುವುದು ಕಂಡುಬಂದಿದೆ.

ವಾಣಿಜ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಜಿಎಸ್‌ಟಿ ಹಾಗೂ ನೋಟು ಅಮಾನ್ಯದ ಬಳಿಕ ಉದ್ಯಮಗಳ ಆರ್ಥಿಕತೆ ಹಾಗೂ ತೆರಿಗೆ ವ್ಯವಸ್ಥೆಯಲ್ಲಿ ಸಾಕಷ್ಟು ಪಾರದರ್ಶಕತೆ ಬಂದಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆಯಿಂದ ಉದ್ಯಮ ಹಾಗೂ ಜನರ ನಡುವಿನ ಸರ್ಕಾರಿ ತೊಡಕುಗಳು ನಿವಾರಣೆಯಾಗಿವೆ. ಇದರಿಂದ ಉದ್ಯೋಗ ಸೃಷ್ಟಿಗೂ ಸಹಕಾರಿಯಾಗಲಿದೆ. ದೇಶವು ಸುಮಾರು ಶೇ.7.5ರಷ್ಟು ಜಿಡಿಪಿ ಪ್ರಗತಿ ಸಾಧಿಸಲು ಬಜೆಟ್‌ ಸಹಾಯಕವಾಗಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಸಬ್‌ ಅರ್ಬನ್‌ ರೈಲು ಘೋಷಣೆ ಜತೆಗೆ ಹಲವು ಆಧುನೀಕರಣ ಯೋಜನೆಗಳನ್ನು ಘೋಷಿಸಿರುವುದರಿಂದ ಪ್ರಯಾಣಿಕರಿಗೆ ಅನುಕೂಲವಾಗಲಿವೆ. ಮೂಲ ಸೌಕರ್ಯಕ್ಕೆ 5 ಲಕ್ಷ ಕೋಟಿ ರೂ. ಅನುದಾನ ಒದಗಿಸಿರುವುದರಿಂದ ಆರ್ಥಿಕತೆಯಲ್ಲಿ ತ್ವರಿತ ಬೆಳವಣಿಗೆ ಕಾಣುತ್ತಿರುವ ರಾಷ್ಟ್ರಗಳಲ್ಲಿ ಭಾರತ ಐದನೇ ಸ್ಥಾನ ಪಡೆಯಲು ಅನುಕೂಲವಾಗಲಿದೆ. 

ಯುವಜನತೆಗೆ ಕೌಶಲ್ಯ ತರಬೇತಿ ಅಗತ್ಯವಿದ್ದು, ಪ್ರಗತಿಗೆ ಪೂರಕವಾದ ತಂತ್ರಜ್ಞಾನ ಅಳವಡಿಕೆಗೆ ಅಗತ್ಯವಿರುವ ಕೌಶಲ್ಯ ತರಬೇತಿ ನೀಡಲು ಆದ್ಯತೆ ನೀಡಬೇಕು. ಜಾಗತಿಕ ಮಟ್ಟದ ಹಲವು ಸಂಸ್ಥೆಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರುತ್ತಿದ್ದು, ಅದಕ್ಕೆ ಪೂರಕ ಕೌಶಲ್ಯ ತರಬೇತಿ ಒದಗಿಸಬೇಕಿದೆ. ವ್ಯಾಪಾರ, ವಾಣಿಜ್ಯ ವ್ಯವಹಾರದಲ್ಲಿ ಪಾದರ್ಶಕತೆ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಪ್ರಗತಿಗೆ ಅಭಿವೃದ್ಧಿಗೆ ಒತ್ತು ನೀಡಿರುವುದರಿಂದ ಆರ್ಥಿಕ ಪ್ರಗತಿಯು ಶೇ.7.5ರ ಗುರಿ ತಲುಪಲು ಸಾಧ್ಯವಾಗುವ ನಿರೀಕ್ಷೆಯನ್ನು ಆಯವ್ಯಯ ಮೂಡಿಸಿದೆ.

ಟಾಪ್ ನ್ಯೂಸ್

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Bengaluru ಎಷ್ಟೇ ಮಳೆ ಬಂದರೂ ಪಂದ್ಯ ನಡೆಸಬಹುದು; ಏನಿದು ಚಿನ್ನಸ್ವಾಮಿಯ ಸಬ್ ಏರ್ ಸಿಸ್ಟಂ?

Untitled-1

ಪವಿತ್ರಾ – ಚಂದು ಪ್ರೀತಿಯಲ್ಲಿದ್ದರು.. ಆತ ನನ್ನ ಗಂಡ ಎಂದಿದ್ದರಂತೆ ಪವಿತ್ರಾ – ಚಂದು ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್‌ ಮಹಲ್‌ ಪ್ರತಿಸ್ಪರ್ಧಿ

Untitled-1

Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-panaji

Panaji: 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ

Hubli; Government should have woken up after Neha case: Jayamrinthujaya Swamiji

Hubli; ನೇಹಾ ಪ್ರಕರಣದ ಬಳಿಕ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು: ಜಯಮೃಂತ್ಯುಜಯ ಸ್ವಾಮೀಜಿ

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.