
“ದೆಹಲಿಗೆ ತಕ್ಷಣವೇ ಆಕ್ಸಿಜನ್ ಸರಬರಾಜು ಮಾಡಿ, ಇಲ್ಲ ನ್ಯಾಯಾಂಗ ನಿಂದನೆ ಎದುರಿಸಿ”
ಜನ ಸಾಯುತ್ತಿದ್ದರೆ ನಾವು ಕಣ್ಮುಚ್ಚಿ ಕುಳಿತುಕೊಳ್ಳಬೇಕಾ ಎಂದು ಪೀಠ ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿತ್ತು.
Team Udayavani, May 1, 2021, 4:41 PM IST

ನವದೆಹಲಿ: ರಾಷ್ಟ್ರರಾಜಧಾನಿಗೆ ನಿಗದಿಪಡಿಸಿದ 490 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಸರಬರಾಜು ಮಾಡಿ, ಇಲ್ಲದಿದ್ದರೆ ನ್ಯಾಯಾಂಗ ನಿಂದನೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಶನಿವಾರ(ಮೇ 01) ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಇದನ್ನೂ ಓದಿ:ಕೋವಿಡ್ ತುರ್ತು ಪರಿಸ್ಥಿತಿ ಘೋಷಿಸಿ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರ ನಿಯಂತ್ರಣಕ್ಕೆ ಪಡೆಯಲಿ
ಕೇಂದ್ರ ಸರ್ಕಾರ ದೆಹಲಿಗೆ 490 ಮೆಟ್ರಿಕ್ ಟನ್ ಗಳಷ್ಟು ಆಕ್ಸಿಜನ್ ಹಂಚಿಕೆ ಮಾಡಿದೆ, ಅದನ್ನು ನೀವು(ಕೇಂದ್ರ) ಪೂರೈಕೆ ಮಾಡಬೇಕು ಎಂದು ದೆಹಲಿ ಹೈಕೋರ್ಟ್ ಪೀಠ ತಿಳಿಸಿದೆ.
ತಲೆಯ ಮೇಲಿಂದ ಹೆಚ್ಚಿನ ನೀರು ಹರಿದು ಹೋಗಿದೆ, ಅಂದರೆ ಇದೀಗ ವ್ಯವಹಾರ ಎಂಬುದಾಗಿ ಅರ್ಥೈಸುತ್ತೇವೆ. ಇದು ಇನ್ನು ಮುಂದುವರಿಯಬಾರದು ಎಂದು ಜಸ್ಟೀಸ್ ವಿಪಿನ್ ಸಂಘಿ ಮತ್ತು ಜಸ್ಟೀಸ್ ರೇಖಾ ಪಲ್ಲಿ ಅವರಿದ್ದ ಪೀಠ ಈ ರೀತಿ ಪ್ರತಿಪಾದಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಈ ಆದೇಶವನ್ನು ಸೋಮವಾರದವರೆಗೆ ಅಥವಾ ಅರ್ಧ ಗಂಟೆವರೆಗೆ ಮುಂದೂಡಬೇಕೆಂಬ ಕೇಂದ್ರದ ಮನವಿಯನ್ನೂ ಪೀಠ ನಿರಾಕರಿಸಿತ್ತು. ಅಂದರೆ ದೆಹಲಿಯಲ್ಲಿ ಜನ ಸಾಯುತ್ತಿದ್ದರೆ ನಾವು ಕಣ್ಮುಚ್ಚಿ ಕುಳಿತುಕೊಳ್ಳಬೇಕಾ ಎಂದು ಪೀಠ ಕೇಂದ್ರದ ಪರ ವಕೀಲರನ್ನು ಪ್ರಶ್ನಿಸಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India’s first ever ಬುಲೆಟ್ ಟ್ರೈನ್ ಟರ್ಮಿನಲ್ ಅನಾವರಣ ; Video

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್ನಲ್ಲಿ ಏಳು ಮಾದರಿ ಪಾಸಿಟಿವ್

Deepfake ರತನ್ ಟಾಟಾ ಫೋಟೋ ಬಳಕೆ
MUST WATCH
ಹೊಸ ಸೇರ್ಪಡೆ

India’s first ever ಬುಲೆಟ್ ಟ್ರೈನ್ ಟರ್ಮಿನಲ್ ಅನಾವರಣ ; Video

Chennai ದೊರೆಯಲಿದೆ ನಗರ ಪ್ರವಾಹ ನಿಯಂತ್ರಣ ವ್ಯವಸ್ಥೆ :ದೇಶದಲ್ಲಿಯೇ ಮೊದಲ ಬಾರಿಗೆ

South Africa Tour; ಭಾರತೀಯ ತಂಡ ಡರ್ಬಾನ್ಗೆ ಆಗಮನ

Politics: ಶೋಭಾ ಕರಂದ್ಲಾಜೆ, ರಾಜೀವ್ ಚಂದ್ರಶೇಖರ್,ಅರ್ಜುನ್ ಮುಂಡಾಗೆ ಹೆಚ್ಚುವರಿ ಖಾತೆ

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ